'ಬಾಲಕೃಷ್ಣ ಅವರಿಂದ ಒಳ್ಳೆ ಮಾತು ನಿರೀಕ್ಷೆ ಮಾಡಲು ಸಾಧ್ಯವೇ?'
ರಾಮನಗರ, ಮಾರ್ಚ್ 02 : 'ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರದ್ದು ಲಂಗು-ಲಗಾಮು ಇಲ್ಲದ ನಾಲಿಗೆ. ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷೆ ಮಾಡಲು ಸಾಧ್ಯವೇ?' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ರಾಮನಗರದ ಮಿನಿ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, 'ಅವರು ನನಗೆ ಹಳೆಯ ಸ್ನೇಹಿತರೇ, ಅವರ ನಡುವಳಿಕೆ ಏನು ಅಂತಾ ಗೊತ್ತು. ಅವರದ್ದು ಲಂಗು ಲಗಾಮಿಲ್ಲದ ನಾಲಿಗೆ' ಎಂದರು.
ತಾಲೂಕು ಪಂಚಾಯಿತಿಯ ಸದಸ್ಯರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಬಂಡಾಯ ಶಾಸಕ ಎಚ್.ಸಿ ಬಾಲಕೃಷ್ಣ ವಿರುದ್ದ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. 'ಬಾಲಕೃಷ್ಣ ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯವೇ?' ಎಂದು ಪ್ರಶ್ನಿಸಿದರು.

'ಒಬ್ಬರು ಜನಪ್ರತಿನಿಧಿಯಾಗಿ ಮಾತನಾಡಬೇಕಾದರೆ ಹತ್ತು ಬಾರಿ ತೂಕ ಮಾಡಿ ಮಾತನಾಡಬೇಕು. ಅಲ್ಲದೇ ನಾಲಿಗೆ ಇದೆ ಅಂತಾ ಬಳಸುವ ಪದಬಳಕೆಯಿಂದಾಗುವ ಆಗು ಅನಾಹುತದ ಬಗ್ಗೆ ಅರಿತುಕೊಳ್ಳಲಿ' ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

'ಮಾಗಡಿ ಕ್ಷೇತ್ರಕ್ಕೆ ಎಚ್.ಡಿ ಕುಮಾರಸ್ವಾಮಿಯವರ ಕೊಡುಗೆ ಶೂನ್ಯ' ಎಂದು ಆರೋಪಿಸಿದ್ದ ಬಾಲಕೃಷ್ಣಗೆ ತಿರುಗೇಟು ನೀಡಿದ ಕುಮಾರಸ್ವಾಮಿ, 'ತಾವು ಅಧಿಕಾರದಲ್ಲಿದ್ದ ವೇಳೆ ನೀಡಿದ ಅನುದಾ ಎಷ್ಟು?. ಈಗಿನ ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡಿದ ಅನುದಾನ ಎಷ್ಟು? ಎನ್ನುವುದನ್ನು ತಿಳಿದುಕೊಳ್ಳಲಿ. ನಾನು ಅವರಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಾ? ' ಎಂದು ಪ್ರಶ್ನಿಸಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications