ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರೀ ಮಳೆಗೆ ಬಾಳೆ ನಷ್ಟ: ಆತ್ಮಹತ್ಯೆಯ ಎಚ್ಚರಿಕೆ ನೀಡಿದ ರೈತ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ 18: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಚನ್ನಪಟ್ಟಣ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ಅಪಾರ ನಷ್ಟ ಸಂಭವಿಸಿದ್ದು, ಇದರಿಂದ ನೊಂದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರಸ್ತೆ ಮೇಲೆ ಬಾಳೆ ಗಿಡಗಳನ್ನಿಟ್ಟು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.

ರಾಮನಗರದಲ್ಲಿ ಗುಡುಗು ಸಹಿತ ಮಳೆ; ಬಾಳೆ, ರೇಷ್ಮೆ ನಾಶರಾಮನಗರದಲ್ಲಿ ಗುಡುಗು ಸಹಿತ ಮಳೆ; ಬಾಳೆ, ರೇಷ್ಮೆ ನಾಶ

ರಾತ್ರಿ ಸುರಿದ ಮಳೆಗೆ ತಾಲ್ಲೂಕಿನ ಗೋವಿಂದಹಳ್ಳಿ ಗ್ರಾಮ ಹಾಗೂ ಸುತ್ತಮುತ್ತ ತೆಂಗು ಸೇರಿದಂತೆ ಸುಮಾರು 50 ಎಕರೆ ಬಾಳೆ ತೋಟಗಳು ನೆಲಸಮವಾಗಿ ರೈತರ ಲಕ್ಷಾಂತರ ರುಪಾಯಿ ಬೆಳೆ ನಷ್ಟವಾಗಿದೆ. ಇದರಿಂದ ಮನನೊಂದ ರೈತರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಪರಿಹಾರ ಘೋಷಿಸುವಂತೆ ಅಗ್ರಹಿಸಿ ಗೋವಿಂದಹಳ್ಳಿ ರಸ್ತೆಗೆ ಬಾಳೆ ಗಿಡಗಳನ್ನು ಸುರಿದು ಪ್ರತಿಭಟನೆ ನಡೆಸಿದರು.

Farmer Who Gave Warning Of Suicide In Ramanagara

ಇನ್ನು ಪ್ರತಿಭಟನಾ ಸ್ಥಳಕ್ಕೆ ಬಂದ ತಹಶೀಲ್ದಾರ್ ಸುದರ್ಶನ್, ನೊಂದ ರೈತರ ಮನವೊಲಿಸುವ ಕಾರ್ಯಕ್ಕೆ ಮುಂದಾದರು. ಈ ವೇಳೆ ರೈತರು ಹಾಗೂ ತಹಶೀಲ್ದಾರ್ ನಡುವೆ ಕೆಲ ಸಮಯ ಮಾತಿನ ಚಕಮಕಿ ನಡೆಯಿತು. ಈ ವೇಳೆ ಓರ್ವ ರೈತ ಸೂಕ್ತ ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದರು.

Farmer Who Gave Warning Of Suicide In Ramanagara

ಇತ್ತೀಚಿಗೆ ಕಿಡ್ನಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೂರಣಗೆರೆ ಗ್ರಾಮದ ರೈತ ಕುಮಾರ್, ತಹಶೀಲ್ದಾರ ಅವರಿಗೆ ಕೈ ಮುಗಿದು ಸೂಕ್ತ ಪರಿಹಾರ ಕೊಡಬೇಕು, ಇಲ್ಲದಿದ್ದರೆ ಕುಟುಂಬದವರೆಲ್ಲಾ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

English summary
Many villages in Channapatna taluk have suffered heavy rainfall last night along with a storm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X