ಮಳೆ ಅಬ್ಬರ: ಚನ್ನಪಟ್ಟಣ, ರಾಮನಗರಗಳಲ್ಲಿ ಕುಡಿಯುವ ನೀರು ಸರಬರಾಜು ಬಂದ್
ರಾಮನಗರ, ಆಗಸ್ಟ್, 03: ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿದ ಕಾರಣ ರಾಮನಗರ ಜಿಲ್ಲೆಯ ಕೆರೆ ಕಟ್ಟೆ ಹಾಗೂ ಜಲಾಶಯಗಳು ಭರ್ತಿಯಾಗಿದ್ದು, ಜನ ಜೀನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮಳೆಯ ಅವಾಂತರದಿಂದ ರಾಮನಗರ ಮತ್ತು ಚನ್ನಪಟ್ಟಣ ನಗರಗಳಲ್ಲಿ ಕುಡಿಯುವ ನೀರಿನ ಸರಬರಾಜು ಬಂದ್ ಆಗಿದೆ.
ರಾಮನಗರ ಹಾಗೂ ಚನ್ನಪಟ್ಟಣ ನಗರದ ಬಡವಾಣೆಗಳಿಗೆ ಟಿ.ಕೆ.ಹಳ್ಳಿಯಲ್ಲಿರುವ ಶಿಂಷಾ ನದಿ ಮೂಲದಿಂದ ಕಾವೇರಿ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡಲಾಗುತಿತ್ತು. ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗಿ ಟಿ.ಕೆ. ಹಳ್ಳಿಯಲ್ಲಿರುವ ಶಿಂಷಾ ನದಿಯ ನೀರಿನ ಹರಿವು ಹೆಚ್ಚಾಗಿ ಪ್ರವಾಹ ಸ್ಥತಿ ನಿರ್ಮಾಣವಾಗಿದೆ. ಆದ್ದರಿಂದ ಚನ್ನಪಟ್ಟಣ ಮತ್ತು ರಾಮನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಲಶುದ್ಧೀಕರಣ ಘಟಕ ಹಾಗೂ ವಿದ್ಯುತ್ ಸ್ಥಾವರಗಳು ಜಲಾವೃತವಾಗಿವೆ. ನಂತರ ಅಲ್ಲಿ ತಾಂತ್ರಿಕ ಕಾರಣದಿಂದ ನೀರು ಸರಬರಾಜನ್ನು ಅನಿವಾರ್ಯವಾಗಿ ಸ್ಥಗಿತಗೊಳಸಲಾಗಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯ ಭರ್ತಿಯಾಗಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ಅರ್ಕಾವತಿ ನದಿ ಪಾತ್ರಕ್ಕೆ ಬಿಡಲಾಗಿದೆ. ಇದರಿಂದ ಅರ್ಕಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ, ದ್ಯಾವರಸೇಗೌಡನ ದೊಡ್ಡಿ ಬಳಿ ರಾಮನಗರದ ವಾರ್ಡ್ ಸಂಖ್ಯೆ 1ರಿಂದ 10 ಮತ್ತು 12ನೇ ವಾರ್ಡ್ಗಳಿಗೆ ಕುಡಿಯುವ ನೀರು ಸರಬರಾಜು ಪಂಪಿನ ಯಂತ್ರಗಾರವನ್ನು ಸ್ಥಗಿತಗೊಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಂತ್ರೋಪಕರಣಗಳ ಘಟಕಗಳು ಜಲಾವೃತವಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಇಂದಿನಿಂದ ಸುಮಾರು 3 ದಿನಗಳವರೆಗೆ ಚನ್ನಪಟ್ಟಣ ಹಾಗೂ ರಾಮನಗರಗಳಿಗೆ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಟಿ.ಕೆ. ಹಳ್ಳಿಯಲ್ಲಿರುವ ಶಿಂಷಾ ನದಿ, ಅರ್ಕಾವತಿ ನದಿಯ ನೀರಿನ ಹರಿವು ಕಡಿಮೆಯಾದ ನಂತರ ಸಾರ್ವಜನಿಕರಿಗೆ ಎಂದಿನಂತೆ ನೀರು ಸರಬರಾಜು ಮಾಡಲಾಗುವುದು. ಸಾರ್ವಜನಿಕರು ಚನ್ನಪಟ್ಟಣ ನಗರಸಭೆ, ರಾಮನಗರ ನಗರಸಭೆ ಹಾಗೂ ಜಲಮಂಡಳಿಯೊಂದಿಗೆ ಸಹಕರಿಸಲು ಕೋರಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications