'ಯೋಗೇಶ್ವರ್ ಗೆದ್ದರೆ ಚ.ಪಟ್ಟಣ ಬಸ್ಟ್ಯಾಂಡಲ್ಲಿ ನೇಣು ಹಾಕ್ಕೊಳ್ತೀನಿ'
ರಾಮನಗರ, ಏಪ್ರಿಲ್ 7: "ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಿದರೆ ಸ್ವಾಗತ. ಅವರು ವರ್ಷಕ್ಕೆ-ಎರಡು ವರ್ಷಕ್ಕೆ ಒಮ್ಮೆ ಬರುವ ಗೆಸ್ಟ್ ಲೆಕ್ಚರರ್ ಇದ್ದ ಹಾಗೆ" ಎಂದು ವಾಗ್ದಾಳಿ ನಡೆಸಿದ್ದ ಸಿ.ಪಿ.ಯೋಗೇಶ್ವರ್ ವಿರುದ್ಧ ಜೆಡಿಎಸ್ ಮುಖಂಡರು ಮುಗಿಬಿದ್ದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಕುಮಾರಸ್ವಾಮಿ ಅವರ ವಿರುದ್ಧದ ಹೇಳಿಕೆಯನ್ನು ಈ ಕೂಡಲೇ ವಾಪಸ್ ಪಡೆಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು ಸಿ.ಪಿ.ಯೋಗೇಶ್ವರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದ ಸಿ.ಪಿ.ಯೋಗೇಶ್ವರ್, ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಮಾತನಾಡಿದ್ದರು. ಇದೀಗ ಯೋಗೇಶ್ವರ್ ಗೆ ಜೆಡಿಎಸ್ ಮುಖಂಡರು ತಿರುಗೇಟು ನೀಡಿದ್ದಾರೆ.
ಯೋಗೇಶ ಚನ್ನಪಟ್ಟಣಕ್ಕೆ ಒಬ್ಬನೆ. ಆದರೆ ಕುಮಾರಸ್ವಾಮಿ ಅವರು ರಾಜ್ಯದ 224 ಕ್ಷೇತ್ರವನ್ನು ಗಮನಿಸಬೇಕು. ಪಕ್ಕದ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುವ ಶಕ್ತಿ ಯೋಗೇಶ್ವರ್ ಗೆ ಇಲ್ಲ. ಕುಮಾರಸ್ವಾಮಿ ವಿರುದ್ಧ ನೀಡಿದ ಹೇಳಿಕೆಯನ್ನು ಯೋಗೇಶ್ವರ್ ಈ ಕೂಡಲೇ ವಾಪಸ್ ಪಡೆಯಬೇಕು ಎಂದು ಮಾಜಿ ಶಾಸಕ ಎಂ.ಸಿ.ಅಶ್ವಥ್ ಗುಡುಗಿದ್ದಾರೆ.

ರಾಮನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿದ ಚನ್ನಪಟ್ಟಣದ ಜೆಡಿಎಸ್ ಮುಖಂಡರು, ಯೋಗೇಶ್ವರ್ ಮೆಗಾಸಿಟಿ ಹಗರಣದ ವಂಚಕ. ಸುಳ್ಳೇಶ್ವರ. ಅವರ ಮೇಲಿರುವ ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ಇವೆ ಎಂದು ಆರೋಪಿಸಿದರು.
ಯೋಗೇಶ್ವರ್ ಈ ಬಾರಿ ಚನ್ನಪಟ್ಟಣದಲ್ಲಿ ಗೆದ್ದರೆ ಚನ್ನಪಟ್ಟಣದ ಜೆಡಿಎಸ್ ಮುಖಂಡರೆಲ್ಲ ರಾಜಕೀಯದಿಂದ ನಿವೃತ್ತಿ ಆಗ್ತೀವಿ. ಅವನಿಗೆ ಶರಣಾಗ್ತೀವಿ. ಅವನು ಸೋತರೆ ನಮಗೆ ಶರಣಾಗಬೇಕು. ಹದಿನೆಂಟು ವರ್ಷದಿಂದ ಎಲ್ಲ ಕಾಮಗಾರಿಗಳಿಗೂ ಕಮಿಷನ್ ಪಡೆಯುತ್ತಿದ್ದಾರೆ. ಯೋಗೇಶ್ವರ್ ನೀರಾವರಿ ಭಗೀರಥ ಅಲ್ಲ, ಕಮಿಷನ್ ಭಗೀರಥ ಎಂದು ಕಿಡಿ ಕಾರಿದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಹಿರಿಯ ಮುಖಂಡ ಪುಟ್ಟಸಿದ್ದೇಗೌಡ, ಈ ಬಾರಿ ಚುನಾವಣೆಯಲ್ಲಿ ಯೋಗೇಶ್ವರ್ ಗೆದ್ದರೆ ನಾನು ಚನ್ನಪಟ್ಟಣದ ಬಸ್ ನಿಲ್ದಾಣದಲ್ಲಿ ನೇಣಿಗೆ ಶರಣಾಗ್ತೀನಿ ಎಂದು ಸವಾಲು ಹಾಕಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications