ಸಿ.ಪಿ.ಯೋಗೇಶ್ವರ್ ಗೆ ಜೆಡಿಎಸ್ ಎಂಎಲ್ ಸಿ ಪುಟ್ಟಣ್ಣ ಪರೋಕ್ಷ ಬೆಂಬಲ
ರಾಮನಗರ, ಮೇ. 07: ಜೆಡಿಎಸ್ ಭಿನ್ನ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಎಂಎಲ್ ಸಿ ಪುಟ್ಟಣ್ಣ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆ ಪರೋಕ್ಷ ಬೆಂಬಲ ನೀಡುವ ಮೂಲಕ ಜೆಡಿಎಸ್ ನಾಯಕ ಹಾಗೂ ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.
ರಾಮನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಜೊತೆಗೆ ಜಂಟಿಸುದ್ದಿಗೋಷ್ಟಿ ನಡೆಸಿದ ಎಂಎಲ್ ಸಿ ಪುಟ್ಟಣ್ಣ ಈ ಬಾರಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆ ಬೆಂಬಲ ಕೊಡುವುದಾಗಿ ಬಹಿರಂಗಪಡಿಸಿದ್ದಾರೆ.
ನಾನು ರಾಜಕೀಯದಲ್ಲಿ ತಟಸ್ಥವಾಗಿದ್ದೆ. ನನ್ನ ಬೆಂಬಲಿಗರಿಗೆ ಜೆಡಿಎಸ್ ನಲ್ಲಿ ಸರಿಯಾದ ಗೌರವ ಸಿಗುತ್ತಿಲ್ಲ. ನಮ್ಮನ್ನ ಕಡೆಗಣಿಸುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರಿಗೆ ನಿಮ್ಮ ಅಸ್ತಿತ್ವಕ್ಕೆ ನಿಮ್ಮ ನಿರ್ಧಾರ ಕೈಗೊಳ್ಳಿ ಎಂದಿದ್ದೇನೆಂದು ಪುಟ್ಟಣ್ಣ ತಿಳಿಸಿದ್ದಾರೆ.

ಜೆಡಿಎಸ್ ನಲ್ಲಿ ನಮ್ಮನ್ನ ಯಾರು ಕರೆಯಲಿಲ್ಲ ಎಂದ ಮೇಲೆ ನಾವು ಇನ್ಯಾರಿಗೆ ಬೆಂಬಲ ಕೊಡಬೇಕು ಎಂದು ಹೇಳುವ ಮೂಲಕ ಆಂತರಿಕವಾಗಿ ಸಿ.ಪಿ.ಯೋಗೇಶ್ವರ್ ಗೆ ಬೆಂಬಲ ಎಂದು ಪುಟ್ಟಣ್ಣ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಕಳೆದ ಬಾರಿ ಅನಿತಾಕುಮಾರಸ್ವಾಮಿ ಸೋತಿದ್ದರು. ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ನಮ್ಮನ್ನ ವೇದಿಕೆಯಿಂದ ಕೆಳಗಿಳಿಸಿದ್ದರು. ಅದಾದ ಮೇಲೆ ನಾನು ಒಂದೇ ಒಂದು ಜೆಡಿಎಸ್ ಕಾರ್ಯಕ್ರಮದ ವೇದಿಕೆ ಹತ್ತಿಲ್ಲ ಎಂದು ಪುಟ್ಟಣ್ಣ ತಿಳಿಸಿದರು.
ಈ ಚುನಾವಣೆಯಲ್ಲೂ ನನ್ನನ್ನ, ನನ್ನ ಬೆಂಬಲಿಗರನ್ನ ಯಾರು ಕರೆದಿಲ್ಲ. ಹಾಗಾಗಿ ನಮ್ಮ ಅಸ್ತಿತ್ವಕ್ಕೆ ನಮ್ಮ ತೀರ್ಮಾನ ತೆಗೆದುಕೊಂಡಿದ್ದೇವೆ. ಪುಟ್ಟಣ್ಣನ ಶಕ್ತಿ ಕಡಿಮೆಯಾಗಿದೆ ಎಂದು ಜೆಡಿಎಸ್ ಪಕ್ಷಕ್ಕೆ ಅನಿಸಿರಬಹುದು. ಅದು ಸಹಜ, ಆದರೆ ಈಗ ಮೇ 12 ಕ್ಕೆ ಗೊತ್ತಾಗುತ್ತೆ ಎಂದು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಚನ್ನಪಟ್ಟಣದಲ್ಲಿನ ನೀರಾವರಿ ಯೋಜನೆಯನ್ನು ರಾಜ್ಯದ ಎಲ್ಲಾ ಜನಪ್ರತಿನಿಧಿಗಳು ನೋಡಿಕೊಂಡು ಹೋಗಿದ್ದಾರೆ. ಅದನ್ನ ಬೇರೆಯವರು ಅಳವಡಿಸಿಕೊಳ್ಳಲ್ಲಿ ಎನ್ನುವ ಮೂಲಕ ಸಿಪಿವೈ ಬೆಂಬಲಿಸುವಂತೆ ತಮ್ಮ ಬೆಂಬಲಿಗರಿಗೆ ಪರೋಕ್ಷವಾಗಿ ಕರೆ ನೀಡಿದರು.
ಸಿ.ಪಿ.ಯೋಗೇಶ್ವರ್ ಮಾತನಾಡಿ, ನನಗೂ ಪುಟ್ಟಣ್ಣಗೂ ಯಾವುದೇ ರಾಜಕೀಯ ಒಡಂಬಡಿಕೆ ಇಷ್ಟು ವರ್ಷ ಇರಲಿಲ್ಲ. ಅವರು ನನಗೆ ಬಾಲ್ಯದ ಗೆಳೆಯರಾಗಿದ್ದರು. ರಾಜಕೀಯವಾಗಿ ಭಿನ್ನಾಭಿಪ್ರಾಯವಿತ್ತು. ಅವರು ಜೆಡಿಎಸ್ ನಲ್ಲಿದ್ದರು. ನಾನು ಅವರ ವಿರುದ್ಧವಾಗಿದ್ದೆ.
ಆದರೆ ಈಗ ಅವರು ,ಅವರ ಕುಟುಂಬದವರು, ಸಹೋದರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ನೀರಾವರಿ ಯೋಜನೆಯ ಸಾಧನೆಯ ಫಲ ಅವರಿಗೂ ದಕ್ಕಿದೆ. ಪುಟ್ಟಣ್ಣರಿಗೆ ಅವರದ್ದೇ ಆದ ಶಕ್ತಿ ಇದೇ. ಪುಟ್ಟಣ್ಣರಿಗೆ ಜೆಡಿಎಸ್ ಪಕ್ಷದ ಸಿಂಬಲ್ ಇರಬಹುದು ಆದರೆ ಅವರದ್ದೇ ಆದ ಕಾರ್ಯಕರ್ತರ ಪಡೆ ಇದೇ.
ಪುಟ್ಟಣ್ಣನವರು ನೇರವಾಗಿ ಬೆಂಬಲ ಕೊಡದಿದ್ದರೂ ಆಂತರಿಕವಾಗಿ ಬೆಂಬಲ ಕೊಡ್ತಾರೆ. ಶ್ರೀಕೃಷ್ಣ ನೇರವಾಗಿ ಸಹಾಯ ಮಾಡದಿದ್ದರೂ, ಆಂತರಿಕವಾಗಿ ಬೆಂಬಲ ಕೋಡೋ ರೀತಿ ಪುಟ್ಟಣ್ಣನವರ ಸಹಾಯ ನನಗಿದೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications