ಅನುಷ್ಕ ಶೆಟ್ಟಿ ಅಣ್ಣನ ಹತ್ಯೆಗೆ ಸಂಚು: ಆರೋಪಿಗಳ ಬಂಧನಕ್ಕೆ ಆಗ್ರಹ
ರಾಮನಗರ, ಜೂನ್ 16: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿವಂಗತ ಮತ್ತಪ್ಪ ರೈ ಆಪ್ತ ಹಾಗೂ ಸಿನಿಮಾ ನಟಿ ಅನುಷ್ಕಾ ಶೆಟ್ಟಿ ಅಣ್ಣ ಬಿ. ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿರುವ ಭೂಗತ ಲೋಕದ ವ್ಯಕ್ತಿಗಳನ್ನು ಬಂಧಿಸುವಂತೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ.
ಬಿ. ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಜವರೇಗೌಡಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಮುಖೇನ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರು ಮತ್ತು ಗೃಹ ಇಲಾಖೆಯ ಅಧಿಕಾರಿಗಳಿಗೆ ಬಿ. ಗುಣರಂಜನ್ ಶೆಟ್ಟಿ ಹತ್ಯೆ ನಡೆಸಲು ಮುಂದಾಗಿರುವ ಪಾತಕಿಗಳ ವಿರುದ್ಧ ಉನ್ನತ್ತ ಮಟ್ಟದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಈ ಕೂಡಲೇ ಬಂಧಿಸಬೇಕು ಹಾಗೂ ಗುಣರಂಜನ್ ಶೆಟ್ಟಿಗೆ ಸೂಕ್ತ ಭದ್ರತೆ ನೀಡಬೇಕೆಂದು ವೇದಿಕೆಯ ಸದಸ್ಯರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕಳೆದ ಒಂದು ವಾರದಿಂದ ಮಾಧ್ಯಮದಲ್ಲಿ ಖ್ಯಾತ ಪರಿಸರವಾದಿಗಳು ಹಾಗೂ ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಹತ್ಯೆಗೆ ಭೂಗತ ಪ್ರಪಂಚದ ಕೆಲ ವ್ಯಕ್ತಿಗಳ ತಂಡವೊಂದು ಸಂಚು ರೂಪಿಸಿರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ತಿಳಿದು ನಮಗೆಲ್ಲ ದಿಗ್ಬ್ರಮೆ ಸೃಷ್ಠಿಯಾಗಿದೆ ಎಂದು ವೇದಿಕೆಯ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮನವಿ ಸಲ್ಲಿಕೆ ವೇಳೆ ವೇದಿಕೆ ಜಿಲ್ಲಾ ಉಪಾಧ್ಯಕ ಪಿಚ್ಚನಗೆರೆ ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ಎಂ. ಗಿರೀಶ್, ಕನಕಪುರ ತಾಲೂಕು ಉಪಾಧ್ಯಕ್ಷ ತಿಮ್ಮರಾಜು, ಜಿಲ್ಲಾ ಮುಖಂಡರಾದ ನವೀನ್ ನಾಯ್ಕ್, ಗಿರೀಶ್ ಗೌಡ, ಎಂ. ಸತೀಶ್, ದೀಪು, ಸಚಿನ್, ಸತೀಶ್, ಉಲ್ಲಾಸ್ ಮತ್ತಿತರರು ಭಾಗವಹಿಸಿದ್ದರು
ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿ ಸಾಮಾಜಿಕ ಹಾಗೂ ಪರಿಸರದ ಮೇಲಿನ ಕಾಳಜಿಗೆ ಬೆನ್ನೆಲುಬಾಗಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಕಾರ್ಯಕರ್ತರ ಜೊತೆ ಶ್ರಮಿಸುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ಕೆಲವರು ಹತ್ಯೆಗೆ ಸಂಚು ರೂಪಿಸಿದ್ದಾರೆ. ಅಂತಹ ದುಷ್ಟರನ್ನು ಪೋಲಿಸರು ಮಟ್ಟಹಾಕಬೇಕು ಎಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮನ್ವಿತ್ ಮುತ್ತಪ್ಪ ರೈ ಅಕ್ಕನ ಮಗ ಅಲ್ಲ; ಮುತ್ತಪ್ಪ ರೈ ಅಂತಿಮ ದಿನಗಳವರೆಗೂ ಆಸರೆಯಾಗಿ ನಿಂತಿದ್ದು ನಾನು ಹಾಗೂ ಗುಣರಂಜನ್ ಶೆಟ್ಟಿ ಇಬ್ಬರು ಮಾತ್ರ. ಗುಣರಂಜನ್ ಶೆಟ್ಟಿ ಮುತ್ತಪ್ಪ ರೈ ನಿಧನದ ನಂತರದಲ್ಲಿ ನಮ್ಮ ಸಂಘಟನೆಯ ಅಧ್ಯಕ್ಷರೊಂದಿಗಿನ ಮನಸ್ತಾಪದಿಂದಾಗಿ ಜಯ ಕರ್ನಾಟಕ ಜನಪರ ವೇದಿಕೆ ಎಂಬ ಸಂಘಟನೆ ಹುಟ್ಟುಹಾಕಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೂ ನಾವೆಲ್ಲ ಆತ್ಮೀಯರಾಗಿದ್ದೇವೆ, ಎಲ್ಲರೂ ಮುತ್ತಪ್ಪ ರೈ ಅಣ್ಣನ ಹುಡುಗರೇ ಎಂದು ಮುತ್ತಪ್ಪ ರೈ ಆಪ್ತ ಹಾಗೂ ಸಂಬಂಧಿ ಪ್ರಕಾಶ್ ರೈ ತಿಳಿಸಿದ್ದಾರೆ.
ಇನ್ನೂ ಮುತ್ತಪ್ಪ ರೈ ಸಂಬಂಧಿ ಮನ್ವಿತ್ ರೈ, ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಪ್ರಕಾಶ್ ರೈ, "ಮನ್ವಿತ್ ಮುತ್ತಪ್ಪ ರೈ ಅವರ ಅಕ್ಕನ ಮಗ ಅಲ್ಲ, ಅವರ ಸೋದರತ್ತೆಯ ಮೊಮ್ಮಗ, ಆತ ಕೇವಲ 2-3 ವರ್ಷಗಳಷ್ಟೆ ಅಣ್ಣನ ಜೊತೆ ಇದ್ದ. ನಂತರ ದಿನಗಳಲ್ಲಿ ಅಣ್ಣನಿಗೆ ದ್ರೋಹ ಮಾಡಿ ಹೊರ ಹೋದ. ಅಣ್ಣನ ದುಡ್ಡು ತಿಂದು ಮೋಸ ಮಾಡಿ ಹೊರಹೋಗಿ ಅಣ್ಣನ ಬಗ್ಗೆ ಇಲ್ಲ ಸಲ್ಲದ ಮಾತನಾಡಿದ ವ್ಯಕ್ತಿ, ಇಂದು ಮುತ್ತಪ್ಪ ರೈ ಅಣ್ಣನ ಹೆಸರು ಬಳಸಿಕೊಳ್ಳುತ್ತಿದ್ದಾರೆ" ಎಂದು ಕಿಡಿಕಾರಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications