'ಡಿಕೆಶಿ ಜತೆ ಹೊಂದಾಣಿಕೆ ಮಾಡಿಕೊಂಡು ಕಾರ್ಯಕರ್ತರಿಗೆ ವಿಷ ಹಾಕಲ್ಲ'

Recommended Video

      ಸಿದ್ದರಾಮಯ್ಯ ಹಾಗು ಡಿ ಕೆ ಶಿವಕುಮಾರ್ ಮೇಲೆ ವಾಗ್ದಾಳಿ ನಡೆಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

      ರಾಮನಗರ, ಜನವರಿ 23: "ಚನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಅವರನ್ನು ಕಣಕ್ಕೆ ಇಳಿಸಲು ಡಿ.ಕೆ. ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೀನಿ ಅನ್ನೋದೆಲ್ಲ ಸುಳ್ಳು. ರಾಜಕೀಯ ಜೀವನದಲ್ಲಿ ಗೆಲ್ತೀನೋ ಸೋಲ್ತಿನೋ ಗೊತ್ತಿಲ್ಲ. ಆದರೆ ಗೆಲುವು ಸಾಧಿಸಬೇಕು ಅನ್ನೋ ಕಾರಣಕ್ಕೆ ಕಾರ್ಯಕರ್ತರಿಗೆ ವಿಷ ಹಾಕುವ ಕೆಲಸ ಮಾಡುವುದಿಲ್ಲ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಡದಿಯಲ್ಲಿ ಹೇಳಿದರು.

      ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಕಾರ್ಯಕರ್ತನಿಗೆ ಐದು ಕೋಟಿ ಕೊಟ್ಟು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಬೇಕಾದಷ್ಟು ಕಾರ್ಯಕರ್ತರನ್ನು ಸೆಳೆಯಲಿ ಎಂದ ಎಚ್ಡಿಕೆ, ನಮ್ಮ ಒಬ್ಬ ಕಾರ್ಯಕರ್ತನನ್ನು ಸೆಳೆಯಲು ಐದು ಕೋಟಿ ಖರ್ಚು ಮಾಡುವ ಮುಖ್ಯಮಂತ್ರಿಗಳು ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಷ್ಟು ಕೋಟಿ ಖರ್ಚು ಮಾಡಬಹುದು ಎಂದು ಪ್ರಶ್ನಿಸಿದರು.

      ಈಗ ಚಿಕ್ಕಮಾದು ಕುಟುಂಬದವರನ್ನು ಪಕ್ಷಕ್ಕೆ ಸೆಳೆಯಲು ಮಾತುಕತೆ ನಡೆಸುತ್ತಿದ್ದಾರೆ. ಎಷ್ಟು ಮುಖಂಡರನ್ನು ಅನ್ಯ ಪಕ್ಷದವರು ಕೈಬಿಟ್ಟಾಗ ಕರೆತಂದು ಅವರಿಗೆ ಸಕಲ ಸವಲತ್ತು ಒದಗಿಸಿ ಬೆಳೆಸಿದ್ದೇವೆ. ಕೊನೆಗೆ ಅವರೇ ನಮಗೆ ದ್ರೋಹ ಎಸಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಕಾಂಗ್ರೆಸ್ ಸೇರಿದ ಮೇಲೆ ಹಣ-ಸೀರೆ ಕೊಟ್ಟು ಜನರನ್ನು ಕರೆಸ್ತಾರೆ

      ಕಾಂಗ್ರೆಸ್ ಸೇರಿದ ಮೇಲೆ ಹಣ-ಸೀರೆ ಕೊಟ್ಟು ಜನರನ್ನು ಕರೆಸ್ತಾರೆ

      ಇದೇ ವೇಳೆ ಭಿನ್ನಮತೀಯ ಶಾಸಕರ ವಿರುದ್ದ ವಾಗ್ದಾಳಿ ನಡೆಸಿ, ದೊಡ್ಡ ತಪ್ಪು ಮಾಡಿದ್ದೇನೆ. ಅದಕ್ಕೆ ಪ್ರಾಯಶ್ಚಿತ್ತ ಅನುಭವಿಸುತ್ತಿದ್ದೇನೆ. ಮಾಗಡಿ ಶಾಸಕರು ನಮ್ಮ ಜೊತೆಯಿದ್ದಾಗ ಸಮಾರಂಭಗಳಿಗೆ ಹಣ ಕೊಡದಿದ್ದರೂ ಜನ ಬರುತ್ತಿದ್ದರು. ಆದರೆ ಅವರೀಗ ಕಾಂಗ್ರೆಸ್ ಸೇರಿದ ಮೇಲೆ ಜನರಿಗೆ ಹಣ- ಸೀರೆ ಕೊಟ್ಟು ಸಮಾವೇಶಕ್ಕೆ ಜನರನ್ನು ಕರೆತರುತ್ತಿದ್ದಾರೆ. ಅಂಥ ಸ್ಥಿತಿ ನಿರ್ಮಾಣವಾಗಿದೆ ಎಂದರು.

      ಶ್ರೀರಂಗ ಪಟ್ಟಣದಲ್ಲಿ ಬೆಳ್ಳಿ ಸಾಮಾನು ಹಂಚಿದರು

      ಶ್ರೀರಂಗ ಪಟ್ಟಣದಲ್ಲಿ ಬೆಳ್ಳಿ ಸಾಮಾನು ಹಂಚಿದರು

      ಶ್ರೀರಂಗಪಟ್ಟಣ ಸಮಾವೇಶದಲ್ಲಿ ಜನರಿಗೆ ಬೆಳ್ಳಿ ಸಾಮಾನು ಹಂಚಿ ಸಮಾವೇಶಕ್ಕೆ ಜನರನ್ನು ಕರೆತಂದಿದ್ದಾರೆ. ನಮ್ಮ ಸಮಾವೇಶಗಳಿಗೆ ಸಾಗರದಂತೆ ಬರುವ ಜನರನ್ನು ಮಾಧ್ಯಮಗಳು ತೋರಿಸುವುದಿಲ್ಲ. ನಾನು ನಕಾರಾತ್ಮಕವಾಗಿ ಮಾತನಾಡಿದರೆ ಮಾತ್ರ ತೋರಿಸುತ್ತಾರೆ. ಮಾಧ್ಯಮಗಳ ಸಮೀಕ್ಷೆಯನ್ನೆಲ್ಲ ಸುಳ್ಳು ಮಾಡಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

      ಕುಮಾರಸ್ವಾಮಿ ಸ್ಪಷ್ಟನೆ

      ಕುಮಾರಸ್ವಾಮಿ ಸ್ಪಷ್ಟನೆ

      ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅನಿತಾ ಅವರನ್ನು ಕಣಕ್ಕಿಳಿಸುವ ಇರಾದೆ ಜೆಡಿಎಸ್ ಗಿದೆ. ಅಲ್ಲಿ ಈಚೆಗೆ ಬಿಜೆಪಿಗೆ ಸೇರ್ಪಡೆ ಆಗಿರುವ ಸಿ.ಪಿ.ಯೋಗೇಶ್ವರ್ ನನ್ನು ಸೋಲಿಸಲು ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅದಕ್ಕೆ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

      ಡಿಕೆಶಿ- ಸುರೇಶ್ ವಿರುದ್ಧ ವಾಗ್ದಾಳಿ

      ಡಿಕೆಶಿ- ಸುರೇಶ್ ವಿರುದ್ಧ ವಾಗ್ದಾಳಿ

      ಸಿ.ಪಿ.ಯೋಗೇಶ್ವರ್ ಈಚೆಗೆ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸೋದರ- ಸಂಸದ ಡಿ.ಕೆ.ಸುರೇಶ್ ವಿರುದ್ಧ ಭಾರೀ ವಾಗ್ದಾಳಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಹೇಗಾದರೂ ಯೋಗೇಶ್ವರ್ ನನ್ನು ಸೋಲಿಸಬೇಕು ಎಂಬುದು ಡಿಕೆಶಿ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿದೆ. ಆ ಕಾರಣಕ್ಕೆ ಜೆಡಿಎಸ್ ಗೆ ಬೆಂಬಲ ನೀಡಿಯಾದರೂ ತಮ್ಮ ಪ್ರತೀಕಾರ ತೀರಿಸಿಕೊಳ್ಳುತ್ತಾರೆ ಎಂಬುದು ಸ್ಥಳೀಯವಾಗಿ ಕೇಳಿಬರುತ್ತಿರುವ ಮಾತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+