ಮಾಜಿ ಸಿಎಂ ಎಚ್ಡಿಕೆ ಭೇಟಿ ಮಾಡಿ ಕುತೂಹಲ ಮೂಡಿಸಿದ ಆರ್. ಅಶೋಕ್
ರಾಮನಗರ, ಸೆಪ್ಟೆಂಬರ್ 11: ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಬೆಂಬಲ ಕೊಡುವಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.
ಬಿಡದಿಯ ಕೇತುಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾದ ಕಂದಾಯ ಸಚಿವ ಆರ್. ಅಶೋಕ್, "ಕಲಬುರಗಿ ಪಾಲಿಕೆ ಚುನಾವಣೆಗೆ ನಮ್ಮ ಪಕ್ಷಕ್ಕೆ ಬೆಂಬಲ ಕೊಡುವಂತೆ ಮಾತನಾಡಿದ್ದೇನೆ. ಇದಕ್ಕೆ ಕುಮಾರಸ್ವಾಮಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.
"ಕಲಬುರಗಿ ಪಾಲಿಕೆ ಬೆಂಬಲದ ಬಗ್ಗೆ ಕುಮಾರಸ್ವಾಮಿ ಸೋಮವಾರ ಸದನದಲ್ಲಿ ಚರ್ಚಿಸೊಣ ಎಂದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೊತೆಗೆ ಚರ್ಚಿಸಿ ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ದೊಡ್ಡಬಳ್ಳಾಪುರದ ಚುನಾವಣೆ ವಿಷಯದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.''

ಹಾಗೆಯೇ ಕಲಬುರಗಿ ಪಾಲಿಕೆ ಚುಕ್ಕಾಣಿಗೆ ಜೆಡಿಎಸ್- ಕಾಂಗ್ರೆಸ್ಗೆ ಬೆಂಬಲ ಕೊಟ್ಟಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್. ಅಶೋಕ್, "ಹಾಗೇನು ಇಲ್ಲ, ಕಾಂಗ್ರೆಸ್ನಲ್ಲೇ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಲ್ಲೇ ಒಮ್ಮತವಿಲ್ಲ. ಮೇಯರ್ ಪಟ್ಟದ ಡಿಮ್ಯಾಂಡ್ ಕೂಡ ಚರ್ಚೆಯಾಗಿಲ್ಲ,'' ಎಂದು ಸ್ಪಷ್ಟಪಡಿಸಿದರು.
ಸಚಿವ ಅಶೋಕ್ ಭೇಟಿಯ ಬಗ್ಗೆ ಟ್ವಿಟ್ ಮಾಡಿದ ಮಾಜಿ ಸಿಎಂ ಎಚ್ಡಿಕೆ, ಇನ್ನು ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಬೆಂಬಲ ಕೋರಿ ಬಿಡದಿ ಬಳಿಯ ಕೇತುಗಾನಹಳ್ಳಿಯ ತೋಟದ ಮನೆಯಲ್ಲಿ ಸಚಿವ ಆರ್. ಅಶೋಕ್ ಭೇಟಿಯಾಗಿ ಚರ್ಚಿಸಿರುವುದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

"ಹಿರಿಯ ಸಚಿವ ಆರ್. ಅಶೋಕ್ ಇಂದು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ನನ್ನೊಂದಿಗೆ ಸಮಾಲೋಚಿಸಿದರು,'' ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.
ಇನ್ನೂ ಸಚಿವ ಆರ್. ಅಶೋಕ್ ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಕೋರಿರುವ ಬಗ್ಗೆ ಟ್ವಿಟರ್ನಲ್ಲಿ, "ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ,'' ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

"ಸಚಿವ ಆರ್. ಅಶೋಕ್ ಅವರೊಂದಿಗೆ ಪ್ರಸ್ತುತ, ರಾಜ್ಯದ ರೈತಾಪಿ ಜನ ಎದುರಿಸುತ್ತಿರವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕ ತಂದಿದ್ದೇನೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಶಾಸಕರಾದ ಸಾ.ರಾ. ಮಹೇಶ್ ನನ್ನ ಜತೆ ಇದ್ದರು,'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ ಮೂಲಕ ತಿಳಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications