ಸಿ.ಪಿ.ಯೋಗೇಶ್ವರ್ ಗೆ ಜೆಡಿಎಸ್ ಎಂಎಲ್ ಸಿ ಪುಟ್ಟಣ್ಣ ಪರೋಕ್ಷ ಬೆಂಬಲ
ರಾಮನಗರ, ಮೇ. 07: ಜೆಡಿಎಸ್ ಭಿನ್ನ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಎಂಎಲ್ ಸಿ ಪುಟ್ಟಣ್ಣ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆ ಪರೋಕ್ಷ ಬೆಂಬಲ ನೀಡುವ ಮೂಲಕ ಜೆಡಿಎಸ್ ನಾಯಕ ಹಾಗೂ ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.
ರಾಮನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಜೊತೆಗೆ ಜಂಟಿಸುದ್ದಿಗೋಷ್ಟಿ ನಡೆಸಿದ ಎಂಎಲ್ ಸಿ ಪುಟ್ಟಣ್ಣ ಈ ಬಾರಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆ ಬೆಂಬಲ ಕೊಡುವುದಾಗಿ ಬಹಿರಂಗಪಡಿಸಿದ್ದಾರೆ.
ನಾನು ರಾಜಕೀಯದಲ್ಲಿ ತಟಸ್ಥವಾಗಿದ್ದೆ. ನನ್ನ ಬೆಂಬಲಿಗರಿಗೆ ಜೆಡಿಎಸ್ ನಲ್ಲಿ ಸರಿಯಾದ ಗೌರವ ಸಿಗುತ್ತಿಲ್ಲ. ನಮ್ಮನ್ನ ಕಡೆಗಣಿಸುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರಿಗೆ ನಿಮ್ಮ ಅಸ್ತಿತ್ವಕ್ಕೆ ನಿಮ್ಮ ನಿರ್ಧಾರ ಕೈಗೊಳ್ಳಿ ಎಂದಿದ್ದೇನೆಂದು ಪುಟ್ಟಣ್ಣ ತಿಳಿಸಿದ್ದಾರೆ.

ಜೆಡಿಎಸ್ ನಲ್ಲಿ ನಮ್ಮನ್ನ ಯಾರು ಕರೆಯಲಿಲ್ಲ ಎಂದ ಮೇಲೆ ನಾವು ಇನ್ಯಾರಿಗೆ ಬೆಂಬಲ ಕೊಡಬೇಕು ಎಂದು ಹೇಳುವ ಮೂಲಕ ಆಂತರಿಕವಾಗಿ ಸಿ.ಪಿ.ಯೋಗೇಶ್ವರ್ ಗೆ ಬೆಂಬಲ ಎಂದು ಪುಟ್ಟಣ್ಣ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಕಳೆದ ಬಾರಿ ಅನಿತಾಕುಮಾರಸ್ವಾಮಿ ಸೋತಿದ್ದರು. ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ನಮ್ಮನ್ನ ವೇದಿಕೆಯಿಂದ ಕೆಳಗಿಳಿಸಿದ್ದರು. ಅದಾದ ಮೇಲೆ ನಾನು ಒಂದೇ ಒಂದು ಜೆಡಿಎಸ್ ಕಾರ್ಯಕ್ರಮದ ವೇದಿಕೆ ಹತ್ತಿಲ್ಲ ಎಂದು ಪುಟ್ಟಣ್ಣ ತಿಳಿಸಿದರು.
ಈ ಚುನಾವಣೆಯಲ್ಲೂ ನನ್ನನ್ನ, ನನ್ನ ಬೆಂಬಲಿಗರನ್ನ ಯಾರು ಕರೆದಿಲ್ಲ. ಹಾಗಾಗಿ ನಮ್ಮ ಅಸ್ತಿತ್ವಕ್ಕೆ ನಮ್ಮ ತೀರ್ಮಾನ ತೆಗೆದುಕೊಂಡಿದ್ದೇವೆ. ಪುಟ್ಟಣ್ಣನ ಶಕ್ತಿ ಕಡಿಮೆಯಾಗಿದೆ ಎಂದು ಜೆಡಿಎಸ್ ಪಕ್ಷಕ್ಕೆ ಅನಿಸಿರಬಹುದು. ಅದು ಸಹಜ, ಆದರೆ ಈಗ ಮೇ 12 ಕ್ಕೆ ಗೊತ್ತಾಗುತ್ತೆ ಎಂದು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಚನ್ನಪಟ್ಟಣದಲ್ಲಿನ ನೀರಾವರಿ ಯೋಜನೆಯನ್ನು ರಾಜ್ಯದ ಎಲ್ಲಾ ಜನಪ್ರತಿನಿಧಿಗಳು ನೋಡಿಕೊಂಡು ಹೋಗಿದ್ದಾರೆ. ಅದನ್ನ ಬೇರೆಯವರು ಅಳವಡಿಸಿಕೊಳ್ಳಲ್ಲಿ ಎನ್ನುವ ಮೂಲಕ ಸಿಪಿವೈ ಬೆಂಬಲಿಸುವಂತೆ ತಮ್ಮ ಬೆಂಬಲಿಗರಿಗೆ ಪರೋಕ್ಷವಾಗಿ ಕರೆ ನೀಡಿದರು.
ಸಿ.ಪಿ.ಯೋಗೇಶ್ವರ್ ಮಾತನಾಡಿ, ನನಗೂ ಪುಟ್ಟಣ್ಣಗೂ ಯಾವುದೇ ರಾಜಕೀಯ ಒಡಂಬಡಿಕೆ ಇಷ್ಟು ವರ್ಷ ಇರಲಿಲ್ಲ. ಅವರು ನನಗೆ ಬಾಲ್ಯದ ಗೆಳೆಯರಾಗಿದ್ದರು. ರಾಜಕೀಯವಾಗಿ ಭಿನ್ನಾಭಿಪ್ರಾಯವಿತ್ತು. ಅವರು ಜೆಡಿಎಸ್ ನಲ್ಲಿದ್ದರು. ನಾನು ಅವರ ವಿರುದ್ಧವಾಗಿದ್ದೆ.
ಆದರೆ ಈಗ ಅವರು ,ಅವರ ಕುಟುಂಬದವರು, ಸಹೋದರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ನೀರಾವರಿ ಯೋಜನೆಯ ಸಾಧನೆಯ ಫಲ ಅವರಿಗೂ ದಕ್ಕಿದೆ. ಪುಟ್ಟಣ್ಣರಿಗೆ ಅವರದ್ದೇ ಆದ ಶಕ್ತಿ ಇದೇ. ಪುಟ್ಟಣ್ಣರಿಗೆ ಜೆಡಿಎಸ್ ಪಕ್ಷದ ಸಿಂಬಲ್ ಇರಬಹುದು ಆದರೆ ಅವರದ್ದೇ ಆದ ಕಾರ್ಯಕರ್ತರ ಪಡೆ ಇದೇ.
ಪುಟ್ಟಣ್ಣನವರು ನೇರವಾಗಿ ಬೆಂಬಲ ಕೊಡದಿದ್ದರೂ ಆಂತರಿಕವಾಗಿ ಬೆಂಬಲ ಕೊಡ್ತಾರೆ. ಶ್ರೀಕೃಷ್ಣ ನೇರವಾಗಿ ಸಹಾಯ ಮಾಡದಿದ್ದರೂ, ಆಂತರಿಕವಾಗಿ ಬೆಂಬಲ ಕೋಡೋ ರೀತಿ ಪುಟ್ಟಣ್ಣನವರ ಸಹಾಯ ನನಗಿದೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications