ರಾಮನಗರ ಯುವತಿ ಹತ್ಯೆ ಪ್ರಕರಣ: ತಂದೆ, ತಮ್ಮನಿಂದಲೇ ಕೊಲೆ
ರಾಮನಗರ, ಅಕ್ಟೋಬರ್ 16: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರಿನ ಬೆಟ್ಟಹಳ್ಳಿಯಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯನ್ನು ರಾಮನಗರ ಪೊಲೀಸರು ನೀಡಿದ್ದಾರೆ.
ರಾಮನಗರ ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೇಂದ್ರ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್, ಇದು ಮರ್ಯಾದಾ ಹತ್ಯೆಯಾಗಿದ್ದು, ಕೊಲೆಯಾದ ಹೇಮಲತಾ (19)ಳ ತಂದೆ ಹಾಗೂ ತಮ್ಮನೇ ಕೊಲೆ ಆರೋಪಿಗಳೆಂದು ಮಾಹಿತಿ ನೀಡಿದ್ದಾರೆ. ಮೃತ ಯುವತಿಯ ತಂದೆ ಕೃಷ್ಣಪ್ಪ (46), ತಮ್ಮ ಯೋಗೇಶ್ (19), ಮತ್ತೊಬ್ಬ ಯೋಗೇಶ್ ಸ್ನೇಹಿತ(ಬಾಲಪರಾಧಿ) ಬಂಧಿತ ಆರೋಪಿಗಳಾಗಿದ್ದಾರೆ.
ಅನ್ಯಜಾತಿಯ ಯುವಕನ ಜೊತೆ ಪ್ರೀತಿ ಸಂಬಂಧ ಹೊಂದಿದ್ದ ಯುವತಿ ಹೇಮಲತಾಳ ಹತ್ಯೆ ನಡೆದಿದೆ. ಇವರ ಪ್ರೀತಿ ವಿಚಾರವಾಗಿ ಹೇಮಲತಾಗೆ ಕುಟುಂಬಸ್ಥರು ಈ ಮುನ್ನವೇ ಎಚ್ಚರಿಕೆ ಕೊಟ್ಟಿದ್ದರು ಎನ್ನಲಾಗಿದೆ. ಹೇಮಲತಾಗೆ ಬುದ್ಧಿ ಹೇಳಲು ತೋಟದ ಕಡೆಗೆ ತಂದೆ ಹಾಗೂ ತಮ್ಮ ಕರೆದೊಯ್ದಾಗ, ಯುವತಿಯ ತಮ್ಮ ಯೋಗೇಶ್ ಹೇಮಲತಾ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಇದು ಮರ್ಯಾದಾ ಹತ್ಯೆ ಪ್ರಕರಣವಾಗಿದೆ ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ರಾಮನಗರ ಎಸ್ಪಿ ಎಸ್.ಗಿರೀಶ್, ಎಎಸ್ಪಿ ರಾಮರಾಜನ್ ಭಾಗಿಯಾಗಿದ್ದರು.

ಘಟನೆ ವಿವರ
ಯುವತಿ ಮನೆಯಿಂದ ಕಾಣೆಯಾಗಿ ಮೂರು ದಿನಗಳ ನಂತರ ದೊಡ್ಡಪ್ಪನ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿತ್ತು. ಪ್ರಿಯಕರನೇ ಕೊಲೆ ಮಾಡಿದ್ದಾನೆ ಎಂದು ಮೃತ ಹೇಮಲತಾ ಪೋಷಕರೇ ಆರೋಪಿಸಿದ್ದರು. ಅಲ್ಲದೇ ಹೇಮಲತಾ ಕಾಣೆಯಾಗಿರುವ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ಸಲ್ಲಿಸಿದ್ದರು.

ಪೋಷಕರೇ ಪೊಲೀಸ್ ದೂರು ನೀಡಿದ್ದರು
ಪೋಷಕರು ನೀಡಿದ ದೂರು ದಾಖಲಿಸಿಕೊಂಡ ಕುದೂರು ಪೊಲೀಸರು ತನಿಖೆ ಕೈಗೊಂಡ ಬೆನ್ನಲ್ಲೇ, ಅ.10ರಂದು ಶನಿವಾರ ಬೆಳಗ್ಗೆ ಸ್ಥಳೀಯರು ಹೇಮಲತಾಗಾಗಿ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಜಮೀನಿನ ಪಕ್ಕದಲ್ಲೇ ಹುಡುಗಿಯ ಒಂದು ಚಪ್ಪಲಿ ಸಿಕ್ಕಿದೆ. ಅಕ್ಕಪಕ್ಕದಲ್ಲಿ ಹುಡುಕಾಡಿದಾಗ ರಕ್ತಸಿಕ್ತವಾದ ಕಲ್ಲು ಪತ್ತೆಯಾಗಿದೆ. ಅಲ್ಲಿಂದ ಮುಂದೆ ನೋಡುತ್ತಾ ಹೋದಂತೆ ಹೇಮಲತಾ ಸಂಬಂಧಿ ರವೀಂದ್ರಕುಮಾರ್ ಜಮೀನಿನಲ್ಲೇ ಮೃತದೇಹ ಪತ್ತೆಯಾಗಿತ್ತು.

ಯುವತಿಯ ಕುಟುಂಬದವರಿಂದಲೇ ಹತ್ಯೆ
ಕುದೂರು ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಹೇಮಲತಾ ಅದೇ ಗ್ರಾಮದ ಪುನೀತ್ ಎಂಬಾತನನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಯುವತಿಯ ಕುಟುಂಬದವರಿಂದಲೇ ಹತ್ಯೆಯಾಗಿದೆ. ದೊಡ್ಡಪ್ಪನ ಜಮೀನನಲ್ಲಿ ಹೇಮಲತಾ ಶವ ಸಿಕ್ಕಿತ್ತು.
Recommended Video

ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದರು
ಅನ್ಯಜಾತಿಯ ಯುವಕನ ಪ್ರೇಮ ಪಾಶದಲ್ಲಿ ಸಿಲುಕಿದ್ದ ಮೃತ ಹೇಮಲತಾಳನ್ನು ಮರ್ಯಾದೆಗೆ ಅಂಜಿ, ಮೃತಳ ಪೋಷಕರೇ ಹತ್ಯೆ ಮಾಡಿದ್ದಾರೆ ಎಂದು ಹೇಮಲತಾಳ ಪ್ರೇಮಿಯ ತಾಯಿ ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದರು. ಮೃತ ಹೇಮಲತಾ ಪ್ರೇಮಿಯ ತಾಯಿ ರತ್ನಮ್ಮ ಮಾತನಾಡಿ, ನನ್ನ ಮಗ ತಪ್ಪು ಮಾಡಿದರೆ ನಾನೇ ಮುಂದೆ ನಿಂತು ಶಿಕ್ಷೆ ಕೊಡಿಸುತ್ತೇನೆ. ಇಲ್ಲ ಸಲ್ಲದ ಆರೋಪಗಳನ್ನು ನನ್ನ ಮಗನ ಮೇಲೆ ಮಾಡುತ್ತಿದ್ದಾರೆ ಎಂದು ಹೇಳಿದ್ದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ










Click it and Unblock the Notifications