"ಟೊಯೊಟಾ ಕಾರ್ಖಾನೆ ಸರ್ಕಾರಕ್ಕೆ ಕಟ್ಟಬೇಕಿದೆ 4 ಸಾವಿರ ಕೋಟಿ ರುಪಾಯಿ ಟ್ಯಾಕ್ಸ್''
ರಾಮನಗರ, ಫೆಬ್ರವರಿ 17: ರಾಮನಗರದ ಬಿಡದಿ ಕೈಗಾರಿಕಾ ವಲಯದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಕಾರು ತಯಾರಿಕಾ ಕಂಪನಿ ಸರ್ಕಾರಕ್ಕೆ ಸುಮಾರು 4 ಸಾವಿರ ಕೋಟಿ ರುಪಾಯಿ ಟ್ಯಾಕ್ಸ್ ಕಟ್ಟಬೇಕಿದೆ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ಆರೋಪಿಸಿದ್ದಾರೆ.
ಟೊಯೊಟಾ ಕಾರ್ಮಿಕರ ಹೋರಾಟ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ಮಂಗಳವಾರ ಮಾಗಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಟೊಯೊಟಾ ಕಂಪನಿಯ ಆಡಳಿತ ಮಂಡಳಿಯ ಹಠಮಾರಿ ಧೋರಣೆಯನ್ನು ಖಂಡಿಸಿದರು.
ಟೊಯೊಟಾ ಕಂಪನಿಯು ಸರ್ಕಾರಕ್ಕೆ 4 ಸಾವಿರ ಕೋಟಿ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ ಸದನದಲ್ಲೇ ಸಚಿವರಾಗಿದ್ದ ಜಾರ್ಜ್ ರವರು 3700 ಕೋಟಿ ರೂ. ಟ್ಯಾಕ್ಸ್ ಬಾಕಿ ಉಳಿಸಿಕೊಂಡಿದೆ ಎಂದು ಉತ್ತರ ನೀಡಿದ್ದ ದಾಖಲೆಯನ್ನು ಪ್ರದರ್ಶಿಸಿದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ಅಲ್ಲಿಂದ ಇಲ್ಲಿಯವರೆಗೆ 900 ಕೋಟಿ ಬಾಕಿ ಇದೆ. ಒಟ್ಟು ಸುಮಾರು 4 ಸಾವಿರ ಕೋಟಿಗೂ ಹೆಚ್ಚು ಟೊಯೊಟಾ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿದೆ ಎಂದರು.

ಸರ್ಕಾರ ಟೊಯೊಟಾ ಕಂಪನಿಯಿಂದ ಟ್ಯಾಕ್ಸ್ ವಸೂಲಿ ಮಾಡಿದ್ದರೆ, ಕೊರೊನಾ ಸಂಕಷ್ಟದಲ್ಲಿ ಖಜಾನೆಯಾದರೂ ತುಂಬುತ್ತಿತ್ತು. ಸರಿಯಾಗಿ ಟ್ಯಾಕ್ಸ್ ಪಾವತಿಸದ ಕಾರ್ಖಾನೆ, ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರ ನೀಡಿದ ಅದೇಶವನ್ನು ಕಡೆಗಣಿಸಿದೆ. ಎಲ್ಲೋ ಒಂದು ಕಡೆ ಸರ್ಕಾರ ಕೂಡ ಟೊಯೊಟಾ ಆಡಳಿತ ಮಂಡಳಿಯವರಿಗೆ ಎದರುತ್ತಿದ್ದಾರಾ ಎಂಬ ಸಂಶಯ ಮೂಡುತ್ತಿದೆ ಎಂದು ಮಾಜಿ ಶಾಸಕ ಬಾಲಕೃಷ್ಣ ಟೀಕಿಸಿದರು.
ಕಾರ್ಮಿಕರ ಪ್ರತಿಭಟನೆ 100 ದಿನ ಪೂರೈಸಿದೆ, ಇಷ್ಟಾದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಟೊಯೊಟಾ ಆಡಳಿತ ಮಂಡಳಿಯ ಹಠಮಾರಿ ಧೋರಣೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಿ.ಎಂ.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯಿಸುತ್ತೇವೆ ಎಂದರು.

ನಮ್ಮ ಮನವಿಗೆ ಸ್ಪಂದನೆ ಸಿಗದೆ ಇದ್ದರೆ ನಮ್ಮ ಮುಂದಿನ ಹೋರಾಟದ ನಿಲುವನ್ನು ತಿಳಿಸುತ್ತೇವೆ ಎಂದು ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications