ರಾಮನಗರ; ಹಬ್ಬ ಮಾಡೋಣ ಎಂದು ಹೊಲದಲ್ಲಿ ಹೆಂಡತಿಯನ್ನೇ ಕೊಂದು ಹಾಕಿದ ಗಂಡ

ರಾಮನಗರ, ಜನವರಿ 17: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅರಳೆಕಟ್ಟೆ ದೊಡ್ಡಿಯಲ್ಲಿ ನಡೆದಿದೆ.

Recommended Video

      ರಶ್ಮಿಕಾ ಕುಟುಂಬದ ಒಟ್ಟು ಆಸ್ತಿ ವಿವರ ಗೊತ್ತಾ? | RASHMIKA MANDANNA | IT RAID | FILMIBEAT KANNADA

      ತಾಲೂಕಿನ ಗಟ್ಟೀಪುರ ಸಮೀಪದ ಅರಳೆಕಟ್ಟೆ ದೊಡ್ಡಿಯಲ್ಲಿ ಘಟನೆ ನಡೆದಿದ್ದು, ಮಾಗಡಿ ತಾಲೂಕಿನ ಸೋಲೂರಿನ ಪಾರ್ವತಿ (35) ಕೊಲೆಯಾದ ಮಹಿಳೆ. ಸ್ವಾಮಿ ಎಂಬಾತ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

      ಬೆಂಗಳೂರಿನಲ್ಲಿ ವಾಸವಾಗಿದ್ದ ಸ್ವಾಮಿ ಮುನಿಯಪ್ಪನ ಹಬ್ಬ ಮಾಡೋಣ ಎಂದು ತಮ್ಮ ಹುಟ್ಟೂರಾದ ಅರಳೆಕಟ್ಟೆದೊಡ್ಡಿಗೆ ಹೆಂಡತಿ ಪಾರ್ವತಿಯನ್ನು ಕರೆದುಕೊಂಡು ಬಂದಿದ್ದ.‌ ಅಂದೇ ಸಂಜೆ ಹೊಲಕ್ಕೆ ಕರೆದೊಯ್ದು ಮಾರಕಾಸ್ತ್ರದಿಂದ ತಲೆಗೆ ಹೊಡೆದಿದ್ದಾನೆ. ಬಳಿಕ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

      Husband Murder Wife In Aralekatte Doddi

      ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು‌ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ‌ ಮುಂದುವರಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+