ಕನಕಪುರಕ್ಕೆ ಮೆಡಿಕಲ್ ಕಾಲೇಜು ತರುವ ಶಕ್ತಿ ಇಲ್ವಾ, ಡಿಕೆ ಸಹೋದರರು ಅಷ್ಟೊಂದು ಅಸಹಾಯಕರಾ?-ಅಶ್ವತ್ಥ್ ನಾರಾಯಣ್
ರಾಮನಗರ, ಸೆಪ್ಟೆಂಬರ್ 07: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳೆದ 9 ವರ್ಷಗಳಲ್ಲಿ ಇಡೀ ದೇಶದಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಮೋದಿ ಅವರ ಅಭಿವೃದ್ಧಿ ಸಾಧನೆಗಳನ್ನು ಪ್ರತಿ ಮನೆಗೂ ತಲುಪಿಸುವ ಕೆಲಸ ಆಗಲಿದೆ. ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಕೈಗಾರಿಕೆ, ರೇಷ್ಮೆ, ಹೈನುಗಾರಿಕೆಗೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಾತನಾಡಿದ ಅವರು, ಕೆಂಗಲ್ ಹನುಂತಯ್ಯ ಹೆಸರಿನಲ್ಲಿ ರಾಜೀವ್ ಗಾಂಧಿ ಹೆಲ್ತ್ ವಿವಿ ನಿರ್ಮಾಣ ಆಗಲಿದೆ. 700 ಕೋಟಿ ರೂ ವೆಚ್ಚದಲ್ಲಿ ರಾಜೀವ್ ಗಾಂಧಿಗೆ ವಿವಿಗೆ ಭೂಮಿ ಪೂಜೆ ಮಾಡಲಾಗಿದೆ. ಶ್ರೀರಂಗ ಯೋಜನೆ ಸತ್ತೆಗಾಲ, ಕಾವೇರಿ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಹಲವು ಅಡೆ ತಡೆಗಳಾಗಿವೆ ಎಂದು ಹೇಳಿದರು.

ರಾಜೀವ್ ಗಾಂಧಿ ವಿವಿಯ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಕಳ್ಳತನದ ದಾರಿಯಲ್ಲಿ ಕನಕಪುರಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ಜಿಲ್ಲೆಯ ಸಹೋದರರು ಮಾಡುತ್ತಿರುವ ಕೆಲಸಕ್ಕೆ ಕನಕಪುರದ ಜನರೇ ಒಪ್ಪುವುದಿಲ್ಲ. ಡಿ.ಕೆ ಶಿವಕುಮಾರ್ ಡಿಸಿಎಂ ಆಗಿದ್ದಾರೆ. ಹೀಗಿರುವಾಗ ಬೇಕಾದರೆ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋಗಲಿ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದನ್ನು ಜನ ಸಹಿಸಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ರಾಜೀವ್ ಗಾಂಧಿ ವಿವಿ ಸರ್ಕಾರದ್ದು ಅಲ್ಲ. ಅದೊಂದು ಸ್ವಾಯುತ್ತ ಸಂಸ್ಥೆ. ಈ ರೀತಿ ಮಾಡುವುದನ್ನು ಕನಕಪುರದ ಜನರು ಕೂಡ ಒಪ್ಪುತ್ತಿಲ್ಲ. ರಾಮನಗರ ಬಂದ್ಗೆ ನನ್ನ ಬೆಂಬಲ ಕೂಡ ಇದೆ. ಪಕ್ಷಾತೀತವಾಗಿ ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕನಕಪುರಕ್ಕೆ ಮೆಡಿಕಲ್ ಕಾಲೇಜು ಕೊಡುವಂತಹ ಶಕ್ತಿ ಇಲ್ವ..? ಅಷ್ಟೊಂದು ಅಸಾಹಯಕರಾಗಿದ್ದಾರಾ ಡಿ.ಕೆ ಸಹೋದರರು..? ಎಂದು ವ್ಯಂಗ್ಯವಾಡಿದ್ದಾರೆ.
ಡಿ.ಕೆ ಶಿವಕುಮಾರ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗುವ ಬದಲು ಬೆಂಗಳೂರಿಗೆ ಬಂದಿದ್ದಾರೆ. ಜಿಲ್ಲೆಯಲ್ಲಿ ಏನು ಕೆಲಸ ಮಾಡಿದ್ದಾರೆ ಅಂತಾ ಹೇಳಬೇಕು ಅಲ್ವಾ. ಕನಕಪುರ ಅತ್ಯಂತ ಹಿಂದುಳಿದ ತಾಲೂಕು. ರಾಮನಗರ ಬಿಟ್ಟು ಯಾಕೆ ಬೆಂಗಳೂರಿಗೆ ಹೋಗಿದ್ದಾರೆ. ರಾಮನಗರ ಜನ ನಿಮಗೆ ಶಕ್ತಿ ನೀಡಿದ್ದಾರೆ ಅಲ್ವಾ ರಾಮನಗರ ಬಿಟ್ಟು ಒಡೋಗಿದ್ದೀರಾ..? ಎಂದು ಪ್ರಶ್ನಿಸಿದರು.

ರಾಮನಗರ ಶಾಸಕ ಬದುಕಿದ್ದಾನಾ ಎನ್ನುವ ಪ್ರಶ್ನೆ ಇದೆ. ರಾಮನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರೋದು ಕಾಣ್ತಾ ಇಲ್ವಾ..? ರಾಮನಗರ ಶಾಸಕ ಎಲ್ಲಿದ್ದಾನೆ ಹಿಡಿದುಕೊಂಡು ಬನ್ನಿ. ರಾಮನಗರಕ್ಕೆ ಅನ್ಯಾಯ ಆಗುತ್ತಿರುವುದು ಇರೋದು ರಾಮನಗರ ಶಾಸಕನಿಗೆ ಗೊತ್ತಾಗುತ್ತಿಲ್ಲವೇ..? ಎಂದು ಕಿಡಿಕಾರಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications