ಬಿಡದಿ ಕೆರೆ ಸೇರಿದ ಕಾರ್ಖಾನೆ ತ್ಯಾಜ್ಯ; 2 ಟನ್ ಮೀನುಗಳು ಸಾವು
ರಾಮನಗರ, ಜೂನ್ 13: ಬಿಡದಿ ಕೈಗಾರಿಕಾ ವಲಯದ ಪ್ರತಿಷ್ಠಿತ ಕಾರ್ಖಾನೆಗಳು ವಿಷ ಪೂರಿತ ತ್ಯಾಜ್ಯ ನೀರನ್ನು ಸಂಸ್ಕರಿಸದೆ ನೇರವಾಗಿ ಹಳ್ಳಕ್ಕೆ ಹರಿ ಬಿಡುತ್ತಿವೆ. ಹಳ್ಳ ಸೇರಿದ ತ್ಯಾಜ್ಯ ನೇರವಾಗಿ ಕೆರೆ ಸೇರಿ, ಕೆರೆಯ ನೀರು ಕಲುಷಿತಗೊಂಡು ಜಲಚರಗಳಿಗೆ ಹಾಗೂ ಗ್ರಾಮಸ್ಥರಿಗೆ ಮಾರಕವಾಗಿ ಪರಿಣಮಿಸಿದೆ.
ರಾಮನಗರ ಜಿಲ್ಲೆಯಲ್ಲೇ ಬಿಡದಿ ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಬೃಹತ್ ಕೈಗಾರಿಕಾ ಪ್ರದೇಶ ಇದಾಗಿದ್ದು ಪ್ರತಿಷ್ಠಿತ ಕಾರ್ಖಾನೆಗಳು ತಲೆ ಎತ್ತಿ ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಆದರೆ ಕೆಲ ಕಾರ್ಖಾನೆಗಳು ತಮ್ಮಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ಯುಕ್ತ ತಾಜ್ಯದ ನೀರನ್ನು ಸಂಸ್ಕರಣೆ ಮಾಡದೆ ಹೊರ ಬಿಟ್ಟು ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿವೆ.
ಕೈಗಾರಿಕಾ ವಲಯದ ಅಬ್ಬನಕುಪ್ಪೆ ಗ್ರಾಮದ ಬಳಿ ಇರುವ ಬೆಕ್ಕಾಂ, ಆಮ್ಕೊ, ಬ್ರಿಟಾನಿಯಾ, ಗಣೇಶ್ ಹರ್ಬಲ್, ಪ್ಯಾರಾ ಮೆಡಿಕಲ್ ಕಾರ್ಖಾನೆಗಳು ಸೇರಿದಂತೆ 6-7 ಕಾರ್ಖಾನೆಗಳು ತ್ಯಾಜ್ಯವನ್ನು ಸಂಸ್ಕರಣೆ ಮಾಡದೆ ನೇರವಾಗಿ ಹಳ್ಳಕ್ಕೆ ಬಿಡುತ್ತಿವೆ. ಹಳ್ಳಕ್ಕೆ ಬಿಟ್ಟ ವಿಷಪೂರಿತ ತ್ಯಾಜ್ಯ ಇಟ್ಟಮಡು ಗ್ರಾಮದ ಕೆರೆ ಸೇರುತ್ತಿದೆ. ಇದರಿಂದಾಗಿ ಕೆರೆಯ ನೀರು ಕಲುಷಿತಗೊಳ್ಳುತ್ತಿದೆ.

ಕಾರ್ಖಾನೆಗಳ ವಿಷಪೂರಿತ ತಾಜ್ಯದಿಂದ ಇಟ್ಟಮಡು ಕೆರೆ ಕಲುಷಿತ ಗೊಂಡು ಕೆರೆಯ ದಂಡೆಯಲ್ಲಿ ಜನರು ಓಡಾಡಲು ತೊಂದರೆಯಾಗಿದೆ. ಕೆರೆ ನೀರು ಕೆಟ್ಟ ವಾಸನೆಯಿಂದ ಕೂಡಿದ್ದು ಗ್ರಾಮದ ಜನರು ನಿತ್ಯ ಕೆರೆಯ ಕೆಟ್ಟ ವಾಸನೆಯೊಂದಿಗೆ ಬದುಕು ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಕಾರ್ಖಾನೆ ತ್ಯಾಜ್ಯದ ನೀರು ಕೆರೆ ಸೇರುತ್ತಿರುವುದರಿಂದ ಕೆರೆಯ ನೀರು ಕಲುಷಿತಗೊಂಡು ಕೆರೆಯಲ್ಲಿದ್ದ ಮೀನುಗಳು ಸಹ ಸಾವನ್ನಪ್ಪಿವೆ. ಸುಮಾರು 2 ಟನ್ ಗಳಷ್ಟು ಮೀನುಗಳು ಸಾವನ್ನಪ್ಪಿವೆ. ಮೀನು ಸಾಗಾಣಿಕೆಗೆ ಕೆರೆ ಟೆಂಡರ್ ಪಡೆದಿದ್ದ ಶ್ರೀನಿವಾಸ್ ಎಂಬುವರಿಗೆ ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಜವಾಬ್ದಾರಿ ಮರೆಯುತ್ತಿರುವ ಕಾರ್ಖಾನೆಗಳು; ಬಿಡದಿ ಕೈಗಾರಿಕಾ ವಲಯದ ಹಲವಾರು ಕಾರ್ಖಾನೆಗಳು ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಣೆ ಮಾಡುವ ಗೋಜಿಗೆ ಹೋಗುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕಾರ್ಖಾನೆಗಳು ತಮ್ಮ ಆವರಣದಲ್ಲೇ ಎಸ್ಟಿಪಿ ಪ್ಲಾಂಟ್ ಸ್ಥಾಪಿಸಿ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಶುದ್ಧೀಕರಿಸಿ ನಂತರ ಹೂರಬಿಡಬೇಕು ಆದರೆ ತಮ್ಮ ಜವಾಬ್ದಾರಿಯನ್ನು ಕಾರ್ಖಾನೆಗಳು ಮರೆತಿವೆ ಎಂದು ಗ್ರಾಮಸ್ಥರು ಆರೋಪಿಸಿದರು.

ಕಾರ್ಖಾನೆಗಳು ತಮ್ಮಲ್ಲಿ ಬರುವ ತ್ಯಾಜ್ಯವನ್ನು ಶುದ್ದೀಕರಿಸದೇ ಅಥವಾ ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ತಮ್ಮಲ್ಲೇ ಸಂಗ್ರಹ ಮಾಡಿಕೊಂಡು ಮಳೆ ಬಂದು ಹಳ್ಳ ಹರಿಯುವ ಸಮಯದಲ್ಲಿ ಅದರಲ್ಲೂ ರಾತ್ರಿ ವೇಳೆ ತ್ಯಾಜ್ಯವನ್ನು ಹಳ್ಳಕ್ಕೆ ಬಿಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಈಗಾಗಲೇ ಬಹಳ ಹಿಂದಿನಿಂದ ತ್ಯಾಜ್ಯವನ್ನು ನೇರವಾಗಿ ಕೆರೆ ಬಿಟ್ಟಿದ್ದರಿಂದ ಬೈರಮಂಗಲ ಜಲಾಶಯ ರಾಸಾಯನಿಕ ವಿಷಪೂರಿತ ತ್ಯಾಜ್ಯದಿಂದಾಗಿ ಜಲಾಶಯ ಗಬ್ಬೇದ್ದು ಹೋಗಿದೆ. ಇದರಿಂದ ಸುತ್ತ ಮುತ್ತಲಿನ ಗ್ರಾಮಗಳಿಗೆ ಶಾಪವಾಗಿ ಕಾಡುತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿರುವ ಸರ್ಕಾರಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications