ಕನಕಪುರದ ಸ್ವಗ್ರಾಮದಲ್ಲಿ ನೆರವೇರಿದ ರಾಜಶೇಖರನ್ ಅಂತ್ಯಕ್ರಿಯೆ
ರಾಮನಗರ, ಏಪ್ರಿಲ್ 13: ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದ ಕೇಂದ್ರ ಮಾಜಿ ಸಚಿವ ಎಂ. ವಿ. ರಾಜಶೇಖರನ್ ಅವರ ಅಂತ್ಯಸಂಸ್ಕಾರವು ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮದಲ್ಲಿ ನೆರವೇರಿತು.
ಅವರ ಸ್ವಗ್ರಾಮವಾದ ಕನಕಪುರ ತಾಲೂಕಿನ ದೊಡ್ಡ ಮರಳವಾಡಿಯ ದೇವರಹಳ್ಳಿ ರಸ್ತೆಯಲ್ಲಿನ ತೋಟದಲ್ಲಿ ಅವರ ಅಂತ್ಯಕ್ರಿಯೆಯು ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಅಂತ್ಯಕ್ರಿಯೆಯಲ್ಲಿ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಎಂಎಲ್ಸಿ ಸಿ.ಎಂ ಲಿಂಗಪ್ಪ, ಕೆಪಿಸಿಸಿ ಸದಸ್ಯ ಜಿಯಾವುಲ್ಲಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಜಿಲ್ಲೆಯ ಹಲವು ಮಠಾಧೀಶರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.












Click it and Unblock the Notifications