ರಾಮನಗರದಲ್ಲಿ ಕಸಾಯಿಖಾನೆಗೆ ಅಕ್ರಮ ಗೋವು ಸಾಗಾಟ: ಇಬ್ಬರ ಬಂಧನ
ರಾಮನಗರ, ಮಾರ್ಚ್ 06: ಕ್ಯಾಂಟರ್ ನಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಎಮ್ಮೆ ಹಾಗೂ ನಾಟಿ ಹಸುಗಳನ್ನು ಸಾಗಿಸುತ್ತಿದ್ದವರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿ ರಾಸುಗಳನ್ನು ರಕ್ಷಣೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದ ಪುರ ಪೊಲೀಸ್ ಠಾಣೆ ಮುಂದೆ ಖಚಿತ ಮಾಹಿತಿ ಮೇರೆಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕ್ಯಾಂಟರ್ ವಾಹನ ತಡೆದು ಪರಿಶೀಲನೆ ಮಾಡಿದಾಗ ಜಾನುವಾರುಗಳು ಇದ್ದಿದ್ದು ಕಂಡು ಬಂದಿದೆ. ತಕ್ಷಣ ಈ ಬಗ್ಗೆ ವಿಚಾರಣೆ ಮಾಡಿ ರಾಸುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಕ್ಯಾಂಟರ್ ನಲ್ಲಿ 18 ಕ್ಕೂ ಹೆಚ್ಚು ಎಮ್ಮೆ ಹಾಗೂ ನಾಟಿ ಹಸುಗಳನ್ನು ಅಮಾನವೀಯವಾಗಿ ತುಂಬಿ ನಾಗಮಂಗಲದಿಂದ ತಮಿಳುನಾಡಿನ ಡಂಕಣಿಕೋಟೆಗೆ ಸಾಗಿಸಲಾಗುತ್ತಿತ್ತು. ದಾಳಿ ವೇಳೆ ಸಿದ್ದಿಕ್ ಹಾಗೂ ನಾಗರಾಜು ಇಬ್ಬರು ಆರೋಪಿಗಳು ಸಿಕ್ಕಿದ್ದು ಕ್ಯಾಂಟರ್ ವಾಹನ ಹಾಗೂ ಇಬ್ಬರು ಆರೋಪಿಗಳನ್ನು ಪುರ ಠಾಣೆ ಪೊಲೀಸರಿಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಒಪ್ಪಿಸಿದ್ದಾರೆ.

ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಪುರ ಪೋಲೀಸ್ ಠಾಣೆಯ ಪೋಲೀಸರು ಪಕ್ರರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇನ್ನು ಜಾನುವಾರುಗಳನ್ನು ಪಾಂಡವಪುರ ಗೋಶಾಲೆಗೆ ಬಿಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಹಿಂದು ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಗಜೇಂದ್ರ ಸಿಂಗ್, ಕಳೆದೆರಡು ತಿಂಗಳಿನಿಂದ ಸುಮಾರು 15 ಕ್ಕೂ ಹೆಚ್ಚು ಕಸಾಯಿಖಾನೆಗೆ ಜಾನುವಾರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಗಳು ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದೇವೆ ಎಂದರು.

ಮುಂದೆಯೂ ನಿರಂತರವಾಗಿ ಅಕ್ರಮ ಗೋ ಸಾಗಾಣಿಕೆ ತಡೆಗಟ್ಟುತ್ತೇವೆ. ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಐಷಾರಾಮಿ ಕಾರುಗಳಲ್ಲಿ ರಾಸುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದರು.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications