ಪುಂಡಾನೆಗಳನ್ನು ಸೆರೆ ಹಿಡಿಯಲು ದಸರಾ ಆನೆಗಳನ್ನು ಕರೆತಂದ ಅರಣ್ಯ ಇಲಾಖೆ
ರಾಮನಗರ, ಆಗಸ್ಟ್.31: ಹಲವು ವರ್ಷಗಳಿಂದ ಆ ಗ್ರಾಮಗಳ ರೈತರು ಕಾಡಾನೆಗಳ ಹಾವಳಿಗೆ ತತ್ತರಿಸಿ ಹೋಗಿದ್ದರು. ಕಾಡಾನೆಗಳ ದಾಳಿಯಿಂದಾಗಿ ಬೆಳೆ ಕಳೆದುಕೊಂಡ ರೈತರು ಪ್ರತಿನಿತ್ಯ ಕಣ್ಣೀರಿಡುತ್ತಿದ್ದರು.ಈ ಬಗ್ಗೆ ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಇದೀಗ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ದಸರಾ ಆನೆಗಳನ್ನು ಬಳಸಿ ಪುಂಡಾನೆಗಳನ್ನು ಸೆರೆ ಹಿಡಿಯಲು ಮುಂದಾಗಿದೆ. ಚನ್ನಪಟ್ಟಣ ತಾಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ತೆಂಗಿನಲ್ಲು, ಕಾಡನಕುಪ್ಪೆ ಸೇರಿದಂತೆ ಹತ್ತಾರು ಹಳ್ಳಿಗಳ ರೈತರ ರಾಗಿ, ಭತ್ತ, ಜೋಳ ಸೇರಿದಂತೆ ಅನೇಕ ಬೆಳೆಗಳನ್ನು ಕಾಡಾನೆಗಳ ಹಿಂಡು ಪದೆ ಪದೇ ದಾಳಿ ನಡೆಸಿ ನಾಶ ಮಾಡುತ್ತಿದ್ದವು.
ಇದರಿಂದ ಪ್ರತಿನಿತ್ಯ ಹತ್ತಕ್ಕೂ ಹೆಚ್ಚು ಗ್ರಾಮಗಳ ರೈತರು ಬೆಳೆಗಳನ್ನು ಉಳಿಸಿಕೊಳ್ಳಲಾಗದೇ ಕಣ್ಣೀರಲ್ಲೇ ಕೈತೊಳೆಯುತ್ತಿದ್ದರು. ಇದೀಗ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಸಾಕನೆಗಳನ್ನು ಬಳಸಿಕೊಂಡು ಪುಂಡಾನೆಗಳ ಸೆರೆಗೆ ಮುಂದಾಗಿದೆ.

ಕಳೆದ ಮೂರು ದಿನಗಳಿಂದ ಪುಂಡಾನೆ ಸೆರೆ ಕಾರ್ಯಚರಣೆ ನಡೆಯುತ್ತಿದ್ದು, ಇಂದು ಶುಕ್ರವಾರ ಕೂಡ ಕಾರ್ಯಚರಣೆ ಮುಂದುವರೆದಿದೆ. ಪುಂಡಾನೆ ಸೆರೆಯಾಗುವವರೆಗೆ ಗ್ರಾಮಸ್ಥರು ಕಾಡಿನ ಅಂಚಿನಲ್ಲಿ ಓಡಾಟ ನಡೆಸದಂತೆ ಡಿಎಫ್ ಓ ಕ್ರಾಂತಿಕುಮಾರ್ ಜನರಲ್ಲಿ ಮನವಿ ಮಾಡಿದರು.
ಅಂದಹಾಗೆ ಪುಂಡಾನೆಗಳು ಚನ್ನಪಟ್ಟಣ ತಾಲೂಕಿನ ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿದ್ದು, ಅವುಗಳಲ್ಲಿ ಪ್ರಮುಖವಾಗಿ ಎರಡು ಕಾಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸರ್ಕಾರದಿಂದ ಅನುಮತಿ ಪಡೆದುಕೊಂಡಿದೆ.

ಹೀಗಾಗಿ ಶುಕ್ರವಾರ ದುಬಾರೆ ಹಾಗೂ ನಾಗರಹೊಳೆ ಆನೆ ಬಿಡಾರದಿಂದ ದಸರಾ ಆನೆಗಳಾದ ಅಭಿಮನ್ಯು, ಬಲರಾಮ, ದ್ರೋಣ ಹಾಗೂ ಹರ್ಷ ಸೇರಿದಂತೆ ಐದು ಆನೆಗಳ ಮೂಲಕ ಪುಂಡಾನೆಗಳ ಸೆರೆಗೆ ಮುಂದಾಗಿದ್ದಾರೆ. ಇನ್ನು ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಮೂರು ಗುಂಪಿನ ಆನೆಗಳಿದ್ದು, ಒಟ್ಟು 17 ಆನೆಗಳು ಸಂಚಾರ ಮಾಡುತ್ತಿವೆ.
ಅರಣ್ಯ ಇಲಾಖೆ ಪುಂಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಗುಂಪು ಗುಂಪಾಗಿರುವಂತಹ ಆನೆಗಳು ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನಿಸಿ ಅತ್ತಿಂದಿತ್ತ ಇತ್ತಿಂದತ್ತ ಸುತ್ತಾಡುತ್ತಿವೆ.

ಇದು ಪುಂಡಾನೆಗಳ ಸೆರೆಗೆ ಮುಂದಾಗಿರುವ ಅರಣ್ಯ ಇಲಾಖೆಗೆ ಹಿನ್ನೆಡೆಯಾಗಿದ್ದು ಗುಂಪಿನಿಂದ ಪುಂಡಾನೆಗಳನ್ನು ಬೇರ್ಪಡಿಸಿ ಸೆರೆ ಹಿಡಿಯುವುದಾಗಿ ಎಸಿಎಫ್ ರಾಮಕೃಷ್ಣ ತಿಳಿಸಿದರು. ದಸರಾ ಆನೆಗಳ ಸಹಾಯದ ಮೂಲಕ ಪುಂಡಾನೆಗಳ ಸೆರೆಗೆ ಮುಂದಾದರೂ ಪ್ರಯೋಜನವಾಗಿಲ್ಲ.
ಕಾರ್ಯಚರಣೆಯಲ್ಲಿ ನಿರತವಾಗಿರುವ ಐದು ಆನೆಗಳನ್ನು ದಸರಾಗೆ ಕಳುಹಿಸಿಕೊಡಬೇಕಿದ್ದು, ಆದಷ್ಟು ಶೀಘ್ರವಾಗಿ ಕಾರ್ಯಾಚರಣೆ ನಡೆಸಿ ಪುಂಡಾನೆಗಳನ್ನು ಸೆರೆ ಹಿಡಿಯಬೇಕಾದ ಒತ್ತಡ ಅರಣ್ಯ ಇಲಾಖೆ ಅಧಿಕಾರಿಗಳ ಮೇಲಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications