ಐಎಂಎ ಹಗರಣ; ಎಚ್. ಡಿ. ಕುಮಾರಸ್ವಾಮಿ ಸ್ಪಷ್ಟನೆ
ರಾಮನಗರ, ಫೆಬ್ರವರಿ 21; " ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಈ ಹಗರಣ ಹೊರ ಬಂದಿತ್ತು. ಸಿಸಿಬಿಗೆ ಈ ಹಗರಣದ ತನಿಖೆ ನಡೆಸುವಂತೆ ನಾನೇ ಆದೇಶ ಮಾಡಿದ್ದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ಭಾನುವಾರ ಮಾತನಾಡಿದ ಅವರು, 'ಹಗರಣದ ತನಿಖೆಗೆ ಆದೇಶ ನೀಡಿದಾಗಲೇ ಆತ ದೇಶ ಬಿಟ್ಟು ದುಬೈಗೆ ಪರಾರಿಯಾಗಿದ್ದ. ನಮ್ಮ ಅಧಿಕಾರಿಗಳು ಹಗರಣದ ಆರೋಪಿಯನ್ನ ಬಂಧಿಸಿ ಕರೆತಂದಿದ್ದರು" ಎಂದರು.
"ವಿಚಾರಣೆ ವೇಳೆ ಕುಮಾರಸ್ವಾಮಿ ಅವರಿಗೆ ಸೇರಬೇಕು ಅಂತಾ ಹಣ ಸಂಗ್ರಹಣೆ ಮಾಡಿದ್ದರಂತೆ. ಆ ಹಣ ಕುಮಾರಸ್ವಾಮಿಗೆ ಸೇರಿಲ್ಲಾ ಎಂಬ ಚರ್ಚೆ ನಡೆಯುತ್ತಿದೆ. ಯಾರ ಮೇಲೆ ಬೇಕಾದರೂ ಕ್ರಮ ಕೈಗೊಳ್ಳಲಿ ಜನರ ಹಣವನ್ನು ಲೂಟಿ ಮಾಡಿದವರಿಗೆ ಈ ಕ್ಷಣದ ತನಕ ನಾನು ರಕ್ಷಣೆ ಕೊಟ್ಟವನಲ್ಲ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

"ರೋಷನ್ ಬೇಗ್ ಒಂದು ಬಾರಿ ಸಂಜೆ ವೇಳೆಗೆ ಕೃಷ್ಣ ಕಚೇರಿಯಲ್ಲಿದ್ದಾಗ ಒಂದು ಇಫ್ತಿಯಾರ್ ಕೂಟ ಇದೆ ಬರಬೇಕೆಂದು ಹಠ ಹಿಡಿದಿದ್ದರು. ಕಚೇರಿಯಿಂದ ನಾನು ಅಲ್ಲಿಗೆ ಹೋಗಿದ್ದೆ. ಆ ವೇಳೆಗೆ ಅಲ್ಲಿ ಇಬ್ಬರು ವ್ಯಕ್ತಿಗಳು ಇದ್ದರು. ಅವರು ಯಾರು? ಅಂತಾ ನನಗೆ ಗೊತ್ತಿರಲಿಲ್ಲ" ಎಂದು ಕುಮಾರಸ್ವಾಮಿ ತಿಳಿಸಿದರು.
"ರೋಷನ್ ಬೇಗ್ ಅವರು ಇವರು ಮಹಾನ್ ದಾನಿಗಳು ಶಿಕ್ಷಣ ಸಂಸ್ಥೆಗಳಿಗೆ ಇವರಿಂದ ಧಾನ ಧರ್ಮ ಮಾಡಿದ್ದಾರೆ ಅಂತಾ ಹೇಳಿದ್ದರು. ಅಲ್ಲಿಯ ವರೆಗೆ ಆತಾ ಯಾರು? ಅಂತಾನೆ ಗೊತ್ತಿರಲಿಲ್ಲ. ನಾನೇ ತನಿಖೆಗೆ ಆದೇಶ ಮಾಡಿದ ಮೇಲೆ ನನ್ನ ಪಾತ್ರ ಎಲ್ಲಿ ಇರುತ್ತದೆ?" ಎಂದು ಪ್ರಶ್ನಿಸಿದರು.
ಮೀಸಲಾತಿ; ಒಕ್ಕಲಿಗರಿಗೆ ಮೀಸಲಾತಿ ಬೇಕು ಎಂಬ ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, "ಮೀಸಲಾತಿ ಹೋರಾಟ ಬಂದಾಗ ಮಾತನಾಡೋಣ. ಇದು ಎಲ್ಲೊ ಒಂದು ಕಡೆ ದಾರಿ ತಪ್ಪಿ ಹೋಗುತ್ತಿರುವ ಸನ್ನಿವೇಶಗಳು. ಇಂತಹ ವಿಷಯಗಳ ಮುಖಾಂತರ ರಾಜಕೀಯ ದುರ್ಬಳಕೆ ಮಾಡಿಕೊಳ್ಳೊದು ಇಲ್ಲಾ, ರಾಜಕೀಯವಾಗಿ ಸ್ಥಾನಮಾನ ಪಡೆಯಲು ಒಂದು ವರ್ಗ ಹೊರಟಿದೆ" ಎಂದರು.
"ಇಂತಹ ಹೋರಾಟದಲ್ಲಿ ಭಾಗಿಯಾಗವನು ನಾನಲ್ಲ. ಇಂತಹ ವಿಷಯಗಳನ್ನು ಸಮಾಜದಲ್ಲಿ ಇಕ್ಕಟ್ಟಿಗೆ ಸಿಲುಕಿಸಿ ಸಂಘರ್ಷ ಉಂಟು ಮಾಡಲು ಹೋಗುವವನು ನಾನಲ್ಲ. ಆ ಸಮಯ ಬಂದಾಗ ಚರ್ಚೆ ಮಾಡೋಣ" ಎಂದು ಕುಮಾರಸ್ವಾಮಿ ತಿಳಿಸಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications