ಯೋಗೀಶ್ವರ್ ಬಗ್ಗೆ ಮಾತನಾಡಲ್ಲ; ಎಚ್. ಡಿ. ಕುಮಾರಸ್ವಾಮಿ
ರಾಮನಗರ, ಜುಲೈ 23; "ಪರಿಜ್ಞಾನವಿಲ್ಲದ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರವಾಸೋದ್ಯಮ ಸಚಿವ ಸಿ. ಪಿ. ಯೋಗೀಶ್ವರ್ ವಿರುದ್ಧ ವಾಗ್ಧಾಳಿ ನಡೆಸಿದರು.
ಕನ್ನಡ ಕೂಟ ನ್ಯೂಯಾರ್ಕ್ ಮತ್ತು ಅಮ್ಮಾ ಫೌಂಡೇಶನ್ ಸಹಯೋಗದೊಂದಿಗೆ ರಾಮನಗರ ಜಿಲ್ಲೆಗೆ 42 ಲಕ್ಷ ರೂ.ವೆಚ್ಚದ ಅಗತ್ಯ ವೈದ್ಯಕೀಯ ಉಪಕರಣ ವಿತರಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
"ಆ ವ್ಯಕ್ತಿಗೆ ಏನು ಮಾತನಾಡಬೇಕು ಎನ್ನುವ ಪರಿಜ್ಞಾನ ಇಲ್ಲ. ಅಂತಹವರ ಬಗ್ಗೆ ನಾನೇನು ಮಾತನಾಡಲಿ. ನಾನು ಮಂಡ್ಯ ಮೈಶುಗರ್ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ. ಖಾಸಗಿಯವರಿಗೆ ಕೊಡಬೇಡಿ ಎಂದು ಮನವಿ ಮಾಡಲು ಹೋಗಿದ್ದೆ. ನಾನೇನು ನನ್ನ ಸ್ವಂತ ಕೆಲಸಕ್ಕೆ ಹೋಗಿದ್ದೆನಾ?" ಎಂದು ಯೋಗೀಶ್ವರ್ ಆರೋಕ್ಕೆ ತಿರುಗೇಟು ನೀಡಿದರು.

"ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಧರ್ಮಕ್ಕೆ ಕೆಲಸ ಮಾಡುತ್ತಾರಾ?. ಸರ್ಕಾರದ ಕೆಲಸಕ್ಕಾಗಿ ಸಿಎಂ ಭೇಟಿ ಮಾಡಿದ್ದೇನೆ. ಸಾರ್ವಜನಿಕರ ಕೆಲಸ ಸರ್ಕಾರದಿಂದ ಆಗಬೇಕಲ್ಲವೇ?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
"ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ರಾಮನಗರದ ರೇಷ್ಮೆ ಮಾರ್ಕೆಟ್ ವಿಚಾರವಾಗಿ ವಿಧಾನಸೌಧದಲ್ಲಿ ಸಭೆಗೂ ಹೋಗಿದ್ದೆ. ಆದರೆ ನಾನು ವೈಯಕ್ತಿಕ ಕೆಲಸಕ್ಕಾಗಿ ಯಾವ ಸಿಎಂ ಹತ್ತಿರ ಹೋಗಿಲ್ಲ. ನಾನು ಯಾರ ಬಳಿಯೂ ರಾಜೀ ಆಗಿಲ್ಲ. ಇಂತಹ ವ್ಯಕ್ತಿಗಳಿಂದ ರಾಜಕೀಯದಲ್ಲಿ ಪಾಠ ಕಲಿಯಬೇಕಿಲ್ಲ" ಎಂದು ಯೋಗೀಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.
"ನಾನು ಚನ್ನಪಟ್ಟಣದಲ್ಲಿ ಅವರಿಗೆ ಮುಳುವಾದೆ. ಹಾಗಾಗಿ ಸದಾ ನನ್ನ ಬಗ್ಗೆ ಮಾತನಾಡುತ್ತಾರೆ. ಅಲ್ಲದೇ, ನನ್ನ ಬಗ್ಗೆ, ಯಡಿಯೂರಪ್ಪ ಬಗ್ಗೆ ಮಾತನಾಡೋದೆ ಅವರಿಗೆ ಪ್ರಿಯ" ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿ. ಪಿ. ಯೋಗೀಶ್ವರ್, "ಯಡಿಯೂರಪ್ಪನವರಿಗೆ ಕುಮಾರಸ್ವಾಮಿಯನ್ನು ದೂರವಿಡಿ ಎಂದಿದ್ದೆ" ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications