ದರೋಡೆ ನಡೆದಿದ್ದ ಎಸಿಪಿ ಸಹೋದರಿ ಮನೆಗೆ ಐಜಿ ಶರತ್ ಚಂದ್ರ ಭೇಟಿ
ರಾಮನಗರ, ಮಾರ್ಚ್ 09: ಚನ್ನಪಟ್ಟಣದಲ್ಲಿ ಹಾಡುಹಗಲೇ ನಾಲ್ವರ ತಂಡ ಮನೆಗೆ ನುಗ್ಗಿ, ಮಚ್ಚು ಝಳಪಿಸಿ ನಗನಾಣ್ಯ ದೋಚಿದ್ದ ಎಸಿಪಿ ಗೋಪಾಲ್ ಸಹೋದರಿ ಸುವರ್ಣ ಉತ್ತೇಶ್ ಮನೆಗೆ ಇಂದು ಬೆಂಗಳೂರು ಕೇಂದ್ರ ವಲಯದ ಐ.ಜಿ ಶರತ್ ಚಂದ್ರ ಸ್ಥಳಕ್ಕೆ ಭೇಟಿ ಕೊಟ್ಟು ಮನೆಯವರ ಜೊತೆಗೆ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐಜಿ ಶರತ್ ಚಂದ್ರ, ಈ ಭಾಗದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಸರಿಯಿಲ್ಲವೆಂಬ ಅಭಿಪ್ರಾಯ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವುದಾಗಿ ತಿಳಿಸಿದರು. ಜೊತೆಗೆ ಈ ದರೋಡೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ತೀವ್ರಗತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ರಾಜಧಾನಿ ಬೆಂಗಳೂರಿನ ಸೆರಗಿನಲ್ಲಿರುವ ರೇಷ್ಮೆ ನಾಡು ರಾಮನಗರ ಕಳ್ಳರ ಹಾಟ್ ಸ್ಪಾಟ್ ಅಗುತ್ತಿದೆಯೇ ಎನ್ನುವ ಅನುಮಾನಕ್ಕೆ ಪುಷ್ಟಿ ಕೊಡುವಂತೆ ಬೊಂಬೆ ನಾಡು ಖ್ಯಾತಿಯ ಚನ್ನಪಟ್ಟಣದ ಕೆ.ಎಚ್.ಬಿ ಬಡಾವಣೆಯಲ್ಲಿ ಕಳೆರಡು ತಿಂಗಳ ಅವಧಿಯಲ್ಲಿ ಎರಡು ಮನೆ ಕಳ್ಳತನ ಹಾಗೂ ಮೂರು ಸರಗಳ್ಳತನ ನಡೆದಿರುವುದು ಜನತೆಯಲ್ಲಿ ಆತಂಕ ಮೂಡಿಸಿದೆ.

ಬಡಾವಣೆ ಹೊಂದಿಕೊಂಡಿರುವ ಬಾರ್ ಮತ್ತು ರೆಸ್ಟೋರೆಂಟ್ ಗಳಿರುವುದೇ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಲು ಕಾರಣ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಅವುಗಳನ್ನು ಬೇರೆಡೆಗೆ ಶಿಫ್ಟ್ ಮಾಡಬೇಕು, ಜೊತೆಗೆ ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಬೀಟ್ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications