ಐಎಂಎ ಹಗರಣ; ಎಚ್. ಡಿ. ಕುಮಾರಸ್ವಾಮಿ ಸ್ಪಷ್ಟನೆ
ರಾಮನಗರ, ಫೆಬ್ರವರಿ 21; " ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಈ ಹಗರಣ ಹೊರ ಬಂದಿತ್ತು. ಸಿಸಿಬಿಗೆ ಈ ಹಗರಣದ ತನಿಖೆ ನಡೆಸುವಂತೆ ನಾನೇ ಆದೇಶ ಮಾಡಿದ್ದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ಭಾನುವಾರ ಮಾತನಾಡಿದ ಅವರು, 'ಹಗರಣದ ತನಿಖೆಗೆ ಆದೇಶ ನೀಡಿದಾಗಲೇ ಆತ ದೇಶ ಬಿಟ್ಟು ದುಬೈಗೆ ಪರಾರಿಯಾಗಿದ್ದ. ನಮ್ಮ ಅಧಿಕಾರಿಗಳು ಹಗರಣದ ಆರೋಪಿಯನ್ನ ಬಂಧಿಸಿ ಕರೆತಂದಿದ್ದರು" ಎಂದರು.
"ವಿಚಾರಣೆ ವೇಳೆ ಕುಮಾರಸ್ವಾಮಿ ಅವರಿಗೆ ಸೇರಬೇಕು ಅಂತಾ ಹಣ ಸಂಗ್ರಹಣೆ ಮಾಡಿದ್ದರಂತೆ. ಆ ಹಣ ಕುಮಾರಸ್ವಾಮಿಗೆ ಸೇರಿಲ್ಲಾ ಎಂಬ ಚರ್ಚೆ ನಡೆಯುತ್ತಿದೆ. ಯಾರ ಮೇಲೆ ಬೇಕಾದರೂ ಕ್ರಮ ಕೈಗೊಳ್ಳಲಿ ಜನರ ಹಣವನ್ನು ಲೂಟಿ ಮಾಡಿದವರಿಗೆ ಈ ಕ್ಷಣದ ತನಕ ನಾನು ರಕ್ಷಣೆ ಕೊಟ್ಟವನಲ್ಲ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

"ರೋಷನ್ ಬೇಗ್ ಒಂದು ಬಾರಿ ಸಂಜೆ ವೇಳೆಗೆ ಕೃಷ್ಣ ಕಚೇರಿಯಲ್ಲಿದ್ದಾಗ ಒಂದು ಇಫ್ತಿಯಾರ್ ಕೂಟ ಇದೆ ಬರಬೇಕೆಂದು ಹಠ ಹಿಡಿದಿದ್ದರು. ಕಚೇರಿಯಿಂದ ನಾನು ಅಲ್ಲಿಗೆ ಹೋಗಿದ್ದೆ. ಆ ವೇಳೆಗೆ ಅಲ್ಲಿ ಇಬ್ಬರು ವ್ಯಕ್ತಿಗಳು ಇದ್ದರು. ಅವರು ಯಾರು? ಅಂತಾ ನನಗೆ ಗೊತ್ತಿರಲಿಲ್ಲ" ಎಂದು ಕುಮಾರಸ್ವಾಮಿ ತಿಳಿಸಿದರು.
"ರೋಷನ್ ಬೇಗ್ ಅವರು ಇವರು ಮಹಾನ್ ದಾನಿಗಳು ಶಿಕ್ಷಣ ಸಂಸ್ಥೆಗಳಿಗೆ ಇವರಿಂದ ಧಾನ ಧರ್ಮ ಮಾಡಿದ್ದಾರೆ ಅಂತಾ ಹೇಳಿದ್ದರು. ಅಲ್ಲಿಯ ವರೆಗೆ ಆತಾ ಯಾರು? ಅಂತಾನೆ ಗೊತ್ತಿರಲಿಲ್ಲ. ನಾನೇ ತನಿಖೆಗೆ ಆದೇಶ ಮಾಡಿದ ಮೇಲೆ ನನ್ನ ಪಾತ್ರ ಎಲ್ಲಿ ಇರುತ್ತದೆ?" ಎಂದು ಪ್ರಶ್ನಿಸಿದರು.
ಮೀಸಲಾತಿ; ಒಕ್ಕಲಿಗರಿಗೆ ಮೀಸಲಾತಿ ಬೇಕು ಎಂಬ ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, "ಮೀಸಲಾತಿ ಹೋರಾಟ ಬಂದಾಗ ಮಾತನಾಡೋಣ. ಇದು ಎಲ್ಲೊ ಒಂದು ಕಡೆ ದಾರಿ ತಪ್ಪಿ ಹೋಗುತ್ತಿರುವ ಸನ್ನಿವೇಶಗಳು. ಇಂತಹ ವಿಷಯಗಳ ಮುಖಾಂತರ ರಾಜಕೀಯ ದುರ್ಬಳಕೆ ಮಾಡಿಕೊಳ್ಳೊದು ಇಲ್ಲಾ, ರಾಜಕೀಯವಾಗಿ ಸ್ಥಾನಮಾನ ಪಡೆಯಲು ಒಂದು ವರ್ಗ ಹೊರಟಿದೆ" ಎಂದರು.
"ಇಂತಹ ಹೋರಾಟದಲ್ಲಿ ಭಾಗಿಯಾಗವನು ನಾನಲ್ಲ. ಇಂತಹ ವಿಷಯಗಳನ್ನು ಸಮಾಜದಲ್ಲಿ ಇಕ್ಕಟ್ಟಿಗೆ ಸಿಲುಕಿಸಿ ಸಂಘರ್ಷ ಉಂಟು ಮಾಡಲು ಹೋಗುವವನು ನಾನಲ್ಲ. ಆ ಸಮಯ ಬಂದಾಗ ಚರ್ಚೆ ಮಾಡೋಣ" ಎಂದು ಕುಮಾರಸ್ವಾಮಿ ತಿಳಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications