ರಾಮನಗರದಲ್ಲಿ ಕಾಡಾನೆಗಳ ದಾಳಿಗೆ ಮಾವಿನ ಮರಗಳು ನಾಶ
ರಾಮನಗರ, ಮೇ 30: ಇತ್ತೀಚಿನ ದಿನಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಕಾಡುಪ್ರಾಣಿಗಳ ದಾಳಿಯಿಂದ ಜನರು ಹೈರಾಣಾಗಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ವೆಂಕಟಪ್ಪನದೊಡ್ಡಿ ಗ್ರಾಮದಲ್ಲಿ ಕಳೆದ ರಾತ್ರಿ ಕಾಡಾನೆಗಳು ದಾಂಗುಡಿ ಇಟ್ಟಿದ್ದವು. ಆನೆಗಳ ಹಿಂಡನ್ನು ಕಾಡಿಗೆ ಓಡಿಸುವಾಗ ನೂರಾರು ಮಾವಿನ ಮರಗಳು ನಾಶವಾಗಿವೆ.
ಚಿರತೆ ಮತ್ತು ಕರಡಿ ದಾಳಿಯ ನಡುವೆ ನಿರಂತರವಾಗಿ ಆನೆ ದಾಳಿಯಿಂದ ರೈತರು ಲಕ್ಷಾಂತರ ರುಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ಬಿಡಿಗಾಸು ಪರಿಹಾರ ನೀಡುತ್ತಿರುವುದು ಆನೆಯ ಹೊಟ್ಟೆಗೆ ಹರೆಕಾಸಿನ ಮಜ್ಜಿಗೆ ಎನ್ನುವಂತಾಗಿ ರೈತರ ಬದುಕು. ಮುತ್ತತ್ತಿ ಅರಣ್ಯ ಪ್ರದೇಶದಿಂದ ಬಂದಿರುವ 20 ಆನೆಗಳ ಹಿಂಡು, ಕಬ್ಬಾಳು ವಲಯದಲ್ಲಿ ಬೀಡು ಬಿಟ್ಟಿದ್ದು, ಪ್ರತಿ ದಿನ ಕಬ್ಬಾಳು ವಲಯದ ಜಮೀನುಗಳಿಗೆ ಲಗ್ಗೆ ಹಿಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡುತ್ತಿವೆ.
ಅರಣ್ಯ ಇಲಾಖೆ ನೀಡುವ ಪರಿಹಾರ ಒಂದು ಮಾವಿನ ಮರಕ್ಕೆ ಕೇವಲ 100 ರಿಂದ 200 ರುಪಾಯಿ ಮಾತ್ರ. ಅದು ಕಚೇರಿ ಅಲೆಯಲು, ಅವರು ಕೇಳುವ ದಾಖಲೆಗಳನ್ನು ಒದಗಿಸಲು ಕೂಡಾ ಹಣ ಸಾಕಾಗುವುದಿಲ್ಲ ಎನ್ನುತ್ತಾರೆ ನೊಂದ ರೈತರು.

ಪ್ರತಿ ವರ್ಷ ಆನೆ ದಾಳಿ ಸಾಮಾನ್ಯವಾಗಿದೆ . ಹಿಂದಿನ ವರ್ಷದಲ್ಲಿ ಆನೆ ದಾಳಿಯಿಂದ ಆದ ಬೆಳೆ ನಷ್ಟ ಪರಿಹಾರ ಇನ್ನೂ ಸಿಕ್ಕಿಲ್ಲ. ಮತ್ತೆ ಗಾಯದ ಮೇಲೆ ಬರೆ ಎಂಬಂತೆ ಇಂದು ನೂರಾರು ಮಾವಿನ ಮರಗಳು ನಾಶವಾಗಿವೆ.
ಇದೇ ರೀತಿ ಮುಂದುವರೆದರೆ ವ್ಯವಸಾಯ ಮಾಡುವುದು ಹೇಗೆ? ಇದ್ದ ಅಲ್ಪ ಸ್ವಲ್ಪ ಜಮೀನಲ್ಲಿ ಸಾಲ ಮಾಡಿ ಮಾಡಿದ ಬೇಸಾಯ, ಆನೆ ದಾಳಿಗೆ ನಾಶವಾಗಿದೆ. ನಾವು ಮುಂದೆ ಜೀವನ ಸಾಗಿಸುವುದು ಹೇಗೆ? ಸರ್ಕಾರ ಸೂಕ್ತ ಪರಿಹಾರ ನೀಡಿದರೆ ಸಹಾಯವಾಗುತ್ತದೆ, ಇಲ್ಲವೆಂದರೆ ಆತ್ಮಹತ್ಯೆ ಒಂದೇ ದಾರಿ ಎಂದು ರೈತರು ಹೇಳುತ್ತಾರೆ.

ಅರಣ್ಯ ಸಿಬ್ಬಂದಿಗಳ ಕೊರತೆಯ ನಡುವೆಯೂ ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದು, ಅರಣ್ಯ ಇಲಾಖೆಗೆ ತಲೆ ನೋವಾಗಿರುವ ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications