ಏರು ಧ್ವನಿಯಲ್ಲಿ ಕೆಮ್ಮಿಕೊಂಡು ಭಾಷಣ ಮಾಡಿದ್ನಲ್ಲಾ, ಅವನ ಯೋಗ್ಯತೆ ನನಗೆ ಗೊತ್ತಿಲ್ಲವೇ: ಎಚ್ಡಿಕೆ ವಾಕ್ ಪ್ರಹಾರ
ರಾಮನಗರ, ಫೆ 26: ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ ಸಮರ ಮುಂದುವರಿದಿದೆ. ಒಂದು ದಿನದ ಹಿಂದೆ ತನ್ನನ್ನು ಟೀಕಿಸಿದ್ದಕ್ಕೆ ಇಂದು ಕುಮಾರಸ್ವಾಮಿ ಏಕವಚನದಲ್ಲಿ ಅವರಿಗೆ ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ, "ಅದೇನೋ ಪ್ರಾಧಿಕಾರ ರಚನೆ ಮಾಡಿದ್ದಾರಂತೆ. ಅಲ್ಲಿ ಕಾಫಿ,ಟೀ ಕೇಳೋಕೂ ಯಾರೂ ಗತಿಯಿಲ್ಲ. ಅವರೇ ದುಡ್ಡು ಕೊಟ್ಟು ಕಾಫಿ ತೆಗೆದುಕೊಳ್ಳಬೇಕು. ನ್ಯಾಯಯುತವಾದ ಕೆಲಸಕ್ಕೆ ಯಾರನ್ನೂ ಆತ ಇಟ್ಟುಕೊಂಡಿಲ್ಲ"ಎಂದು ಯೋಗೇಶ್ವರ್ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು.
"ಅದೇನೋ ಪ್ರವಾಸೋದ್ಯಮ ಇಲಾಖೆಯಂತೆ, ನಿನ್ನೆ ಏರುಧ್ವನಿಯಲ್ಲಿ ಕೆಮ್ಮಿಕೊಂಡು ಕೆಮ್ಮಿಕೊಂಡು ಮಾತನಾಡಿದ್ದಾನೆ. ರಾಮನಗರ, ಚನ್ನಪಟ್ಟಣ, ಮಾಗಡಿ ಬಿಟ್ಟರೆ ಬೇರೆ ಎಲ್ಲೂ ಹೋಗಲ್ಲ. ಪ್ರವಾಸೋದ್ಯಮದ ಬಗ್ಗೆ ನನಗೆ ಪಾಠ ಮಾಡುತ್ತಾನೆ"ಎಂದು ಕುಮಾರಸ್ವಾಮಿ ಏಕವಚನದಲ್ಲಿ ಹರಿಹಾಯ್ದಿದರು.
"ನಾನು ಸಿಎಂ ಆಗಿದ್ದಾಗ ಈ ಭಾಗಕ್ಕೆ ಬರಲಾಗಲಿಲ್ಲ, ಇಡೀ ರಾಜ್ಯದ ಜವಾಬ್ದಾರಿ ಇರುವುದಿಲ್ಲವೇ. ಯಡಿಯೂರಪ್ಪನವರು ಏನು ಶಿಕಾರಿಪುರದಲ್ಲೇ ಠಿಕಾಣಿ ಹೂಡಿದ್ದಾರಾ"ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೆಗಾಸಿಟಿಯಲ್ಲಿ ಸೈಟ್ ಕೊಡಿಸುತ್ತೇನೆ ಎಂದು ಮುಂಡಾಯಿಸಿದ
"ಮೆಗಾಸಿಟಿಯಲ್ಲಿ ಸೈಟ್ ಕೊಡಿಸುತ್ತೇನೆ ಎಂದು ಹೇಳಿ ಎಲ್ಲರಿಗೂ ಮುಂಡಾಯಿಸಿದ, ಕಂಡವರ ದುಡ್ಡು ಲೂಟಿ ಹೊಡೆದ. ನಾನು ಕಾಣದೇ ಇರುವಾ ಮಂತ್ರಿನಾ, ಎಷ್ಟು ಜನರನ್ನು ನಾನು ಮಂತ್ರಿ ಮಾಡಿಲ್ಲ. ಯಾವರೀತಿ ನೀನು ಮಂತ್ರಿಯಾಗಿದ್ದೆಯಾ ಎನ್ನುವುದು ಜನರಿಗೆ ಗೊತ್ತಿದೆ" ಎಂದು ಕುಮಾರಸ್ವಾಮಿ ವಾಕ್ ಪ್ರಹಾರ ನಡೆಸಿದರು.

ಕಾರ್ಯಕರ್ತರು ನನ್ನ ಬಳಿ ಬರುವುದು ನನ್ನ ಮೇಲಿನ ಪ್ರೀತಿಯಿಂದ
"ಕಾರ್ಯಕರ್ತರು ನನ್ನ ಬಳಿ ಬರುವುದು ನನ್ನ ಮೇಲಿನ ಪ್ರೀತಿಯಿಂದ, ಅವನ ಬಳಿಗೆ ಯಾಕೆ ಯಾರೂ ಹೋಗುವುದಿಲ್ಲ. ಚನ್ನಪಟ್ಟಣದಲ್ಲಿ ಯಾರಾದರೂ ಬದುಕುವುದನ್ನು ಕಂಡರೆ, ಅವನ ಬದುಕನ್ನು ಹೇಗೆ ಸರ್ವನಾಶ ಮಾಡಬೇಕು, ಅವನ ಆಸ್ತಿಯನ್ನು ಹೇಗೆ ಲಪಾಟಯಿಸಿಕೊಳ್ಳುವುದು ಇದಷ್ಟೇ ಅವನಿಗೆ ಗೊತ್ತಿರುವುದು"ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ನನ್ನ ವಿರುದ್ದ ಫೈಟ್ ಮಾಡಲು ಅವನಿಗೆ ಸಾಧ್ಯನಾ
"ಚನ್ನಪಟ್ಟಣದಲ್ಲಿ ನನ್ನ ವಿರುದ್ದ ಫೈಟ್ ಮಾಡಲು ಅವನಿಗೆ ಸಾಧ್ಯನಾ. ಮಂಗಳೂರಿನಲ್ಲಿ ಹೋಗಿ ಚನ್ನಪಟ್ಟಣದ ವಿಚಾರ ಮಾತನಾಡುತ್ತಾನೆ, ಅವನಿಗೆ ಬುದ್ದಿ ಬೇಡ್ವಾ. ಈ ಕ್ಷೇತ್ರದ ಬಗ್ಗೆ ಲಘುವಾಗಿ ಮಾತನಾಡಿದ್ದಾನೆ"ಎಂದು ಕುಮಾರಸ್ವಾಮಿ ಹೇಳಿದರು.

ಸಿ.ಪಿ.ಯೋಗೇಶ್ವರ್ ನೇರವಾಗಿ ಎಚ್ಡಿಕೆಗೆ ಟಾಂಗ್
"ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ನಡೆಸಿದ ಕುಮಾರಸ್ವಾಮಿ ಚನ್ನಪಟ್ಟಣ ತಾಲ್ಲೂಕಿನ ಯಾವೊಬ್ಬ ಮುಖಂಡರನ್ನು ಚನ್ನಪಟ್ಟಣ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಮಾಡಿರಲಿಲ್ಲ. ನಾವು ಇದೀಗ ಅಧ್ಯಕ್ಷರನ್ನು ಮಾಡಿದ್ದೇವೆ" ಎಂದು ಸಿ.ಪಿ.ಯೋಗೇಶ್ವರ್ ನೇರವಾಗಿ ಎಚ್ಡಿಕೆಗೆ ಟಾಂಗ್ ನೀಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications