ರಾಮನಗರ ಜಿ.ಪಂ ನೂತನ ಅಧ್ಯಕ್ಷರ ನೇಮಕ: ಸಾಮಾಜಿಕ ಅಂತರ ಮರೆತ ಕಾಂಗ್ರೆಸ್ ಮುಖಂಡರು
ರಾಮನಗರ, ಸೆಪ್ಟೆಂಬರ್ 11: ರಾಮನಗರ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಕೂಟಗಲ್ ಜಿ.ಪಂ ಕ್ಷೇತ್ರದ ಸದಸ್ಯ ಎಚ್.ಎನ್ ಅಶೋಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧಿಕಾರ ಸಿಕ್ಕ ಮರು ಘಳಿಗೆಯಲ್ಲಿ ನೂತನ ಅಧ್ಯಕ್ಷರು ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೋವಿಡ್-19 ನಿಯಮಗಳನ್ನು ಗಾಳಿಗೆ ತೂರಿದರು.
ಮಾಗಡಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಎಚ್.ಸಿ ಬಾಲಕೃಷ್ಣ ಸಹೋದರ ಎಚ್.ಎನ್ ಅಶೋಕ್ ಅವರು, ಡಿಕೆಶಿ ಸಹೋದರ ಬೆಂಬಲದೊಂದಿಗೆ ಇಂದು ನಡೆದ ಚುನಾವಣೆಯಲ್ಲಿ ಜಿ.ಪಂ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಿಗೆ ಶುಭ ಕೋರಲು ಗುಂಪುಗುಂಪಾಗಿ ಯಾವುದೇ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಇಲ್ಲದೇ ನೂರಾರು ಜನ ಒಂದೆಡೆ ಸೇರಿ ಕೊರೊನಾ ನಿಯಮ ಉಲ್ಲಂಘನೆ ಮಾಡಿದರು.
ಪಂಚಾಯತ್ ಸಭಾಂಗಣದಲ್ಲಿ ಹಾರ-ತುರಾಯಿ ಹಿಡಿದು ಗುಂಪುಗುಂಪಾಗಿ ಸೇರಿದ ಅಭಿಮಾನಿಗಳಿಗೆ ಬುದ್ಧಿ ಹೇಳಬೇಕಾದ ಅಧ್ಯಕ್ಷರೇ ಸ್ವತಃ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನೂ ಪಾಲಿಸಲಿಲ್ಲ. ಇನ್ನು ಕೋವಿಡ್-19 ನಿಯಮಗಳನ್ನು ಅನುಷ್ಠಾನಕ್ಕೆ ತಂದು, ಪರಿಸ್ಥಿತಿ ನಿರ್ವಹಿಸುವಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸಂಪೂರ್ಣ ವಿಫಲರಾದರು.

ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಎಚ್.ಎನ್ ಅಶೋಕ್, ""ಕೋವಿಡ್-19 ಸಂಕಷ್ಟದ ಕಾಲದಲ್ಲಿ ಜಿಲ್ಲಾ ಪಂಚಾಯತ್ ಆಡಳಿತವನ್ನು ಸಮರ್ಥವಾಗಿ ನಡೆಸುವುದಾಗಿ'' ವಿಶ್ವಾಸ ವ್ಯಕ್ತಪಡಿಸಿದರು. ಅಧಿಕಾರ ಸ್ವೀಕರಿಸಿದ ಕ್ಷಣದಲ್ಲೇ ಕೋವಿಡ್-19 ನಿಯಮಗಳನ್ನೇ ಗಾಳಿ ತೋರಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ, ""ಹೌದು, ತಪ್ಪಾಗಿದೆ ಪ್ರೀತಿಯನ್ನು ವ್ಯಕ್ತಪಡಿಸುವ ಬರದಲ್ಲಿ ಲೋಪವಾಗಿದೆ, ಕ್ಷಮಿಸಿ'' ಎಂದು ವಿಷಾದ ವ್ಯಕ್ತಪಡಿಸಿದರು.
Recommended Video
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications