ನಾನು ಅಭ್ಯರ್ಥಿಯಾಗಲ್ಲ, ಚುನಾವಣೆ ಪ್ರಚಾರ ಮಾಡುವೆ: ನಿಖಿಲ್
Recommended Video

ರಾಮನಗರ, ಡಿಸೆಂಬರ್ 11 : 'ನಮ್ಮ ತಂದೆಗೊಸ್ಕರ ರಾಜ್ಯದಲ್ಲಿ ಪಕ್ಷದ ಪರ ಪ್ರಚಾರ ಮಾಡುವೆ ನನಗೆ ಅಭ್ಯರ್ಥಿಯಾಗುವ ಆಸೆ ಇಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ಗೌಡ ರಾಮನಗರದಲ್ಲಿ ತಿಳಿಸಿದರು.
ಕಾರ್ಯನಿಮಿತ ಮೈಸೂರಿಗೆ ತೆರಳುತ್ತಿದ್ದ ನಿಖಿಲ್ ಅವರನ್ನು ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಜ್ವಲ್ ರೇವಣ್ಣ ಬಗ್ಗೆ ನಿಖಿಲ್ ಗೌಡ ಹೇಳಿದ್ದು ಹೀಗೆ
ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನ ಪಕ್ಷದ ವರಿಷ್ಠರು ಹಾಗೂ ಮುಖಂಡರು ತೀರ್ಮಾನ ಮಾಡುತ್ತಾರೆ. ನನಗೆ ಅಭ್ಯರ್ಥಿಯಾಗುವ ಯಾವುದೇ ಆಸೆ ಇಲ್ಲ ಸದ್ಯಕ್ಕೆ ಸಿನಿಮಾ ರಂಗದಲ್ಲಿ ಇದ್ದೇನೆ ಚುನಾವಣೆಗೆ ನಿಲ್ಲುವ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ ಎಂದು ನಿಖಿಲ್ ಹೇಳಿದರು.

75 ದಿನಗಳ ಕುರುಕ್ಷೇತ್ರ ಚಿತ್ರದ ಶೂಟಿಂಗ್ ಮುಗಿದಿದೆ ಇದೇ ತಿಂಗಳ 16 ರಂದು ಮೊದಲ ಟೀಸರ್ ಬಿಡುಗಡೆ ಮಾಡಲಾಗುವುದು ಅಂದು ನನ್ನ ತಂದೆ ಅವರ ಹುಟ್ಟು ಆ ದಿನದಂದು ಟೀಸರ್ ಬಿಡುಗಡೆ ಮಾಡಲಾಗುವುದು ಎಂದ ನಿಖಿಲ್, ಮೊದಲ ಟೀಸರ್ ಮಾಗಡಿಯಲ್ಲಿ ಬಿಡುಗಡೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ಮೂಲಕ ಮಾಗಡಿಯಲ್ಲಿ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಟಾಂಗ್ ಕೊಡುವ ಮುನ್ಸೂಚನೆ ನೀಡಿದರು.
ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆಯಿದೆ : ಅನಿತಾಕುಮಾರಸ್ವಾಮಿ
ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ನಿಖಿಲ್, ಕ್ಷೇತ್ರದ ಕಾರ್ಯಕರ್ತರು. ಮುಖಂಡರು ಮತ್ತು ಮತದಾರರು ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ, ಅದು ನಮ್ಮ ಜವಾಬ್ದಾರಿ ಕೊಡ ಅಂತಿಮವಾಗಿ ಯಾರೇ ಅಭ್ಯರ್ಥಿಗಳಾದರು ಕ್ಷೇತ್ರದ ಮತದಾರರು ಜೆಡಿಎಸ್ ಕೈಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications