ಬಾಟಲಿ ಬಡಿದಾಟ ಪ್ರಕರಣ: ಕಟಕಟೆಯಲ್ಲಿ ಕಂಪ್ಲಿ ಗಣೇಶ್!
ರಾಮನಗರ, ನವೆಂಬರ್.14: ಬಾಟಲಿ ಬಡಿದಾಟ ಪ್ರಕರಣ ಅಂದಾಕ್ಷಣ ಥಟ್ ರಾಜ್ಯದ ಜನರಿಗೆ ಅಂತಾ ನೆನಪಿಗೆ ಬರುವುದೇ ಈಗಲ್ ಟನ್ ರೆಸಾರ್ಟ್. ಅಂದು ಜನರಿಂದ ಜನರಿಗಾಗಿ ಜನರಿಕೋಸ್ಕರ ಆಯ್ಕೆಯಾದ ಜನಪ್ರತಿನಿಧಿಗಳು ಗೂಂಡಾಗಳಂತೆ ಬಾಟಲಿ ಹಿಡಿದು ಬಡಿದಾಡಿಕೊಂಡಿದ್ದರು.
ಈ ಪ್ರಕರಣ ಇಡೀ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮಟ್ಟದಲ್ಲೂ ಸಖತ್ ಸುದ್ದಿಯಾಗಿತ್ತು. ಈ ಇಬ್ಬರು ನಾಯಕರು ಒಂದೇ ಜಿಲ್ಲೆಯವರೇ ಆಗಿದ್ದು, ಒಂದಾನೊಂದು ಕಾಲದಲ್ಲಿ ಕೈ ಕುಲಾಯಿಸುತ್ತಿದ್ದರು. ಆದರೆ, ಅದೊಂದು ರಾತ್ರಿ ಮಾತ್ರ ಕೈ ಕೈ ಮಿಲಾಯಿಸಿ ಬಿಟ್ಟಿದ್ದರು.
ಜಾಸ್ತಿ ಹೇಳೋದೇನು ಬೇಡ. ಆ ಇಬ್ಬರು ನಾಯಕರು ಮತ್ಯಾರೂ ಅಲ್ಲ. ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಗಣೇಶ್ ಹಾಗೂ ವಿಜಯನಗರ ಕ್ಷೇತ್ರದ ಈಗಿನ ಅನರ್ಹ ಶಾಸಕ ಆನಂದ್ ಸಿಂಗ್. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಇಬ್ಬರು ನಾಯಕರು ಬಾಟಲಿ ಹಿಡಿದು ಬಡಿದಾಡಿಕೊಂಡಿದ್ದರು.

ಕೋರ್ಟ್ ಕಟಕಟೆಯಲ್ಲಿ ಕಂಪ್ಲಿ ಗಣೇಶ್:
ಹೌದು, ಅನರ್ಹ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಶಾಸಕ ಕಂಪ್ಲಿ ಗಣೇಶ್ ಇಂದು ಕೋರ್ಟ್ ರಾಮನಗರದ ಸಿಜೆಎಂ ಕೋರ್ಟ್ ಗೆ ಹಾಜರಾಗಿದ್ದರು. ಶಾಸಕರನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಕುಲಕರ್ಣಿ ನರಹರಿ, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ವಿಚಾರಣೆಯನ್ನು ವರ್ಗಾವಣೆಗೊಳಿಸಿದರು.
ಕಳೆದ ಜನವರಿ.19ರಂದು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಶಾಸಕರು ಬಡಿದಾಡಿಕೊಂಡಿದ್ದರು. ಇದರಿಂದ ಆನಂದ್ ಸಿಂಗ್ ಕಣ್ಣಿಗೆ ಗಂಭೀರವಾದ ಗಾಯವಾಗಿತ್ತು. ಅಂದು ತಮ್ಮ ಶಿಷ್ಯ ಕಂಪ್ಲಿ ಗಣೇಶ್ ವಿರುದ್ಧವೇ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ಕೇಸ್ ಜಡಿದಿದ್ದರು. ಈ ಪ್ರಕರಣವನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾವಣೆಗೊಳಿಸಲಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications