ಎಚ್ಡಿಕೆ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳಿಂದ 'ಕುಮಾರಣ್ಣ ಬಾಂಡ್'
ಬೆಂಗಳೂರು, ಡಿಸೆಂಬರ್ 15 : ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸುವ ಸಲುವಾಗಿ ಅಭಿಮಾನಿಗಳಿಬ್ಬರು 'ಕುಮಾರಣ್ಣ ಬಾಂಡ್'ಎಂಬ ವಿಮಾ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.
ಇದೇ 16ರಂದು ಎಚ್.ಡಿ ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರ ಅಂಗವಾಗಿ ಅವರ ಅಭಿಮಾನಿಗಳಾದ ರಾಜ್ಯ ಯುವ ಜನತಾದಳದ ಉಪಾಧ್ಯಕ್ಷ ಸೈಯ್ಯದ್ ಶಾಹಿದ್ ಮತ್ತು ಬೆಂಗಳೂರು ನಗರ ಯುವ ಜನತಾದಳದ ಉಪಾಧ್ಯಕ್ಷ ರಾಜೇಂದ್ರ ಸಿಂಗ್ 'ಕುಮಾರಣ್ಣ ಬಾಂಡ್' ಯೋಜನೆಯನ್ನು ಪ್ರಯೋಜಿಸಿದ್ದಾರೆ.

ರಾಮನಗರ ಜಿಲ್ಲೆಯ, ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕುಗಳಲ್ಲಿ ಇದೇ ಡಿ.16ರಂದು ಜನಿಸುವ ಮಕ್ಕಳಿಗೆ ತಲಾ 5000 ರೂ.ಗಳ ವಿಶೇಷ ಬಾಂಡ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಕುಮಾರಸ್ವಾಮಿ ಅವರ ಹುಟ್ಟಹಬ್ಬದ ದಿನವಾದ ಡಿ.16ರಂದು ಜನಿಸಿದ ಮಕ್ಕಳಿಗಷ್ಟೇ ಈ ಬಾಂಡ್ ಲಭ್ಯವಾಗಲಿದೆ.
ಪೋಷಕರು ಮಗುವಿನ ಜನ್ಮದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಬಿಪಿಎಲ್ ಕಾರ್ಡ್ ಕುಟುಂಬಗಳು ಮಾತ್ರ ಈ ಯೋಜನೆಗೆ ಅರ್ಹರು. ಈ ಬಾಂಡ್ 6 ವರ್ಷಕ್ಕೆ 10 ಸಾವಿರ, 12 ವರ್ಷಗಳಿಗೆ 20 ಸಾವಿರ, 18 ವರ್ಷಕ್ಕೆ 40ಸಾವಿರ, 24 ವರ್ಷಕ್ಕೆ 80ಸಾವಿರ ಬೆಲೆ ಬಾಳಲಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications