ಎಂಎಲ್ಸಿ ಯೋಗೇಶ್ವರ್ಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ
ರಾಮನಗರ, ಜನವರಿ 6: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಏನೋ ಮಾಡುತ್ತೇನೆ ಅಂತ ಹೋದರು, ಆದರೆ ಏನೂ ಮಾಡಲಿಕ್ಕೆ ಆಗಲಿಲ್ಲ ಎಂದು ಹೆಸರು ಹೇಳದೇ ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಅವರಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು.
ರಾಮನಗರದಲ್ಲಿ ಹೇಳಿಕೆ ನೀಡಿದ ಮಾಜಿ ಸಿಎಂ ಎಚ್ಡಿಕೆ, ""ನಾನು ಇವತ್ತು ಮಂತ್ರಿ ಆಗುತ್ತೇನೆ, ನಾಳೆ ಮಂತ್ರಿ ಆಗುತ್ತೇನೆ ಅಂತಾ ಹೇಳಿ ಜನರನ್ನು ಸೆಳೆಯುತ್ತಿದ್ದಾರೆ. ತಾಲ್ಲೂಕಿನ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುವುದಕ್ಕೆ ಲೆಟರ್ ಹೆಡ್ ಆ್ಯಕ್ಷನ್ ಹಾಕಿಕೊಂಡು ಕೂತಿದ್ದಾರೆ'' ಎಂದು ಲೇವಡಿ ಮಾಡಿದರು.
ಈ ರೀತಿ ಹಣ ಸಂಪಾದನೆ ಮಾಡಲು ಅವಶ್ಯಕತೆ ಇದೆಯಾ?, ಇಲ್ಲಿನ ಪಿಎಸ್ಐ ವರ್ಗಾವಣೆಗೆ 30 ಲಕ್ಷ ರುಪಾಯಿ ಹಣ ಬೇಡಿಕೆ ಇಟ್ಟಿದ್ದಾರೆ. 30 ಲಕ್ಷ ಹಣ ಕೊಟ್ಟು ಬಂದರೆ ಪಿಎಸ್ಐ ಜನರ ಜೀಬಿಗೆ ಕೈ ಹಾಕಬೇಕು, ಇದನ್ನು ಬಿಟ್ಟು ಯೋಗೇಶ್ವರ್ ಜೇಬಿಗೆ ಕೈ ಹಾಕ್ತಾನಾ ಎಂದು ಕಿಡಿಕಾರಿದರು.

ಜೀವನದಲ್ಲಿ ಮನುಷ್ಯನಿಗೆ ಹಣ ಬೇಕು, ಹಾಗಂತ ಹಗಲು ದರೋಡೆ ಮಾಡಬಾರದು. ಈ ತರ ಮಾಡಿಕೊಂಡು ಇರುವುದಕ್ಕಿಂತ ಗೌರವಯುತವಾಗಿ ರಾಜಕೀಯ ಬಿಟ್ಟು ಮನೆಯಲ್ಲಿ ಇರುವುದು ಒಳ್ಳೆಯದು ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಚನ್ನಪಟ್ಟಣ ಶಾಸಕರಾಗಿರುವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಜೆಡಿಎಸ್ ಶಾಸಕರನ್ನ ಸೆಳೆಯುವ ಕೆಲಸ ಕಳೆದ ಎರಡು ವರ್ಷಗಳಿಂದಲೂ ನಡೆಯುತ್ತಲೇ ಇದೆ. ಈ ಹಿಂದೆ ದೇವೇಗೌಡರ ಕಾಲದಲ್ಲಿ ಕೂಡ ಶಾಸಕರ ರಾಜೀನಾಮೆ ಕೊಡಿಸುವ ಕೆಲಸ ನಡೆದಿತ್ತು. ಆದರೆ ಮತ್ತೆ ನಾವು ಗೆದ್ದು ಅಧಿಕಾರಕ್ಕೆ ಬಂದಿದ್ದೇವು ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದವರು ನಮ್ಮ ಶಾಸಕರನ್ನು ಯಾಕೆ ಸೆಳೆಯುತ್ತಾರೆ? ಅವರಿಗೆ ಆ ಶಕ್ತಿ ಇಲ್ಲ, ಹಾಗಾಗಿ ತಮ್ಮ ಶಕ್ತಿ ವೃದ್ಧಿ ಮಾಡಿಕೊಳ್ಳಲು ಈ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಾರೆ ಎಂದು ಹರಿಹಾಯ್ದರು.
ನಾನು ಯಾವತ್ತೂ ಯಾರ ಮನೆ ಬಾಗಿಲಿಗೂ ಹೋಗಿ ನಮ್ಮ ಪಕ್ಷಕ್ಕೆ ಬನ್ರಪ್ಪ ಅಂತಾ ಯಾರನ್ನು ಕರೆದಿಲ್ಲ. ರಾಜ್ಯದ ಜನತೆಯ ಕಷ್ಟ-ಸುಖ ಗಳಿಗೆ ಸ್ಪಂದನೆ ಮಾಡುವ ಯಾರಾದರೂ ನಮ್ಮ ಪಕ್ಷಕ್ಕೆ ಬಂದರೆ ನಾನು ಆಹ್ವಾನ ನೀಡುತ್ತೇನೆ ಎಂದರು.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಬೆಳೆಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಸಂಕ್ರಾಂತಿ ಹಬ್ಬದ ದಿನದಂದು ಹೊಸ ರಾಜಕೀಯಕ್ಕೆ ಚಾಲನೆ ಕೊಡುತ್ತಿದ್ದೇನೆ ಎಂದು ರಾಮನಗರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications