ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಸೋಂಕು ಹೆಚ್ಚಳಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ: ಎಚ್ಡಿಕೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ 19: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.

ಚನ್ನಪಟ್ಟಣದ ಗೋವಿಂದಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಒಂದೇ ದಿನದಲ್ಲಿ 62 ಕೊರೊನಾ ವೈರಸ್ ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಕೊರೊನಾ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಹಿಂದೆಯೇ ಎಚ್ಚರಿಕೆ ನೀಡಿದ್ದೆ. ಅದನ್ನು ಸರ್ಕಾರ ಲಘುವಾಗಿ ಪರಿಗಣಿಸಿದ್ದರಿಂದ ಇದೀಗ ಅನಾಹುತ ಹೆಚ್ಚಾಗುತ್ತಿದೆ ಎಂದರು.

ರೈತರ ಸಾಲ ಮನ್ನಾ ಮಾಡಿದ್ರೂ ಜನ ಕೈ ಹಿಡಿಲಿಲ್ಲ: ಎಚ್ಡಿಕೆ ಬೇಸರರೈತರ ಸಾಲ ಮನ್ನಾ ಮಾಡಿದ್ರೂ ಜನ ಕೈ ಹಿಡಿಲಿಲ್ಲ: ಎಚ್ಡಿಕೆ ಬೇಸರ

ಮುಂಬೈಯಿಂದ ಬಂದ ಇನ್ನೂ 900 ಮಂದಿಯ ಆರೋಗ್ಯ ತಪಾಸಣೆಯ ವರದಿ ಬರಬೇಕಿದೆ. ವರದಿ ಬಂದಾಗ ಇನ್ನೆಷ್ಟು ಜನರಿಗೆ ಕೊರೊನಾ ಪಾಸಿಟಿವ್ ಬರಲಿದೆಯೋ ತಿಳಿಯುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

Former CM HD Kumaraswamy Accused On State Government

ರಾಮನಗರ ಜಿಲ್ಲೆಯು ಮಂಡ್ಯ ಜಿಲ್ಲೆಯ ಗಡಿಯಲ್ಲೇ ಇರುವುದರಿಂದ ಇಲ್ಲಿನ ಅಧಿಕಾರಿಗಳಿಗೆ ಹೇಳಿದ್ದೇನೆ, ಮಂಡ್ಯದಲ್ಲಿ ಅಧಿಕಾರಿಗಳು ಮೈ ಮರೆತಂತೆ ನೀವು ಮೈಮರೆಯಬಾರದು. ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

English summary
Former chief minister HD Kumaraswamy accused the government of neglecting of coronavirus infection increase in the Mandya district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X