ಮೃತ ಪತ್ರಕರ್ತನ ಕುಟುಂಬಕ್ಕೆ ನೆರವಾದ ವಿಮೆ; ಸಾಮ್ರಾಟ್ ಗೌಡ ಕಾಳಜಿಗೆ ವ್ಯಾಪಕ ಮೆಚ್ಚುಗೆ
ರಾಮನಗರ, ಏಪ್ರಿಲ್ 28: ಸಮಾಜದ ಅಂಕುಡೊಂಕುಗಳನ್ನು ತನ್ನ ಬರವಣಿಗೆಯ ಮೂಲಕ ತಿದ್ದುವ ಪತ್ರಕರ್ತರ ಬದುಕು ತೀರಾ ಸಂಕಷ್ಟದಲ್ಲಿದೆ. ಅದರಲ್ಲೂ ಪತ್ರಕರ್ತ ಅಕಾಲಿಕ ಮರಣ ಹೊಂದಿದರೆ ಆತನನ್ನು ನಂಬಿರುವ ಕುಟುಂಬದ ಜೀವನ ನಿರ್ವಹಣೆಯ ಪಾಡು ದೇವರಿಗೆ ಪ್ರೀತಿ.
ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಿಸಿಕೊಂಡಿರುವ ಪ್ರಮುಖರೊಬ್ಬರು ಪತ್ರಕರ್ತರ ಸಂಕಷ್ಟ ಗಮನಿಸಿ, ತಮ್ಮ ಹುಟ್ಟುಹಬ್ಬದ ನೆನಪಿಗೆ ನೂರಾರು ಪತ್ರಕರ್ತರಿಗೆ ಆರೋಗ್ಯ ಮತ್ತು ಅಪಘಾತ ವಿಮೆ ಮಾಡಿಸುವ ಮೂಲಕ ನೆರವಾಗಿದ್ದರು.
ರಾಮನಗರ ಜಿಲ್ಲೆ ಮಾಗಡಿ ಮೂಲದ ಯುವ ಭಾರತ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ. ಸಾಮ್ರಾಟ್ ಗೌಡ ಕಳೆದ ವರ್ಷದ ಹಿಂದೆ ತಮ್ಮ ಹುಟ್ಟುಹಬ್ಬದ ನೆನಪಿನಲ್ಲಿ ಜಿಲ್ಲೆಯ ನೂರಾರು ಪತ್ರಕರ್ತರಿಗೆ ಆರೋಗ್ಯ ಮತ್ತು ಅಪಘಾತ ವಿಮೆ ಮಾಡಿಸುವ ಮೂಲಕ ಪತ್ರಕರ್ತರ ಮೇಲಿನ ಕಾಳಜಿಯನ್ನು ವ್ಯಕ್ತಪಡಿಸಿದ್ದರು.

ಪತ್ರಕರ್ತರ ಮೇಲಿನ ಸಾಮ್ರಾಟ್ ಗೌಡ ಅವರ ಕಾಳಜಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ರವಿ ಕುಟುಂಬದ ಸಂಕಷ್ಟಕ್ಕೆ ನೆರವಾಗಿದೆ. ಮನೆಯ ಯಜಮಾನನನ್ನು ಕಳೆದುಕೊಂಡು ಸಂಕಷ್ಟದಲ್ಲಿ ಕುಟುಂಬಕ್ಕೆ, ಸಾಮ್ರಾಟ್ ಗೌಡರು ರವಿ ಹೆಸರಿನಲ್ಲಿ ಮಾಡಿಸಿದ್ದ ವಿಮೆ ಕೈಹಿಡಿದಿದ್ದು, ಮೃತನ ಕುಟುಂಬಕ್ಕೆ ವಿಮೆ ಕಂಪನಿ ಸುಮಾರು 11 ಲಕ್ಷ ರೂಪಾಯಿ ಪಾವತಿಸಲಿದೆ.
ಕಳೆದ ಹತ್ತು ವರ್ಷಗಳಿಂದ "ಹೊಸ ಆದರ್ಶ' ಪತ್ರಿಕೆಯನ್ನು ನಡೆಸುತ್ತಿದ್ದ ಹಿರಿಯ ಪತ್ರಕರ್ತ ರವಿ, ಮಂಗಳವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಮೃತ ಕುಟುಂಬಕ್ಕೆ ಆರೋಗ್ಯ ವಿಮೆ ಇಲಾಖೆಯಿಂದ ಹನ್ನೊಂದು ಲಕ್ಷ ಪರಿಹಾರ ಮೊತ್ತವನ್ನು ಕೊಡಿಸಲು ಮುಂದಾಗಿರುವ ಸಾಮ್ರಟ್ ಗೌಡರ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾಮ್ರಾಟ್ ಗೌಡ, ಹೊಸ ಆದರ್ಶ ಪತ್ರಿಕೆ ನಡೆಸುತ್ತಿದ್ದ ರವಿ ತುಂಬಾ ಆತ್ಮೀಯರಾಗಿ ನಮ್ಮ ಜೊತೆ ಒಡನಾಟದಲ್ಲಿ ಇದ್ದರು. ಅವರು ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದು ತುಂಬಾ ನೋವಾಗಿದೆ. ಅವರ ಕುಟುಂಬಕ್ಕೆ ನೋವು ತುಂಬುವ ಶಕ್ತಿಯನ್ನು ಭಗವಂತ ನೀಡಲಿ ಎಂದು ವಿಷಾದಿಸಿದ್ದಾರೆ.
ನನ್ನ ಹುಟ್ಟಿದ ಹಬ್ಬದ ಪ್ರಯುಕ್ತ ರಾಮನಗರ ಜಿಲ್ಲಾ ಪತ್ರಕರ್ತರಿಗೆ ಸ್ಟಾರ್ ಹೆಲ್ತ್ ಕಂಪನಿಯಿಂದ ಪತ್ರಕರ್ತರಿಗೆ ವಿಮೆ ಮಾಡಿಸಿದೆ. ಅಪಘಾತದಲ್ಲಿ ಮೃತಪಟ್ಟಿರುವ ರವಿ ಅವರ ಕುಟುಂಬಕ್ಕೆ ಸ್ಟಾರ್ ಹೆಲ್ತ್ ಕಂಪನಿಯಿಂದ 11 ಲಕ್ಷ ಪರಿಹಾರವನ್ನು ಕೊಡಿಸುವ ಕೆಲಸವನ್ನು ಮಾಡುತ್ತೇನೆ. ಈಗಾಗಲೇ ಸ್ಟಾರ್ ಹೆಲ್ತ್ ಏಜೆಂಟರಾದ ಚಕ್ರಬಾವಿ ಜಗದೀಶ್ರವರ ಜೊತೆ ಮಾತನಾಡಿದ್ದು, ರವಿ ಕುಟುಂಬವರಿಂದ ಶೀಘ್ರದಲ್ಲೇ ದಾಖಲೆಗಳನ್ನು ಪಡೆದು ಕೂಡಲೇ ಅವರ ಕುಟುಂಬಕ್ಕೆ ಹನ್ನೊಂದು ಲಕ್ಷ ಪರಿಹಾರವನ್ನು ಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.
ಪತ್ರಕರ್ತರು ಸುದ್ದಿ ವಿಚಾರವಾಗಿ ಸಾಕಷ್ಟು ಕಡೆ ಓಡಾಡುತ್ತಿರುತ್ತಾರೆ ಜೀವನದ ಹಂಗನ್ನು ಲೆಕ್ಕಿಸದೆ ಸುದ್ದಿಗಾಗಿ ಸದಾ ಓಡಾಡುತ್ತಿರುವ ಪತ್ರಕರ್ತರಿಗೆ ಈ ರೀತಿ ಆಗಿರುವುದು ನೋವಿನ ವಿಚಾರವಾಗಿದ್ದು, ಪತ್ರಕರ್ತರ ಮೇಲಿನ ಕಾಳಜಿಯಿಂದ ವಿಮೆ ಮಾಡಿಸಿದ್ದೆ ಹಾಗೂ ವಿಮೆಗಳ ರಿನಿವಲ್ ಕೂಡ ಮಾಡಿದ್ದೇವೆ. ವಿಮೆಯ ಮೂಲಕ ಅವರ ಕುಟುಂಬಕ್ಕೆ ಸಣ್ಣ ಸಹಾಯ ಮಾಡುತ್ತಿರುವುದಾಗಿ ಸಾಮ್ರಾಟ್ ಗೌಡ ತಿಳಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications