ಬಾಟಲಿ ಬಡಿದಾಟ ಪ್ರಕರಣ: ಕಟಕಟೆಯಲ್ಲಿ ಕಂಪ್ಲಿ ಗಣೇಶ್!
ರಾಮನಗರ, ನವೆಂಬರ್.14: ಬಾಟಲಿ ಬಡಿದಾಟ ಪ್ರಕರಣ ಅಂದಾಕ್ಷಣ ಥಟ್ ರಾಜ್ಯದ ಜನರಿಗೆ ಅಂತಾ ನೆನಪಿಗೆ ಬರುವುದೇ ಈಗಲ್ ಟನ್ ರೆಸಾರ್ಟ್. ಅಂದು ಜನರಿಂದ ಜನರಿಗಾಗಿ ಜನರಿಕೋಸ್ಕರ ಆಯ್ಕೆಯಾದ ಜನಪ್ರತಿನಿಧಿಗಳು ಗೂಂಡಾಗಳಂತೆ ಬಾಟಲಿ ಹಿಡಿದು ಬಡಿದಾಡಿಕೊಂಡಿದ್ದರು.
ಈ ಪ್ರಕರಣ ಇಡೀ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮಟ್ಟದಲ್ಲೂ ಸಖತ್ ಸುದ್ದಿಯಾಗಿತ್ತು. ಈ ಇಬ್ಬರು ನಾಯಕರು ಒಂದೇ ಜಿಲ್ಲೆಯವರೇ ಆಗಿದ್ದು, ಒಂದಾನೊಂದು ಕಾಲದಲ್ಲಿ ಕೈ ಕುಲಾಯಿಸುತ್ತಿದ್ದರು. ಆದರೆ, ಅದೊಂದು ರಾತ್ರಿ ಮಾತ್ರ ಕೈ ಕೈ ಮಿಲಾಯಿಸಿ ಬಿಟ್ಟಿದ್ದರು.
ಜಾಸ್ತಿ ಹೇಳೋದೇನು ಬೇಡ. ಆ ಇಬ್ಬರು ನಾಯಕರು ಮತ್ಯಾರೂ ಅಲ್ಲ. ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಗಣೇಶ್ ಹಾಗೂ ವಿಜಯನಗರ ಕ್ಷೇತ್ರದ ಈಗಿನ ಅನರ್ಹ ಶಾಸಕ ಆನಂದ್ ಸಿಂಗ್. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಇಬ್ಬರು ನಾಯಕರು ಬಾಟಲಿ ಹಿಡಿದು ಬಡಿದಾಡಿಕೊಂಡಿದ್ದರು.

ಕೋರ್ಟ್ ಕಟಕಟೆಯಲ್ಲಿ ಕಂಪ್ಲಿ ಗಣೇಶ್:
ಹೌದು, ಅನರ್ಹ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಶಾಸಕ ಕಂಪ್ಲಿ ಗಣೇಶ್ ಇಂದು ಕೋರ್ಟ್ ರಾಮನಗರದ ಸಿಜೆಎಂ ಕೋರ್ಟ್ ಗೆ ಹಾಜರಾಗಿದ್ದರು. ಶಾಸಕರನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಕುಲಕರ್ಣಿ ನರಹರಿ, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ವಿಚಾರಣೆಯನ್ನು ವರ್ಗಾವಣೆಗೊಳಿಸಿದರು.
ಕಳೆದ ಜನವರಿ.19ರಂದು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಶಾಸಕರು ಬಡಿದಾಡಿಕೊಂಡಿದ್ದರು. ಇದರಿಂದ ಆನಂದ್ ಸಿಂಗ್ ಕಣ್ಣಿಗೆ ಗಂಭೀರವಾದ ಗಾಯವಾಗಿತ್ತು. ಅಂದು ತಮ್ಮ ಶಿಷ್ಯ ಕಂಪ್ಲಿ ಗಣೇಶ್ ವಿರುದ್ಧವೇ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ಕೇಸ್ ಜಡಿದಿದ್ದರು. ಈ ಪ್ರಕರಣವನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾವಣೆಗೊಳಿಸಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications