ಚನ್ನಪಟ್ಟಣದಿಂದ ಎಚ್ಡಿಕೆ ಗೆದ್ದೇ ಗೆಲ್ಲುತ್ತಾರೆ : ಅನಿತಾ ವಿಶ್ವಾಸ
ರಾಮನಗರ, ಏಪ್ರಿಲ್ 12 : ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾರೇ ಸ್ಪರ್ಧಿಸಿದರೂ ಗೆಲ್ಲುವ ವಿಶ್ವಾಸವಿದೆ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಚನ್ನಪಟ್ಟಣದಲ್ಲಿರುವ ಜೆಡಿಎಸ್ ಕಚೇರಿಗೆ ಗುರುವಾರ ಆಗಮಿಸಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಪಕ್ಷದ ಟ್ರೆಂಡ್ ಚೆನ್ನಾಗಿದ್ದು, ರಾಜ್ಯದಲ್ಲೂ ಕೂಡ ಜೆಡಿಎಸ್ ಪರವಾದ ಅಲೆಯಿದೆ. ಮುಂದಿನ ವಾರದಿಂದ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಬಹಿರಂಗ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದು ಅನಿತಾ ನುಡಿದರು.
ನಿಖಿಲ್ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾನೆ. ಕುಮಾರಸ್ವಾಮಿಯವರಿಗೆ ಕಳೆದ ಎಂ.ಪಿ ಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ಮತ ಹಾಕಿದ್ದರು. ಆದರೆ ಈಗ ಮತ್ತೊಂದು ಅವಕಾಶ ಒದಗಿ ಬಂದಿದ್ದು, ಕ್ಷೇತ್ರದ ಜನರು ಬಹಳ ಸಂತೋಷವಾಗಿದ್ದಾರೆ. ಕುಮಾರಸ್ವಾಮಿಯವರು ಈ ಮಟ್ಟಕ್ಕೆ ಬೆಳೆಯಬೇಕಾದರೆ ಚನ್ನಪಟ್ಟಣ ಜನರ ಕೊಡುಗೆ ಸಾಕಷ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಚನ್ನಪಟ್ಟಣ ಮಾಜಿ ಜೆಡಿಎಸ್ ಶಾಸಕ ಎಂ.ಸಿ.ಅಶ್ವಥ್ ಮಾತನಾಡಿ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ ಗೆಲುವು ನಿಶ್ವಿತ. ಅವರ ಗೆಲುವನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹಾಗೇ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ 70 ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದವು, ನಾನು ಗೆದ್ದಾಗಲೂ 60 ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದವು ಎಂದು ಹಿಂದಿನ ಚುನಾವಣೆಯ ಮೆಲುಕು ಹಾಕಿದರು.
ಈ ಬಾರಿ 2 ಲಕ್ಷದ 18 ಸಾವಿರಕ್ಕೂ ಹೆಚ್ಚು ಮತಗಳು ಚನ್ನಪಟ್ಟಣ ಕ್ಷೇತ್ರದಲ್ಲಿದೆ. ಈ ಬಾರಿ ಕೂಡ ಜೆಡಿಎಸ್ ಗೆ ಅತಿಹೆಚ್ಚು ಮತಗಳು ಬರಲಿವೆ. ಈ ಬಾರಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರನ್ನ ಕ್ಷೇತ್ರದ ಜನತೆ ಗೆಲ್ಲಿಸಿದರೆ ರಾಜ್ಯದ ಜನರೇ ಚನ್ನಪಟ್ಟಣದ ಕಡೆ ತಿರುಗಿ ನೋಡಲಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನ ಗೆಲ್ಲಿಸಿದ ಕೀರ್ತಿ ಚನ್ನಪಟ್ಟಣದ ಜನರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಮೇ 12ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಹೊರಬೀಳಲಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಸಿಪಿ ಯೋಗೇಶ್ವರ ಅವರು ಬಿಜೆಪಿಯಿಂದ ಸ್ಪರ್ಧೆಗಿಳಿಯಲಿದ್ದಾರೆ. ಇವರಿಬ್ಬರ ಕಾದಾಟದಿಂದ ಕ್ಷೇತ್ರದತ್ತ ಎಲ್ಲರೂ ನೋಡುವಂತಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications