'ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಬ್ಬಾಗಿಲನ್ನು ಜನ ಬಂದ್ ಮಾಡುತ್ತಾರೆ'
ರಾಮನಗರ, ಏಪ್ರಿಲ್ 9: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ದ ಕಿಡಿಕಾರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪರ್ವ ಮುಂದುವರಿದಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಬ್ಬಾಗಿಲನಂತಿರುವ ಕರ್ನಾಟಕದಲ್ಲಿ ಬಿಜೆಪಿಗೆ ಜನ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
"ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನಗೊಳಿಸುವಂತಹ ಕುತಂತ್ರವನ್ನು ಬಿಜೆಪಿಯವರು ಮಾಡಿದ್ದರು ಎಂದು ಈ ಹಿಂದೆಯೂ ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ನನ್ನ ಸರಕಾರ ಪತನಗೊಂಡ ಎರಡೇ ತಿಂಗಳಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಎದುರಾಗಿದ್ದರಿಂದ ನಾನು ಮೌನಕ್ಕೆ ಶರಣಾಗಿದ್ದೆ"ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
"ಲಕ್ಷಾಂತರ ಜನರು ಬೀದಿಗೆ ಬಂದರು, ಬೆಳೆ ನಾಶವಾಯಿತು. ಅಂತಹ ಸಂದರ್ಭದಲ್ಲಿ ನನ್ನ ಸರಕಾರವನ್ನು ಪತನಗೊಳಿಸಲಾಯಿತು ಎಂದು ಟೀಕೆ ಮಾಡುತ್ತಾ ಹೋದರೆ, ಸಾರ್ವಜನಿಕರು ಅಪಾರ್ಥ ಮಾಡಿಕೊಳ್ಳಬಾರದು ಎಂದು ಸುಮ್ಮನಾಗಿದ್ದೆ"ಎಂದು ಕುಮಾರಸ್ವಾಮಿ ಅಂದಿನ ಘಟನೆಯನ್ನು ಮೆಲುಕು ಹಾಕಿದರು.

"ಇದಾದ ನಂತರ ಕೋವಿಡ್ ಅನಾಹುತ ಆರಂಭವಾಯಿತು, ಆಗಲೂ, ಸರಕಾರ ಸರಿಯಾದ ದಾರಿಯಲ್ಲಿ ನಡೆಯಲಿ ಎಂದು ಅವಕಾಶವನ್ನು ಕೊಟ್ಟೆವು. ಕೋವಿಡ್ ಅನ್ನು ಸರಕಾರ ಯಾವರೀತಿ ನಿಭಾಯಿಸಿತು ಎನ್ನುವ ಚರ್ಚೆಗೆ ನಾನು ಹೋಗುವುದಿಲ್ಲ. ಈಗ ತಮ್ಮ ಅಂಗ ಪಕ್ಷಗಳ ಮೂಲಕ ನಾಡಿನಲ್ಲಿ ಸಾಮರಸ್ಯ ಕದಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ"ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.
"ಕಾಂಗ್ರೆಸ್ಸಿನವರು ಧ್ವನಿ ಎತ್ತದೇ ಇದ್ದಿದ್ದರಿಂದ ನಾನು ಮಾತಾಡಬೇಕಾಗಿ ಬಂದಿದೆ. ನಮ್ಮ ಮೌನವನ್ನು ಬಿಜೆಪಿಯವರು ದುರುಪಯೋಗ ಪಡಿಸಿಕೊಂಡರೆ, ಜನರಿಗೆ ಏನೆಂದು ನಾನು ಉತ್ತರ ಕೊಡಲಿ. ಹಿಜಾಬ್, ಜಟ್ಕಾ, ಹಲಾಲ್ ಮುಂತಾದ ವಿಚಾರಗಳು ಬಿಜೆಪಿಗೆ ತಿರುಗುಬಾಣವಾಗಲಿದೆ"ಎಂದು ಕುಮಾರಸ್ವಾಮಿ ಎಚ್ಚರಿಸಿದರು.
"ಈಗ ನಡೆಯುತ್ತಿರುವ ಎಲ್ಲಾ ವಿದ್ಯಮಾನಗಳು ಬಿಜೆಪಿಗೆ ನಷ್ಟ ತಂದೊಡ್ಡಲಿದೆ ಎನ್ನುವುದು ಸ್ಪಷ್ಟ. ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಎಂದೇನು ಕರ್ನಾಟಕವನ್ನು ಕರೆಯುತ್ತಿದ್ದಾರೋ ಅದು ಬಂದ್ ಆಗಲಿದೆ"ಎಂದು ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.
-
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications