ರಾಮನಗರ; ಡಿಸಿಎಂಗೆ ಭದ್ರತೆ ನೀಡಿದ್ದ ಇನ್ಸ್ ಪೆಕ್ಟರ್ ಗೆ ಕೊರೊನಾ ಸೋಂಕು
ರಾಮನಗರ, ಜುಲೈ 1: ರಾಮನಗರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್ ಪೆಕ್ಟರ್ ಗೆ ಕೊರೊನಾ ಸೋಂಕು ಇರುವುದಾಗಿ ತಿಳಿದುಬಂದಿದೆ. ಸೋಂಕಿತ ಇನ್ಸ್ ಪೆಕ್ಟರ್ ಗೆ ರಾಮನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ಸ್ ಪೆಕ್ಟರ್ ನ ಪ್ರಾಥಮಿಕ ಸಂಪರ್ಕದಲ್ಲಿದ್ದ 12 ಸಿಬ್ಬಂದಿಗೆ ಕ್ವಾರಂಟೈನ್ ಗೆ ಸೂಚಿಸಲಾಗಿದೆ. ಇದೇ ಜೂನ್ 28ರಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು ಕೋವಿಡ್ 19 ನಡೆಸಿದ ಸಂದರ್ಭ, ಈ ಇನ್ಸ್ ಪೆಕ್ಟರ್ ಅವರಿಗೆ ಭದ್ರತೆ ನೀಡಿದ್ದರು ಎಂಬುದು ತಿಳಿದುಬಂದಿದೆ.
ಹೋಂ ಕ್ವಾರಂಟೈನ್ ಉಲ್ಲಂಘನೆ; ರಾಮನಗರದಲ್ಲಿ 8 ಮಂದಿ ಮೇಲೆ FIR
ಡಿಸಿಎಂ ಭಾಗಿಯಾಗಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು. ಇದೀಗ ಈ ಇನ್ಸ್ ಪೆಕ್ಟರ್ ಗೆ ಸೋಂಕು ದೃಢಪಟ್ಟಿದ್ದು, ಸಭೆಯಲ್ಲಿ ಭಾಗಿಯಾಗಿದ್ದವರಲ್ಲಿ ಆತಂಕ ಉಂಟಾಗಿದೆ. ಸೋಂಕಿತ ವ್ಯಕ್ತಿಯ ಮತ್ತಷ್ಟು ಸಂಪರ್ಕಿತರನ್ನು ಜಿಲ್ಲಾಡಳಿತ ಪತ್ತೆ ಹಚ್ಚುತ್ತಿದೆ.
Comments
English summary
Inspector who gave security to DCM Ashwath Narayan at covid 19 meeting in Ramanagar on june 28 tested coronavirus positive today