ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ ಎಂದ ಜೆಡಿಎಸ್ ನ ಮಾಜಿ ಉಪ ಸಭಾಪತಿ ಪುಟ್ಟಣ್ಣ
ರಾಮನಗರ, ಜನವರಿ 29: ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಾಣೆಗೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಜೆಡಿಎಸ್ ಮಾಜಿ ವಿಧಾನ ಪರಿಷತ್ ಉಪ ಸಭಾಪತಿ ಪುಟ್ಟಣ್ಣ ಹೇಳಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಪುಟ್ಟಣ್ಣ ಅವರು, ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಾಣೆಗೆ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ. ಶೇ. 100 ರಷ್ಟು ಗೆಲ್ಲುವ ವಿಶ್ವಾಸವಿದೆ, ಜೆಡಿಎಸ್ ನಲ್ಲಿದ್ದಾಗ ಚುನಾವಣೆ ಗೆಲ್ಲುವ ಭಯವಿತ್ತು, ಆದರೆ ಈಗ ನನಗೆ ಯಾವುದೇ ಭಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರೇಳದೇ ಟಾಂಗ್ ಕೊಟ್ಟರು.
ಜೆಡಿಎಸ್ ತೊರೆದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಮಾಡುವುದರ ಕುರಿತು ಇಂದು ಚನ್ನಪಟ್ಟಣದಲ್ಲಿ ಶಿಕ್ಷಕರ ಸಭೆ ನಡೆಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೂಂದಿಗೆ ಮಾತನಾಡಿದ ಅವರು ತಮ್ಮ ಮಾತಿನ ಉದ್ದಕ್ಕೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ನನ್ನ ಕ್ಷೇತ್ರದ 36 ವಿಧಾನ ಸಭಾ ಕ್ಷೇತ್ರಗಳಲ್ಲಿ 4-5 ಜೆಡಿಎಸ್ ಶಾಸಕರು, 8-10 ಕಾಂಗ್ರೆಸ್ ಶಾಸಕರು ಹಾಗೂ 25 ಬಿಜೆಪಿ ಶಾಸಕರು ಪ್ರತಿನಿಧಿಸುತ್ತಾರೆ. ಹಾಗಾಗಿ ಈ ಬಾರಿ ಗೆಲುವು ಸಲೀಸು. ನಾನು ಸುಳ್ಳು ಮತ್ತು ಮೋಸ ಮಾಡುವವನಲ್ಲ, ಸುಳ್ಳು ಹೇಳಿ ಮೋಸ ಮಾಡುವ ಸಂದರ್ಭ ಬಂದರೆ ರಾಜಕೀಯ ಬಿಡುತ್ತೇನೆ. ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಜೆಡಿಎಸ್ ಪಕ್ಷದಲ್ಲಿ ತನಗಾಗಿರುವ ತೊಂದರೆ ಬಗ್ಗೆ ಮಾತನಾಡಿದ ಪುಟ್ಟಣ್ಣ, "ಅತ್ತೆ ಕೊಟ್ಟ ಕಾಟ ಸೊಸೆಗೆ ಗೊತ್ತು, ಸೊಸೆ ಕೊಟ್ಟ ಕಾಟ ಅತ್ತೆಗೆ ಗೊತ್ತು' ಅದೇ ರೀತಿ ನಮಗಾಗಿರುವ ಸಮಸ್ಯೆಗಳು ನಮಗೆ ಗೊತ್ತಿದೆ. ಸಮಯ ಸಂದರ್ಭ ಬರಲಿ ಮಾತಾಡ್ತೇನೆ ಎಂದರು.

ಪ್ರಸ್ತುತ ಈ ವ್ಯವಸ್ಥೆಯಲ್ಲಿ ಯಾರ್ಯಾರು ಏನೇನು ಆಗಿದ್ದಾರೆಂದು ನೋಡಿದ್ದೇವೆ. ಈಗ ಗುಡ್ಡನೇ ಕುಸಿಯುತ್ತಿದೆ, ಅದನ್ನು ಕಾಪಾಡಿಕೊಳ್ಳಲಿ ಅಷ್ಟೇ. ಪಕ್ಷಕ್ಕೆ ಪ್ರತಿಯೊಬ್ಬ ಕಾರ್ಯಕರ್ತನು ಕೂಡ ಮುಖ್ಯ, ಜೆಡಿಎಸ್ ಪಕ್ಷದಲ್ಲಿ ಒಂದೊಂದೇ ಇಟ್ಟಿಗೆಗಳು ಕಳಚಿಕೊಳ್ಳುತ್ತಿವೆ. ಅವರಿಗೆ ಒಳ್ಳೆಯದಾಗಲಿ ಎಂದು ಮಾಜಿ ಸಿಎಂ ಹೆಚ್ಡಿಕೆ ಹೆಸರೇಳದೆ ಚಾಟಿ ಬೀಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications