ಟೊಯೊಟಾ ಕಾರ್ಮಿಕರ ಬಿಕ್ಕಟ್ಟು; ಸರ್ಕಾರದ ಹಸ್ತಕ್ಷೇಪಕ್ಕೆ ಹೆಚ್ಚಾದ ಒತ್ತಾಯ
ರಾಮನಗರ, ಡಿಸೆಂಬರ್ 06: ಟೊಯೊಟಾ ಕಿರ್ಲೋಸ್ಕರ್ ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವಿನ ಬಿಕ್ಕಟ್ಟು ತೀವ್ರ ಸ್ವರೂಪ ಪಡೆಯುತ್ತಿದ್ದರೂ ಸರ್ಕಾರ ಬಿಕ್ಕಟ್ಟು ಶಮನಕ್ಕೆ ಮುಂದಾಗದಿರುವುದು ಖಂಡನೀಯ. ತಕ್ಷಣವೇ ಸರ್ಕಾರ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳದಲ್ಲೇ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಮಾಗಡಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಮುಖಂಡ, ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಬಿಡದಿಯ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಟೊಯೊಟಾ ಆಡಳಿತ ಮಂಡಳಿಯ ಧೋರಣೆ ಖಂಡಿಸಿ ಕಾರ್ಮಿಕರು ಧರಣಿ ಪ್ರಾರಂಭಿಸಿ ತಿಂಗಳು ಕಳೆಯುತ್ತಿದ್ದರೂ ಕಾರ್ಮಿಕರ ನೆರವಿಗೆ ಸರ್ಕಾರ ಬರುತ್ತಿಲ್ಲ ಎಂದು ಕಿಡಿಕಾರಿದರು. ಮುಂದೆ ಓದಿ...

"ಸರ್ಕಾರ ಏನು ಮಾಡುತ್ತಿದೆ?"
ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಕಾರ್ಮಿಕ ಇಲಾಖೆ ಕೇವಲ ಸರ್ಕಾರ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ನಡೆಸಿದರೆ ಕಾರ್ಮಿಕ ಸಮಸ್ಯೆ ಇತ್ಯರ್ಥ ಅಗುವುದಿಲ್ಲ. ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಬಂದು ಕಂಪನಿಯ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಸಭೆ ನಡೆಸಿ, ಎಲ್ಲಾ ಸಮಸ್ಯೆ ನಿವಾರಿಸಿ ಕಾರ್ಖಾನೆ ಪ್ರಾರಂಭಿಸಿ ಎಂದು ಸರ್ಕಾರವನ್ನು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಒತ್ತಾಯಿಸಿದರು.

ಕಂಪನಿ ಧೋರಣೆಗೆ ಕಾರ್ಮಿಕರ ಖಂಡನೆ
ಅಶಿಸ್ತು ಆರೋಪ ಹೊರಿಸಿ ವಿಚಾರಣೆ ಕಾಯ್ದಿರಿಸುವಂತೆ ಅಮಾನತು ನೋಟೀಸ್ ಜಾರಿ ಮಾಡಿರುವ ಟಿಕೆಎಂ ನಡೆ ಮುಷ್ಕರ ನಿರತ ಕಾರ್ಮಿಕರನ್ನು ಇನ್ನಷ್ಟು ಕೆರಳಿಸಿದೆ. ಇದರಿಂದ ಕಂಪನಿ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವಿನ ಬಾಂಧವ್ಯ ಮತ್ತಷ್ಟು ಕುಸಿದಂತಾಗಿದೆ. ಕಂಪನಿ ಮೇಲಿಂದ ಮೇಲೆ ಕಠಿಣ ಕ್ರಮಗಳನ್ನು ಅನುಸರಿಸುತ್ತಿದ್ದರೂ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನಾ ಧರಣಿ ಮುಂದುವರೆಸಿದ್ದಾರೆ.

ಮತ್ತೆ 20 ಮಂದಿ ಅಮಾನತು ಮಾಡಿದ ಕಂಪನಿ
ಇತ್ತ ಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಕಂಪನಿ ಮುಂದುವರೆಸಿದ್ದು, ಇದೀಗ ಮತ್ತೆ 20 ಮಂದಿ ಕಾರ್ಮಿಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ನ್ಯಾಯಯುತ ಹೋರಾಟ ನಡೆಸುತ್ತಿರುವ ಕಾರ್ಮಿಕರನ್ನು ದಮನ ಮಾಡಲು ಹೊರಟಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ನಡೆಯನ್ನು ಟಿ.ಕೆ.ಎಂ ಕಾರ್ಮಿಕರ ಸಂಘ ತೀವ್ರವಾಗಿ ಖಂಡಿಸಿದೆ.
Recommended Video

ನವೆಂಬರ್ 9ರಿಂದ ನಡೆಯುತ್ತಿರುವ ಧರಣಿ
ಕೆಲ ಕಾರಣ ನೀಡಿ ಕಾರ್ಮಿಕರನ್ನು ಅಮಾನತಿನಲ್ಲಿಡಲಾಗಿದ್ದು ಲಾಕೌಟ್ ಘೋಷಿಸಿ ಕಾರ್ಮಿಕರನ್ನು ಹೊರಗಿಡಲಾಗಿದೆ. ಈವರೆಗೆ ಒಟ್ಟು 60 ಕಾರ್ಮಿಕರನ್ನು ಅಮಾನತು ಮಾಡಿ ಕಂಪನಿ ಕಾರ್ಮಿಕರ ಧರಣಿ ಹತ್ತಿಕ್ಕಲು ಮುಂದಾಗಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಕಳೆದ ನ.9 ರಿಂದಲೂ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications