Get Updates
Get notified of breaking news, exclusive insights, and must-see stories!

ಕಾಡು ಪ್ರಾಣಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರಕಾರಕ್ಕೆ ಹೆಚ್‌ಡಿಕೆ ಆಗ್ರಹ

ರಾಮನಗರ ಜೂನ್ 3: ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕನ್ನು ಒತ್ತಾಯ ಮಾಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಶಾಶ್ವತ ಪರಿಹಾರಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ಶ್ರೀ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಅವರು, ಕಾಡಂಚಿನಲ್ಲಿ ರೈತರು ಆತಂಕ, ಭಯದಿಂದ ಬದುಕುವಂತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

HDK demands the government

ಅನೆ ದಾಳಿಯಿಂದ ರೈತ ವೀರಭದ್ರಯ್ಯ ಅವರು ಅಸುನೀಗಿದ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಅವರು ನೊಂದ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ತಿಳಿಸಿದ್ದಾರೆ.

HDK demands the government

ಸಚಿವರು ಈಗಾಗಲೇ ತಿಳಿಸಿರುವಂತೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು ಹಾಗೂ ಕಾಡಂಚಿನಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ವಹಿಸಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತವಾಗಿ ತಡೆಯುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದ್ದಾರೆ.

ಚನ್ನಪಟ್ಟಣ ತಾಲೂಕಿನ ವಿರುಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಕನಕಪುರ ಮೂಲದ ವೀರಭದ್ರಯ್ಯ (52) ಅಸುನೀಗಿದ್ದಾರೆ.ವೀರಭದ್ರಯ್ಯ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ಲೋಕೆಶ್ ಎಂಬುವವರ ಮಾವಿನ ತೋಟ ಕಾಯುತ್ತಿದ್ದರು. ಈ ತೋಟಕ್ಕೆ ಮುಂಜಾನೆ ಅನೆ ದಾಳಿಯಾಗಿದೆ.

ರಾಮನಗದ ರೈತರು ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದು, ಇತ್ತೀಚೆಗಷ್ಟೇ ಕಬ್ಬಾಳು ಗ್ರಾಮ ಬಳಿಯೂ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+