ಕನಕಪುರ: KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ, 6 ಜನ ಸಾವು
ರಾಮನಗರ, ಆಗಸ್ಟ್, 28: ಸಾರಿಗೆ (KSRTC) ಬಸ್ ಮತ್ತು ಕ್ವಾಲೀಸ್ ಕಾರ್ ನಡುವೆ ಭೀಕರ ಅಪಘಾತ ಸಂಭವಿಸದ ಘಟನೆ ಕನಕಪುರ ತಾಲೂಕಿನ ಸಾತನೂರು ಬಳಿಯ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.
ಸಾತನೂರು ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ KA-42-F-1745 ನಂಬರ್ನ ಕೆಎಸ್ಆರ್ಟಿಸಿ ಬಸ್ ಮತ್ತು KA-01-MF-8055 ನಂಬರ್ನ ಕ್ವಾಲೀಸ್ ವಾಹನದ ನಡುವೇ ಬೀಕರ ಅಪಘಾತವಾಗಿದ್ದು, ಈ ವೇಳೆ ಕ್ವಾಲೀಸ್ ವಾಹನದಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗೇಶ್, ಪುಟ್ಟರಾಜು, ಜೋತಿರ್ಲಿಂಗಪ್ಪ (ಕಾರು ಮಾಲೀಕ), ಗೋವಿಂದ, ಕುಮಾರ್, ಮತ್ತೊಬ್ಬರ ಮೃತರ ಹೆಸರು ತಿಳಿದುಬಂದಿಲ್ಲ.ಅಪಘಾತದಲ್ಲಿ ಮೃತರಾದವರನ್ನು ಬೆಂಗಳೂರಿನ ಚಂದಾಪುರ ನಿವಾಸಿಗಳು ಎಂದು ಗುರುತಿಸಲಾಗಿದೆ.

ಮತ್ತೊಂದೆಡೆ ಕೆಎಸ್ಆರ್ಟಿಸಿ ಬಸ್ನಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದರೆ, ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. 6 ಜನ ಸ್ನೇಹಿತರು ಟೊಯೋಟೊ ಕ್ವಾಲಿಸ್ ವಾಹನದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗಿ ದರ್ಶನ ಮುಗಿಸಿ ಸಂಜೆ 05.10 ಗಂಟೆ ಸಮಯದಲ್ಲಿ ವಾಪಾಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರರು ದೌಡಾಯಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ.












Click it and Unblock the Notifications