ರಾಮನಗರದಲ್ಲಿ ಮತ್ತೇ ಕಾಣಿಸಿಕೊಂಡ ಕಾಲುಬಾಯಿ ಜ್ವರ: 26 ರಾಸುಗಳು ಸಾವು
ರಾಮನಗರ, ಜೂನ್. 15: ಕಾಲುಬಾಯಿ ಜ್ವರ ರಾಜ್ಯದಲ್ಲೇ ಮೊದಲು ಕಾಣಿಸಿಕೊಂಡಿದ್ದು ರಾಮನಗರ ಜಿಲ್ಲೆಯಲ್ಲಿ 2013 ರಲ್ಲಿ. ಜಿಲ್ಲೆಯಲ್ಲಿ ಕಾಣಿಸಿಕೊಂಡ ಕಾಲುಬಾಯಿ ಜ್ವರಕ್ಕೆ ರಾಮನಗರ ಜಿಲ್ಲೆಯಲ್ಲಿಯೇ 2543 ರಾಸುಗಳು ಸಾವನ್ನಪ್ಪಿದ್ದರೆ, ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ರಾಸುಗಳು ಮಹಾಮಾರಿಗೆ ಬಲಿಯಾಗಿದ್ದವು.
ಇದೀಗ ಮತ್ತೆ ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿಯೇ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಹೈನುಗಾರಿಕೆ ನಂಬಿಕೊಂಡಿರುವ ರೈತರಿಗೆ ಇದೀಗ ಬರಸಿಡಿಲು ಬಡಿದಂತಾಗಿದೆ.
ಜಿಲ್ಲೆಗೆ 5 ವರ್ಷಗಳ ಬಳಿಕ ಮಹಾಮಾರಿ ಕಾಲುಬಾಯಿ ಜ್ವರ ಮತ್ತೆ ಕಾಲಿಟ್ಟಿದ್ದು, ಮೂರು ತಿಂಗಳಲ್ಲೇ 26 ರಾಸುಗಳನ್ನು ಬಲಿತೆಗೆದುಕೊಂಡಿದೆ. ರೈತರ ನಿರ್ಲಕ್ಷ್ಯ ಹಾಗೂ ಪಶು ಇಲಾಖೆಯ ಬೇಜವಬ್ದಾರಿತನಕ್ಕೆ ಇದೀಗ ಮೂಕ ಪ್ರಾಣಿಗಳು ಸಾವನ್ನಪ್ಪುತ್ತಿವೆ. ನೂರಾರು ಹಸುಗಳು ಸೋಂಕಿನಿಂದ ಬಳಲುತ್ತಿವೆ.

ತಾಲೂಕಿನ ಕೂಟಗಲ್, ಹೊಸೂರು, ಜೋಗಿದೊಡ್ಡಿ, ಅರೇಹಳ್ಳಿ, ಕ್ಯಾಸಾಪುರ ಸೇರಿದಂತೆ ನಾನಾ ಗ್ರಾಮಗಳಲ್ಲಿ ಕಾಲುಬಾಯಿ ಜ್ವರ ಆವರಿಸಿದೆ. ಸತತ ಬರದ ನಡುವೆ ಹಾಲಿನ ದರ ಇಳಿಕೆ, ಪ್ರೋತ್ಸಾಹ ಧನ ಕಡಿತ ಸೇರಿದಂತೆ ರೈತರು ನಾನಾ ಬವಣೆಗಳ ನಡುವೆಯೇ ಹೈನೋದ್ಯಮ ಅವಲಂಬಿಸಿದ್ದಾರೆ.
ಬ್ಯಾಕ್ಟೀರಿಯದಿಂದ ಹರಡುವ ರೋಗವಾದ ಎಚ್ಎಸ್ ಸಾಮಾನ್ಯವಾಗಿ ಮಳೆಗಾಲದಲ್ಲಿ ಕಾಡುತ್ತದೆ. ಅದರೊಟ್ಟಿಗೆ ವೈರಾಣುಗಳಿಂದ ಬರುವ ಕಾಲುಬಾಯಿ ಜ್ವರವೂ ಆವರಿಸಿಕೊಂಡರೆ, ನಿಯಂತ್ರಣಕ್ಕೆ ತರುವುದು ಕಷ್ಟಸಾಧ್ಯ.

ಕಳೆದ ಮಾರ್ಚ್ ತಿಂಗಳಿನಿಂದಲೇ ಕಾಲುಬಾಯಿ ರೋಗ ಕಾಣಿಸಿಕೊಂಡಿದ್ದರೂ ಸಹ ರೈತರಲ್ಲಿ ಜಾಗೃತಿ ಮೂಡಿಸುವಲ್ಲಿ ಪಶು ಸಂಗೋಪನಾ ಇಲಾಖೆ ಹಾಗೂ ಬಮೂಲ್ ಆಡಳಿತ ವಿಫಲವಾಗಿದೆ.
ರೈತರು ಹಸುವಿಗೆ ವ್ಯಾಕ್ಸಿನೇಷನ್ ಹಾಕಿಸುವುದರಿಂದ ಹಾಲಿನಲ್ಲಿ ಇಳಿಕೆಯಾಗುವುದರಿಂದ ರೈತರು ಸರಿಯಾಗಿ ಚಿಕಿತ್ಸೆ ಕೊಡಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.

ಇನ್ನಾದರೂ ಪಶು ಇಲಾಖೆ ಅಧಿಕಾರಿಗಳು ಮೃತ ರಾಸುಗಳ ಮಾಲೀಕರಿಗೆ ಪರಿಹಾರ, ಕಾಲುಬಾಯಿ ಜ್ವರಬಾಧೆ ನಿಯಂತ್ರಣ ಮತ್ತು ಲಸಿಕೆ ನೀಡುವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications