ಅಧಿಕ ಬಡ್ಡಿ ಅಮಿಷ: ರಾಮನಗರ ಜಿಲ್ಲೆಯ ನೂರಾರು ಜನರ ಬಳಿ ಕೋಟ್ಯಂತರ ರೂ. ಲಪಟಾಯಿಸಿದ ಖಾಸಗಿ ಬ್ಯಾಂಕ್
ರಾಮನಗರ, ಜನವರಿ, 27: ಪಂಚವಟಿ ಮಲ್ಟಿ ಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಸಿಬ್ಬಂದಿ ರಾಷ್ಟ್ರೀಕೃತ ಬ್ಯಾಂಕ್ಗಳಿಗಿಂತ ಹೆಚ್ವಿನ ಬಡ್ಡಿ ನೀಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ಲಪಟಾಯಿಸುರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಅದರ ಅಧ್ಯಕ್ಷರು ಕೋಟಿಗಟ್ಟಲೆ ಠೇವಣಿ ಸಂಗ್ರಹಿಸಿ ರಾತ್ರೋರಾತ್ರಿ ಬ್ಯಾಂಕ್ ಬಾಗಿಲು ಬಂದ್ ಮಾಡಿದ್ದಾರೆ ಎಂದು ಠೇವಣಿದಾರರು ಆರೋಪಿಸಿದ್ದಾರೆ. ಹಾಗೆಯೇ ಪಂಚವಟಿ ಮಲ್ಟಿ ಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಅದರ ಅಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲಾಗಿದೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು?: ಸಿ.ಪಿ.ಯೋಗೇಶ್ವರ್ ಪ್ರಶ್ನೆ
ನೂರಾರು ಜನರಿಂದ ಠೇವಣಿ ಕಟ್ಟಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಪಂಚವಟಿ ಮಲ್ಟಿ ಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ವಿರುದ್ಧ ರಾಮನಗರದಲ್ಲಿ ಷೇರುದಾರರು ದೂರು ನೀಡಿದ್ದರು. ಷೇರುದಾರರು ನೀಡಿದ ದೂರಿನ ಮೇರೆಗೆ ನಗರದ ಐಜೂರು ಬಡಾವಣೆಯಲ್ಲಿರು ಬ್ಯಾಂಕ್ ಕಛೇರಿಯ 8 ಸಿಬ್ಬಂದಿಯ ವಿರುದ್ಧ ನಗರದ ಸೈಬರ್ ಕ್ರೈ ಪೊಲೀಸ್ ಠಾಣೆಯಲ್ಲಿ ಎಫಐಆರ್ ದಾಖಲಾಗಿದೆ.

ಕೋಟ್ಯಂತರ ರೂ. ದೋಚಿ ಪರಾರಿ
ಠೇವಣಿ ಹಣಕ್ಕೆ ಇತರೆ ರಾಷ್ಟ್ರೀಕೃತ ಬ್ಯಾಂಕ್ಗಳಿಗಿಂತಲೂ ಹೆಚ್ಚಿನ ಬಡ್ಡಿ ದರ ನೀಡುವುದಾಗಿ ಜನರಿಂದ ಠೇವಣಿ ಸಂಗ್ರಹಿಸಿದ್ದಾರೆ. ಸುಮಾರು 35 ಲಕ್ಷಕ್ಕೂ ಹೆಚ್ವಿನ ಹಣವನ್ನು ಷೇರುದಾರರಿಗೆ ಹಿಂತಿರುಗಿಸದೆ ವಂಚನೆ ಮಾಡಿದ್ದಾರೆ ಎಂದು 11 ಮಂದಿ ಬ್ಯಾಂಕ್ ಷೇರುದಾರರು ದೂರು ನೀಡಿದ್ದರು. ಇವರ ದೂರಿನ ಮೇರೆಗೆ ಬ್ಯಾಂಕ್ನ ಅಧ್ಯಕ್ಷ ರಾಜು, ಕಾರ್ಯದರ್ಶಿ ಭೈರಲಿಂಗಯ್ಯ ನಿರ್ದೇಶಕ ಹರೀಶ್ , ಲಿಂಗರಾಜು, ಸುರೇಶ್, ಬಸವಚಾರ್, ಚಂದ್ರಶೇಖರ್ ಸೇರಿದಂತೆ 8 ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ.

ಬ್ಯಾಂಕ್ನ ಕಛೇರಿ ಮೇಲೆ ಪೊಲೀಸರ ದಾಳಿ
ನಂತರ ದೂರು ದಾಖಲಿಸಿಕೊಂಡ ನಗರದ ಸೈಬರ್ ಕ್ರೈಮ್ ಪೋಲಿಸರು, ಐಜೂರು ಬಡಾವಣೆಯಲ್ಲಿರುವ ಪಂಚವಟಿ ಮಲ್ಟಿ ಸ್ಟೈಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಕಛೇರಿ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲವೊಂದು ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ವಂಚನೆ ಪ್ರಕರಣ ಬಯಲಾಗಿದ್ದು ಹೇಗೆ?
ದೂರುದಾರರು ನೀಡಿರುವ ದೂರಿನಲ್ಲಿ ಪಂಚವಟಿ ಮಲ್ಟಿ ಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣ ಬಹು ಕೋಟಿ ವಂಚನೆ ಪ್ರಕರಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕುದೂರುಗಳಲ್ಲೂ ಇದ್ದ ಬ್ಯಾಂಕ್ ಕಛೇರಿಗಳು ಬಾಗಿಲು ಬಂದ್ ಮಾಡಿದೆ. ಅಲ್ಲದೇ ಹೊರ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಗೋವಾದಲ್ಲೂ ತಮ್ಮ ಜಾಲವನ್ನು ಬೀಸಿದ್ದಾರೆ ಎನ್ನಲಾಗಿದೆ.

ಸುಮಾರು 35 ಲಕ್ಷ ರೂ. ವಂಚನೆ
ಪಂಚವಟಿ ಮಲ್ಟಿ ಸ್ಟೈಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ರಾಮನಗರ ಕಛೇರಿ ಒಂದರಲ್ಲೇ 11 ಮಂದಿ ಷೇರುದಾರಿಗೆ ಸುಮಾರು 35 ಲಕ್ಷ ರೂಪಾಯಿ ವಂಚನೆ ಎಸಗಿದೆ ಎನ್ನಲಾಗಿದೆ. ಇನ್ನೂ ರಾಜ್ಯದ ಇತರೆ ಹಾಗೂ ಹೊರ ರಾಜ್ಯದ ಶಾಖೆಗಳಲ್ಲಿ ಎಷ್ಟು ಕೋಟಿಯ ವಂಚನೆ ನಡೆದಿದೆ ಎಂದು ಪೊಲೀಸರ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಪಂಚವಟಿ ಮಲ್ಟಿ ಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ 2012ರಲ್ಲಿ ಪ್ರಾರಂಭವಾಗಿದ್ದು, ಇದರ ಮುಖ್ಯ ಕಚೇರಿ ಬೆಂಗಳೂರಿನ ರಾಜಾಜಿನಗರದ 18ನೇ ಸಿ ಮುಖ್ಯ ರಸ್ತೆಯಲ್ಲಿ ಇರುವುದಾಗಿ ಷೇರುದಾರರಿಗೆ ನಂಬಿಸಲಾಗಿತ್ತು. 2016 ರಲ್ಲಿ ರಾಮನಗರದಲ್ಲಿ ಬ್ಯಾಂಕ್ ಶಾಖೆ ಪ್ರಾರಂಭವಾಗಿರುತ್ತದೆ. ಕರ್ನಾಟಕದ ಬೆಳಗಾವಿ, ದಾವಣಗೆರೆ, ತುಮಕೂರು ಮತ್ತು ಕೆಲವೊಂದು ಭಾಗದಲ್ಲಿ ಶಾಖೆ ತೆರೆದು ನಂತರ ಬಾಗಲು ಬಂದ್ ಮಾಡಿದ್ದಾರೆ ಎನ್ನಲಾಗಿದೆ.
ರಾಮನಗರ ಶಾಖೆಯಲ್ಲಿ ನಮ್ಮ ಮೆಚೂರಿಟಿ ಹಣ ವಾಪಸ್ಸು ನೀಡಲು ಸತಾಯಿಸುತ್ತಿರುವುದು ಕಂಡು ಬಂದಿತ್ತು.
ಬೆಂಗಳೂರಿನ ರಾಜಾಜಿನಗರಕ್ಕೆ ಹೋಗಿ ನೋಡಿದಾಗ ಅಲ್ಲಿ ಯಾವುದೇ ಸೊಸೈಟಿಯ ಮುಖ್ಯ ಕಚೇರಿ ಇರಲಿಲ್ಲ. ಅಕ್ಕಪಕ್ಕದವರನ್ನು ವಿಚಾರಿಸಿದಾಗ ಕೋವಿಡ್ ಮೊದಲು ಬ್ಯಾಂಕ್ ಮುಚ್ಚಿಕೊಂಡು ಹೊಗಿರುವ ವಿಚಾರ ತಿಳಿಯಿತು. ಬ್ಯಾಂಕ್ ವಂಚನೆಯ ಬಗ್ಗೆ ಕೂಲಂಕಷ ತನಿಖೆ ನಡೆದರೆ ಮತ್ತಷ್ಟು ಅಕ್ರಮಗಳ ಹೊರಬರುತ್ತವೆ ಎಂದು ಷೇರುದಾರರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications