ರಾಮನಗರದಲ್ಲಿ ನಿರ್ಗತಿಕರಿಗೆ ಆಸರೆಯಾದ ಎಚ್ಡಿಕೆ ಅಭಿಮಾನಿಗಳು
ರಾಮನಗರ, ಮಾರ್ಚ್ 27: ಕೊರೊನಾ ವೈರಸ್ ಭೀತಿ ಹೆಚ್ಚಾದಂತೆ ಸರ್ಕಾರ ಕರ್ಫ್ಯೂ ಬಿಗಿಗೊಳಿಸಿದ್ದು, ಕಟ್ಟುನಿಟ್ಟಿನ ಬಂದ್ ನಿಂದಾಗಿ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ರಾಮನಗರದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಮನಗಂಡ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಭಿಮಾನಿಗಳು ಹಸಿವಿನಿಂದ ಬಳಲುತ್ತಿದ್ದ ನಿರ್ಗತಿಕರಿಗೆ ತಿಂಡಿ, ನೀರು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕೊರೊನಾ ವೈರಸ್ ನಿಂದ ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ಲಾಕ್ ಡೌನ್ ನಿರ್ಧಾರ ಅನುಷ್ಠಾನಗೊಳಿಸಲು ಬೀದಿಗಿಳಿದಿರುವ ಆರಕ್ಷಕ ಸಿಬ್ಬಂದಿಗಳಿಗೂ, ಆರೋಗ್ಯವನ್ನು ಲೆಕ್ಕಿಸದೇ ದುಡಿಯುತ್ತಿರುವ ಪೊಲೀಸರಿಗೆ ಇಂದು ಬೆಳಿಗ್ಗೆನೆ ತಿಂಡಿ ಮತ್ತು ನೀರನ್ನು ನೀಡಿ ನಿಮ್ಮ ಜೊತೆ ನಾವಿದ್ದೇವೆ ಎಂಬ ಸಂದೇಶ ಸಾರಿದ್ದಾರೆ.

ಇನ್ನು ಇಂತಹ ಸಂಕಷ್ಟದ ಕಾಲದಲ್ಲೂ ಪಟ್ಟಣದ ಬೀದಿ ಬೀದಿಯ ಕಸ ಗುಡಿಸಿ ನಗರದ ಸ್ವಚ್ಛತೆ ಕಾಪಾಡಿ, ಎಲ್ಲರ ಆರೋಗ್ಯಕ್ಕಾಗಿ ಕೊರೊನಾ ಭೀತಿಯನ್ನು ಲೆಕ್ಕಿಸದೆ ಬೀದಿಗಿಳಿಯುವ ಪೌರ ಕಾರ್ಮಿಕರಿಗೂ ತಿಂಡಿ ಮತ್ತು ನೀರು ವಿತರಿಸುವ ಮೂಲಕ ಪೌರ ಕಾರ್ಮಿಕರ ಸೇವೆಯನ್ನು ಕುಮಾರಸ್ವಾಮಿ ಅಭಿಮಾನಿ ಬಳಗ ಗೌರವಿಸಿದ್ದಾರೆ.

ರಾಮನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿದ ಎಚ್ಡಿಕೆ ಅಭಿಮಾನಿ ಬಳಗದ ಸದಸ್ಯರು, ಕರ್ತವ್ಯ ನಿರತ ಪೊಲೀಸರು, ಪೌರ ಕಾರ್ಮಿಕರು, ಕೆಲಸವಿಲ್ಲದೆ ಸಂಕಷ್ಟದಲ್ಲಿರುವ ದಿನಗೂಲಿ ನೌಕರರು ಹಾಗೂ ಹಸಿವಿನಿಂದ ಬಳಲುತ್ತಿರುವ ನಿರ್ಗತಿಕರಿಗೆ ತಿಂಡಿ ಮತ್ತು ನೀರು ನೀಡಿದರು. ಎಚ್ಡಿಕೆ ಅಭಿಮಾನಿ ಬಳಗದಲ್ಲಿ ಲಾಯರ್ ರಾಜಶೇಖರ್, ಜಯಕುಮಾರ್, ರಾಜು ಹಾಗೂ ಶಿವಾಜಿ ಸೇರಿದಂತೆ ಇತರರು ತಂಡದಲ್ಲಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications