ಚುನಾವಣೆ ವೇಳೆ ನೀಡಿದ್ದ ಕುಕ್ಕರ್ ಸ್ಫೋಟ: ಬಾಲಕಿಗೆ ಗಂಭೀರ ಗಾಯ
ರಾಮನಗರ, ಮೇ 26: ಚುನಾವಣೆ ವೇಳೆ ನೀಡಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ನಡೆದಿದೆ.
ಕೂನಮುದ್ದನಹಳ್ಳಿ ಗ್ರಾಮದ ಮಹಾಲಕ್ಷ್ಮಿ (17) ಇಂದು ಬೆಳಗ್ಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡಿದೆ. ಸ್ಟೋಟದ ತೀವ್ರತೆಗೆ ಬಾಲಕಿಗೆ ಮುಖದ ಭಾಗದಲ್ಲಿ ಗಂಭೀರ ಗಾಯಗೊಂಡಿದ್ದು, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಚುನಾವಣೆಗೂ ಮುನ್ನ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಚುನಾವಣೆ ಪ್ರಚಾರದ ವೇಳೆ ಕುಕ್ಕರ್ ನೀಡಿದ್ದರು. ಇದೀಗ ಚುನಾವಣೆ ವೇಳೆ ನೀಡಿದ್ದ ಕುಕ್ಕರ್ ಸ್ಫೋಟಗೊಂಡಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಚಿಕ್ಕಮಗಳೂರು: ಶಾಸಕರ ಬೆಂಬಲಿಗರು ನೀಡಿದ ಕುಕ್ಕರ್ ಬ್ಲಾಸ್ಟ್
ಚಿಕ್ಕಮಗಳೂರು: ಇನ್ನು ಈ ಹಿಂದೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಬೆಂಬಲಿಗರು ನೀಡಿದ್ದಾರೆ ಎನ್ನಲಾದ ಕುಕ್ಕರ್ ಸ್ಫೋಟಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿಯಲ್ಲಿ ನಡೆದಿತ್ತು.

ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಎನ್ನುವವರ ಮನೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಬೆಂಬಲಿಗರು ನೀಡಿರುವ ಕುಕ್ಕರ್ನಲ್ಲಿ ತರಕಾರಿ ಬೇಯಿಸಲು ಇಡಲಾಗಿತ್ತು. ಕಳಪೆ ಗುಣಮಟ್ಟದ ಕುಕ್ಕರ್ ಏಕಾಏಕಿ ಬ್ಲಾಸ್ ಆಗಿದ್ದು, ಸಮೀಪದಲ್ಲೇ ಇದ್ದ ತಾಯಿ ಮಗು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದರು. ಈ ಘಟನೆ ಬಳಿಕ ಜನ ಆತಂಕಗೊಂಡಿದ್ದರು.
ಶಾಸಕ ಟಿ. ಡಿ. ರಾಜೇಗೌಡ ಬೆಂಬಗಲಿಗರು ಚುನಾವಣಾ ಪ್ರಚಾರದ ವೇಳೆ ಕುಕ್ಕರ್ ಹಂಚಿದ್ದರು. 450 ರೂಪಾಯಿ ಕುಕ್ಕರ್ಗೆ 1,399 ರೂಪಾಯಿ ಲೇಬಲ್ ಅಂಟಿಸಿ ಮನೆ ಮನೆಗೆ ನೀಡಿದ್ದರು ಎನ್ನಲಾಗಿತ್ತು. ಕಳಪೆ ಗುಣಮಟ್ಟದ ಕುಕ್ಕರ್ ಆದ ಪರಿಣಾಮ ಬ್ಲಾಸ್ ಆಗಿದೆ ಎಂದು ಸ್ಥಳೀಯರು ಶಾಸಕರ ಬೆಂಬಲಿಗರ ವಿರುದ್ಧ ಆಕ್ರೋಶ ಹೊರ ಹಾಕಿ ಆ ಕುಕ್ಕರ್ ಬೇಡವೇ ಬೇಡ ಎಂದು ಕಿಡಿಕಾರಿದ್ದರು. ಇದೀಗ ಅಂತಹದ್ದೇ ಮೊತ್ತೊಂದು ಘಟನೆ ನಡೆದಿದ್ದು, ಕಾಂಗ್ರೆಸ್ ಶಾಸಕರು ಕಳಪೆ ಕುಕ್ಕರ್ ನೀಡಿ ಜನರ ಜೀವಕ್ಕೆ ಅಪಾಯ ತಂದಿದ್ದಾರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications