ಯೋಗೀಶ್ವರ್ ಬಗ್ಗೆ ಮಾತನಾಡಲ್ಲ; ಎಚ್. ಡಿ. ಕುಮಾರಸ್ವಾಮಿ
ರಾಮನಗರ, ಜುಲೈ 23; "ಪರಿಜ್ಞಾನವಿಲ್ಲದ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರವಾಸೋದ್ಯಮ ಸಚಿವ ಸಿ. ಪಿ. ಯೋಗೀಶ್ವರ್ ವಿರುದ್ಧ ವಾಗ್ಧಾಳಿ ನಡೆಸಿದರು.
ಕನ್ನಡ ಕೂಟ ನ್ಯೂಯಾರ್ಕ್ ಮತ್ತು ಅಮ್ಮಾ ಫೌಂಡೇಶನ್ ಸಹಯೋಗದೊಂದಿಗೆ ರಾಮನಗರ ಜಿಲ್ಲೆಗೆ 42 ಲಕ್ಷ ರೂ.ವೆಚ್ಚದ ಅಗತ್ಯ ವೈದ್ಯಕೀಯ ಉಪಕರಣ ವಿತರಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
"ಆ ವ್ಯಕ್ತಿಗೆ ಏನು ಮಾತನಾಡಬೇಕು ಎನ್ನುವ ಪರಿಜ್ಞಾನ ಇಲ್ಲ. ಅಂತಹವರ ಬಗ್ಗೆ ನಾನೇನು ಮಾತನಾಡಲಿ. ನಾನು ಮಂಡ್ಯ ಮೈಶುಗರ್ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ. ಖಾಸಗಿಯವರಿಗೆ ಕೊಡಬೇಡಿ ಎಂದು ಮನವಿ ಮಾಡಲು ಹೋಗಿದ್ದೆ. ನಾನೇನು ನನ್ನ ಸ್ವಂತ ಕೆಲಸಕ್ಕೆ ಹೋಗಿದ್ದೆನಾ?" ಎಂದು ಯೋಗೀಶ್ವರ್ ಆರೋಕ್ಕೆ ತಿರುಗೇಟು ನೀಡಿದರು.

"ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಧರ್ಮಕ್ಕೆ ಕೆಲಸ ಮಾಡುತ್ತಾರಾ?. ಸರ್ಕಾರದ ಕೆಲಸಕ್ಕಾಗಿ ಸಿಎಂ ಭೇಟಿ ಮಾಡಿದ್ದೇನೆ. ಸಾರ್ವಜನಿಕರ ಕೆಲಸ ಸರ್ಕಾರದಿಂದ ಆಗಬೇಕಲ್ಲವೇ?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
"ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ರಾಮನಗರದ ರೇಷ್ಮೆ ಮಾರ್ಕೆಟ್ ವಿಚಾರವಾಗಿ ವಿಧಾನಸೌಧದಲ್ಲಿ ಸಭೆಗೂ ಹೋಗಿದ್ದೆ. ಆದರೆ ನಾನು ವೈಯಕ್ತಿಕ ಕೆಲಸಕ್ಕಾಗಿ ಯಾವ ಸಿಎಂ ಹತ್ತಿರ ಹೋಗಿಲ್ಲ. ನಾನು ಯಾರ ಬಳಿಯೂ ರಾಜೀ ಆಗಿಲ್ಲ. ಇಂತಹ ವ್ಯಕ್ತಿಗಳಿಂದ ರಾಜಕೀಯದಲ್ಲಿ ಪಾಠ ಕಲಿಯಬೇಕಿಲ್ಲ" ಎಂದು ಯೋಗೀಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.
"ನಾನು ಚನ್ನಪಟ್ಟಣದಲ್ಲಿ ಅವರಿಗೆ ಮುಳುವಾದೆ. ಹಾಗಾಗಿ ಸದಾ ನನ್ನ ಬಗ್ಗೆ ಮಾತನಾಡುತ್ತಾರೆ. ಅಲ್ಲದೇ, ನನ್ನ ಬಗ್ಗೆ, ಯಡಿಯೂರಪ್ಪ ಬಗ್ಗೆ ಮಾತನಾಡೋದೆ ಅವರಿಗೆ ಪ್ರಿಯ" ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿ. ಪಿ. ಯೋಗೀಶ್ವರ್, "ಯಡಿಯೂರಪ್ಪನವರಿಗೆ ಕುಮಾರಸ್ವಾಮಿಯನ್ನು ದೂರವಿಡಿ ಎಂದಿದ್ದೆ" ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications