ರಾಮನಗರ: ಫೆ.20ರಂದು 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ' ಕಾರ್ಯಕ್ರಮಕ್ಕೆ ಚಾಲನೆ
ರಾಮನಗರ, ಫೆಬ್ರವರಿ 18: ರಾಮನಗರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಕಾರ್ಯಕ್ರಮವನ್ನು ಫೆ.20 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ನೀಡಲಿದ್ದಾರೆ. ಅಧಿಕಾರಿಗಳ ತಂಡ ಅಂದು ಭೇಟಿ ನೀಡುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಸ್ವೀಕರಿಸಿ ಪರಿಹಾರ ನೀಡಲಿದೆ.
ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿಯ ಅವ್ವೇರಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಇಕ್ರಂ, ಮಾಗಡಿ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.
ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಲಕ್ಕೋಜನಹಳ್ಳಿ ಗ್ರಾಮದಲ್ಲಿ ರಾಮನಗರ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಕಸಬಾ ಹೋಬಳಿಯ ಎಚ್.ಮೊಗೇನಹಳ್ಳಿ ಗ್ರಾಮದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ, ಚನ್ನಪಟ್ಟಣ ತಾಲ್ಲೂಕು ತಹಶೀಲ್ದಾರ್ ನಾಗೇಶ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.
ಕನಕಪುರ ತಾಲ್ಲೂಕಿನ ಮರಳವಾಡಿ ಹೋಬಳಿಯ ಬನವಾಸಿ ಗ್ರಾಮದಲ್ಲಿ ರಾಮನಗರ ಉಪವಿಭಾಗ ಅಧಿಕಾರಿ ದಾಕ್ಷಾಹಿಣಿ, ಕನಕಪುರ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.
ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿ ಹಾಗೂ ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications