ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಪತ್ನಿ ಅನುಮಾನಾಸ್ಪದ ಸಾವಿನ ಬಗ್ಗೆ ಎಚ್ ಡಿಕೆ ಪ್ರಸ್ತಾಪ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 20: "ಒಂದಡಿಗೆ ಒಂದಡಿ ಇರುವ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು, ಸಾಯುವಂಥದ್ದು ಉಂಟೇನ್ರೀ? ಅಂಥದ್ದೇ ಜನ ಮೆಚ್ಚಿಕೊಂಡಿದ್ದಾರೆ. ಆ ರೀತಿ ಮಾಡಿದವರಿಗೆ ಕಾಲ ಇದು. ಅವರು ಇದೀಗ ದೇಶ ಕಾಯುವವರು, ರಾಜ್ಯ ಕಾಯುವವರು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ರಾಮನಗರದಲ್ಲಿ ಹೇಳಿದರು.

ನಿಮಗೆ ದ್ವೇಷ ನನ್ನ ಮೇಲಲ್ಲವೇ ಯಡಿಯೂರಪ್ಪನವರೇ?ನಿಮಗೆ ದ್ವೇಷ ನನ್ನ ಮೇಲಲ್ಲವೇ ಯಡಿಯೂರಪ್ಪನವರೇ?

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರು ನೀರಿನ ಸಂಪ್ ನಲ್ಲಿ ಬಿದ್ದು ಮೃತಪಟ್ಟ ವಿಚಾರವನ್ನು ನೇರವಾಗಿ ಪ್ರಸ್ತಾವ ಮಾಡದೆ, ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದ ಆಯಸ್ಸು ಇನ್ನು ಮೂರ್ನಾಲ್ಕು ತಿಂಗಳು ಮಾತ್ರ ಎಂಬ ಕೋಡಿ ಮಠ ಸ್ವಾಮಿಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಾನು ಜ್ಯೋತಿಷಿ ಅಲ್ಲ. ಸರ್ಕಾರದ ನಡವಳಿಕೆಗಳನ್ನು ನೋಡಿದರೆ ಯಾವ ಸಮಯದಲ್ಲಿ ಬೇಕಾದರೂ ಹೋಗುವಂತಿದೆ ಎಂದರು.

HD Kumaraswamy Questioned Suspicious Death Of Yeddyurappas Wife

ಡಿಕೆಶಿ ಅಂದು ತನಿಖೆ ನಡೆಸಿದ್ದರೆ ಇಂದು ಹೀಗಾಗುತ್ತಿರಲಿಲ್ಲ; ಎಚ್ ಡಿಕೆಡಿಕೆಶಿ ಅಂದು ತನಿಖೆ ನಡೆಸಿದ್ದರೆ ಇಂದು ಹೀಗಾಗುತ್ತಿರಲಿಲ್ಲ; ಎಚ್ ಡಿಕೆ

ಸಮಯ ಬರುತ್ತದೆ ಕಾದು ನೋಡಿ. ನಮಗೆ ಯಾರ ಮೇಲೆ ಸಿಟ್ಟು ಇಲ್ಲ. ಆದರೆ ಎಲ್ಲಾ ವಿಚಾರಗಳಿಗೆ ನನ್ನ ಹೆಸರನ್ನು ಯಾಕೆ ತಳುಕು ಹಾಕುತ್ತಾರೆ? ಮೈಸೂರಿನಲ್ಲಿ ಇವತ್ತಿನ ಸಭೆಗೆ ಜಿಲ್ಲೆಯ ಎಲ್ಲ ನಾಯಕರಿಗೂ ಆಹ್ವಾನ ಮಾಡಲಾಗಿದೆ. ಜಿ. ಟಿ. ದೇವೇಗೌಡ ಅವರಿಗೂ ಆಹ್ವಾನ ನೀಡಲಾಗಿದೆ. ಬಂದವರು ಬರುತ್ತಾರೆ, ಬಾರದವರು ಬರಲ್ಲ ಎಂದು ಅವರು ಹೇಳಿದ್ದಾರೆ.

English summary
"Is there anything that can cause a slip and die in one and one feet water tank? HD Kumaraswamy Questioned suspicious death of yeddyurappas Wife.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X