ಕನಕಪುರಕ್ಕೆ ಮೆಡಿಕಲ್ ಕಾಲೇಜು ತರುವ ಶಕ್ತಿ ಇಲ್ವಾ, ಡಿಕೆ ಸಹೋದರರು ಅಷ್ಟೊಂದು ಅಸಹಾಯಕರಾ?-ಅಶ್ವತ್ಥ್ ನಾರಾಯಣ್
ರಾಮನಗರ, ಸೆಪ್ಟೆಂಬರ್ 07: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳೆದ 9 ವರ್ಷಗಳಲ್ಲಿ ಇಡೀ ದೇಶದಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಮೋದಿ ಅವರ ಅಭಿವೃದ್ಧಿ ಸಾಧನೆಗಳನ್ನು ಪ್ರತಿ ಮನೆಗೂ ತಲುಪಿಸುವ ಕೆಲಸ ಆಗಲಿದೆ. ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಕೈಗಾರಿಕೆ, ರೇಷ್ಮೆ, ಹೈನುಗಾರಿಕೆಗೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಾತನಾಡಿದ ಅವರು, ಕೆಂಗಲ್ ಹನುಂತಯ್ಯ ಹೆಸರಿನಲ್ಲಿ ರಾಜೀವ್ ಗಾಂಧಿ ಹೆಲ್ತ್ ವಿವಿ ನಿರ್ಮಾಣ ಆಗಲಿದೆ. 700 ಕೋಟಿ ರೂ ವೆಚ್ಚದಲ್ಲಿ ರಾಜೀವ್ ಗಾಂಧಿಗೆ ವಿವಿಗೆ ಭೂಮಿ ಪೂಜೆ ಮಾಡಲಾಗಿದೆ. ಶ್ರೀರಂಗ ಯೋಜನೆ ಸತ್ತೆಗಾಲ, ಕಾವೇರಿ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಹಲವು ಅಡೆ ತಡೆಗಳಾಗಿವೆ ಎಂದು ಹೇಳಿದರು.

ರಾಜೀವ್ ಗಾಂಧಿ ವಿವಿಯ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಕಳ್ಳತನದ ದಾರಿಯಲ್ಲಿ ಕನಕಪುರಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ಜಿಲ್ಲೆಯ ಸಹೋದರರು ಮಾಡುತ್ತಿರುವ ಕೆಲಸಕ್ಕೆ ಕನಕಪುರದ ಜನರೇ ಒಪ್ಪುವುದಿಲ್ಲ. ಡಿ.ಕೆ ಶಿವಕುಮಾರ್ ಡಿಸಿಎಂ ಆಗಿದ್ದಾರೆ. ಹೀಗಿರುವಾಗ ಬೇಕಾದರೆ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋಗಲಿ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದನ್ನು ಜನ ಸಹಿಸಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ರಾಜೀವ್ ಗಾಂಧಿ ವಿವಿ ಸರ್ಕಾರದ್ದು ಅಲ್ಲ. ಅದೊಂದು ಸ್ವಾಯುತ್ತ ಸಂಸ್ಥೆ. ಈ ರೀತಿ ಮಾಡುವುದನ್ನು ಕನಕಪುರದ ಜನರು ಕೂಡ ಒಪ್ಪುತ್ತಿಲ್ಲ. ರಾಮನಗರ ಬಂದ್ಗೆ ನನ್ನ ಬೆಂಬಲ ಕೂಡ ಇದೆ. ಪಕ್ಷಾತೀತವಾಗಿ ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕನಕಪುರಕ್ಕೆ ಮೆಡಿಕಲ್ ಕಾಲೇಜು ಕೊಡುವಂತಹ ಶಕ್ತಿ ಇಲ್ವ..? ಅಷ್ಟೊಂದು ಅಸಾಹಯಕರಾಗಿದ್ದಾರಾ ಡಿ.ಕೆ ಸಹೋದರರು..? ಎಂದು ವ್ಯಂಗ್ಯವಾಡಿದ್ದಾರೆ.
ಡಿ.ಕೆ ಶಿವಕುಮಾರ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗುವ ಬದಲು ಬೆಂಗಳೂರಿಗೆ ಬಂದಿದ್ದಾರೆ. ಜಿಲ್ಲೆಯಲ್ಲಿ ಏನು ಕೆಲಸ ಮಾಡಿದ್ದಾರೆ ಅಂತಾ ಹೇಳಬೇಕು ಅಲ್ವಾ. ಕನಕಪುರ ಅತ್ಯಂತ ಹಿಂದುಳಿದ ತಾಲೂಕು. ರಾಮನಗರ ಬಿಟ್ಟು ಯಾಕೆ ಬೆಂಗಳೂರಿಗೆ ಹೋಗಿದ್ದಾರೆ. ರಾಮನಗರ ಜನ ನಿಮಗೆ ಶಕ್ತಿ ನೀಡಿದ್ದಾರೆ ಅಲ್ವಾ ರಾಮನಗರ ಬಿಟ್ಟು ಒಡೋಗಿದ್ದೀರಾ..? ಎಂದು ಪ್ರಶ್ನಿಸಿದರು.

ರಾಮನಗರ ಶಾಸಕ ಬದುಕಿದ್ದಾನಾ ಎನ್ನುವ ಪ್ರಶ್ನೆ ಇದೆ. ರಾಮನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರೋದು ಕಾಣ್ತಾ ಇಲ್ವಾ..? ರಾಮನಗರ ಶಾಸಕ ಎಲ್ಲಿದ್ದಾನೆ ಹಿಡಿದುಕೊಂಡು ಬನ್ನಿ. ರಾಮನಗರಕ್ಕೆ ಅನ್ಯಾಯ ಆಗುತ್ತಿರುವುದು ಇರೋದು ರಾಮನಗರ ಶಾಸಕನಿಗೆ ಗೊತ್ತಾಗುತ್ತಿಲ್ಲವೇ..? ಎಂದು ಕಿಡಿಕಾರಿದ್ದಾರೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications