ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಸಿದ್ದರಾಮಯ್ಯರಿಂದ ನಾನೇನು ಬೆಳೆದಿಲ್ಲ; ಇಂಥ ಎಷ್ಟು ಗಿಣಿಗಳನ್ನು ದೇವೇಗೌಡರು ಸಾಕಿಲ್ಲ!"

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 24: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವೆ ಮಾತಿನ ವಾಗ್ವಾದ ಮತ್ತೆ ಮುಂದುವರೆದಿದೆ. "ಸಿದ್ದರಾಮಯ್ಯ ಸಾಕಿದ ಗಿಣಿಗಳೇ ಹದ್ದಾಗಿ ಕುಕ್ಕಿದವು' ಎಂಬ ಹೇಳಿಕೆ ಕುರಿತು ಇಂದು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರ ಕುರಿತು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಯಾರು ಗಿಣಿ, ಯಾರು ಹದ್ದು: ಸಿದ್ದರಾಮಯ್ಯ ಟ್ವೀಟ್ ಸೂಚಿಸುತ್ತಿರುವುದು ಏನು?ಯಾರು ಗಿಣಿ, ಯಾರು ಹದ್ದು: ಸಿದ್ದರಾಮಯ್ಯ ಟ್ವೀಟ್ ಸೂಚಿಸುತ್ತಿರುವುದು ಏನು?

ಕಳೆದ ಎರಡು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಾನಿಗೀಡಾದ ಚನ್ನಪಟ್ಟಣದ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, "ನಾನು ಸಿದ್ದರಾಮಯ್ಯ ಸಾಕಿರುವ ಗಿಣಿ ಅಲ್ಲ. ರಾಮನಗರ ಜಿಲ್ಲೆಯ ಜನ ನನ್ನನ್ನ ಬೆಳೆಸಿದ್ದಾರೆ. ಸಿದ್ದರಾಮಯ್ಯರಿಂದ ನಾನೇನು ಬೆಳೆದಿಲ್ಲ. ದೇವೇಗೌಡರು ಸಿದ್ದರಾಮಯ್ಯನವರಂತಹ ಗಿಣಿಗಳನ್ನ ಸಾಕಷ್ಟು ಬೆಳೆಸಿದ್ದಾರೆ. ಆದರೆ ಅವುಗಳೇ ಹೇಗೆ ಕುಕ್ಕಿದ್ದಾವೆಂದು ನನಗೆ ಗೊತ್ತಿದೆ" ಎಂದು ತಿರುಗೇಟು ನೀಡಿದ್ದಾರೆ.

HD Kumaraswamy Reacted To Siddaramaiah Tweet In Channapatna

"ನಾನು ಸಿದ್ದರಾಮಯ್ಯರಿಂದ ಸಿಎಂ ಆಗಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಿಎಂ ಆಗಿದ್ದೆ. ಅದನ್ನು ಸಿದ್ದರಾಮಯ್ಯನವರು ಸಹಿಸಲಿಲ್ಲ. ಹಾಗಾಗಿ ಈ ಸರ್ಕಾರವನ್ನು ಕೆಡವಲು ಅವರೇ ಮುಂದಾದರು. ನಾವಾದರೂ ರಾಜ್ಯದಲ್ಲಿ ಒಂದು ಪ್ರಾದೇಶಿಕ ಪಕ್ಷವನ್ನ ಕಟ್ಟಿ ಬೆಳೆಸಿದ್ದೇವೆ. ಇವರು ಕಾಂಗ್ರೆಸ್ ಪಕ್ಷಕ್ಕೆ ಹೋಗಿ, ಅಲ್ಲಿನ ಶಕ್ತಿಯನ್ನ ಧಾರೆ ಎರೆಸಿಕೊಂಡು ಬೆಳೆದವರು. ಅವರಿಗೆ ಶಕ್ತಿ ಇದ್ದರೆ ಕಾಂಗ್ರೆಸ್ ನಿಂದ ಹೊರಬಂದು ಪಕ್ಷ ಕಟ್ಟಿ ಬೆಳೆಸಲಿ" ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅಕ್ಷರಸ: ಬೇಸ್ತು ಬೀಳುವಂತೆ ಮಾಡಿದ ಕುಮಾರಸ್ವಾಮಿ ಆರೋಪಸಿದ್ದರಾಮಯ್ಯ ಅಕ್ಷರಸ: ಬೇಸ್ತು ಬೀಳುವಂತೆ ಮಾಡಿದ ಕುಮಾರಸ್ವಾಮಿ ಆರೋಪ

ಇದೇ ಸಂದರ್ಭ, ಮಳೆಯಿಂದ ತೊಂದರೆಗೆ ಒಳಗಾದ ಎಪಿಎಂಸಿ ಕ್ವಾಟ್ರಸ್ ನ 72 ಕುಟುಂಬಗಳಿಗೆ ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ 5000 ರೂಪಾಯಿ ಪರಿಹಾರ ಘೋಷಿಸಿದರು.

English summary
Hd kumaraswamy reacted to the tweet of siddaramaiah in channapatna. He said, "Ramanagara people raised me not siddaramaiah".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X