ಭಾರೀ ಮಳೆಗೆ ಬಾಳೆ ನಷ್ಟ: ಆತ್ಮಹತ್ಯೆಯ ಎಚ್ಚರಿಕೆ ನೀಡಿದ ರೈತ
ರಾಮನಗರ, ಮೇ 18: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಚನ್ನಪಟ್ಟಣ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ಅಪಾರ ನಷ್ಟ ಸಂಭವಿಸಿದ್ದು, ಇದರಿಂದ ನೊಂದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರಸ್ತೆ ಮೇಲೆ ಬಾಳೆ ಗಿಡಗಳನ್ನಿಟ್ಟು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.
ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ಗೋವಿಂದಹಳ್ಳಿ ಗ್ರಾಮ ಹಾಗೂ ಸುತ್ತಮುತ್ತ ತೆಂಗು ಸೇರಿದಂತೆ ಸುಮಾರು 50 ಎಕರೆ ಬಾಳೆ ತೋಟಗಳು ನೆಲಸಮವಾಗಿ ರೈತರ ಲಕ್ಷಾಂತರ ರುಪಾಯಿ ಬೆಳೆ ನಷ್ಟವಾಗಿದೆ. ಇದರಿಂದ ಮನನೊಂದ ರೈತರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಪರಿಹಾರ ಘೋಷಿಸುವಂತೆ ಅಗ್ರಹಿಸಿ ಗೋವಿಂದಹಳ್ಳಿ ರಸ್ತೆಗೆ ಬಾಳೆ ಗಿಡಗಳನ್ನು ಸುರಿದು ಪ್ರತಿಭಟನೆ ನಡೆಸಿದರು.

ಇನ್ನು ಪ್ರತಿಭಟನಾ ಸ್ಥಳಕ್ಕೆ ಬಂದ ತಹಶೀಲ್ದಾರ್ ಸುದರ್ಶನ್, ನೊಂದ ರೈತರ ಮನವೊಲಿಸುವ ಕಾರ್ಯಕ್ಕೆ ಮುಂದಾದರು. ಈ ವೇಳೆ ರೈತರು ಹಾಗೂ ತಹಶೀಲ್ದಾರ್ ನಡುವೆ ಕೆಲ ಸಮಯ ಮಾತಿನ ಚಕಮಕಿ ನಡೆಯಿತು. ಈ ವೇಳೆ ಓರ್ವ ರೈತ ಸೂಕ್ತ ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದರು.

ಇತ್ತೀಚಿಗೆ ಕಿಡ್ನಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೂರಣಗೆರೆ ಗ್ರಾಮದ ರೈತ ಕುಮಾರ್, ತಹಶೀಲ್ದಾರ ಅವರಿಗೆ ಕೈ ಮುಗಿದು ಸೂಕ್ತ ಪರಿಹಾರ ಕೊಡಬೇಕು, ಇಲ್ಲದಿದ್ದರೆ ಕುಟುಂಬದವರೆಲ್ಲಾ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications