Get Updates
Get notified of breaking news, exclusive insights, and must-see stories!

ಮಾಗಡಿ: ಕನ್ನಡ ನುಡಿ ಜಾತ್ರೆಗೆ ಸಜ್ಜಾದ ಗುಡ್ಡದ ರಂಗನಾಥ ಸ್ವಾಮಿ ಬೆಟ್ಟ

ಕನ್ನಡ ಸಾಹಿತ್ಯ ಪರಿಷತ್‌ನ ಮಾಗಡಿ ತಾಲ್ಲೂಕು ಘಟಕದಿಂದ ಇಲ್ಲಿನ ಮಾದಿಗೊಂಡನಹಳ್ಳಿ ಗುಡ್ಡದ ರಂಗನಾಥ ಸ್ವಾಮಿ ಬೆಟ್ಟದಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮಾರ್ಚ್‌ 6ರಂದು ಈ ಸಮ್ಮೇಳನ ನಡೆಯಲಿದ್ದು, ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಅಧ್ಯಕ್ಷ ಪದ್ಮನಾಭ್ ಅವರು ಗುಡ್ಡದ ರಂಗನಾಥಸ್ವಾಮಿ ಬೆಟ್ಟದಲ್ಲಿ ಸಮ್ಮೇಳನಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಮಾಗಡಿ ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಕನ್ನಡ ನುಡಿ ಜಾತ್ರೆಗೆ ಎಲ್ಲ ಸಿದ್ಧತೆ ನಡೆದಿದೆ. ಮಾರ್ಚ್‌ 6ರಂದು ಬೆಳಿಗ್ಗೆ ತಹಶೀಲ್ದಾರ್ ಶರತ್ ಕುಮಾರ್ ಅವರು ಧ್ವಜಾರೋಹಣದ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಕೊಡಲಿದ್ದಾರೆ. ಬಳಿಕ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಅಂಬೇಡ್ಕರ್ ವಸತಿ ಶಾಲೆಯಿಂದ ಬೆಟ್ಟದವರೆಗೂ ಭುವನೇಶ್ವರಿ ದೇವಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳು ಹಾಗೂ ಕನ್ನಡ ಜಾನಪದ ಕಲಾತಂಡಗಳು ಈ ಅದ್ಧೂರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.

Kannada Sahitya Sammelana To Be Held On March 6 At Magadi Ranganathaswamy Betta

ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ. ಸಿದ್ಧಗಂಗಾ ಮಠಾಧೀಶರಾದ ಸಿದ್ಧಲಿಂಗ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ಶುರುವಾಗಲಿದೆ. ಶಾಸಕರಾದ ಎಚ್.ಸಿ.ಬಾಲಕೃಷ್ಣ, ಮಹೇಶ್ ಜೋಶಿ, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಥಟ್ ಅಂತ ಹೇಳಿ ಕಾರ್ಯಕ್ರಮದ ಖ್ಯಾತ ನಿರೂಪಕ ನಾ.ಸೋಮೇಶ್ವರ ರಾವ್ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಗಡಿ ತಾಲ್ಲೂಕಿನ ಕವಿಗಳು ಬರೆದಿರುವ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು. ಸ್ಮರಣೆ ಸಂಚಿಕೆ ಬಿಡುಗಡೆ ಹಾಗೂ ಪುಸ್ತಕ ಮಳಿಗೆ ಉದ್ಘಾಟನೆಯೂ ಇರಲಿದೆ ಎಂದು ಹೇಳಿದ್ದಾರೆ.

Kannada Sahitya Sammelana To Be Held On March 6 At Magadi Ranganathaswamy Betta

ಈ ಕಾರ್ಯಕ್ರಮದಲ್ಲಿ ಸೋಲೂರು ಕುದೂರು ಹೋಬಳಿಯ ವಿದ್ಯಾರ್ಥಿಗಳು ವೀರಗಾಸೆ ಕಂಸಾಳೆ ಸೋಮನ ಕುಣಿತ ಸೇರಿದಂತೆ ಜಾನಪದ ಕಲಾ ಪ್ರದರ್ಶನ ಮಾಡಲಿದ್ದಾರೆ. ಮಾಗಡಿಯಿಂದ ಬೆಳಗ್ಗೆ 8 ಗಂಟೆಗೆ ಗುಡ್ಡದ ರಂಗನಾಥ ಸ್ವಾಮಿ ದೇವಾಲಯಕ್ಕೆ ಬಸ್ ವ್ಯವಸ್ಥೆ ಕೂಡ ಇರಲಿದೆ. ಸೋಲೂರು ಕುದೂರು ಹೋಬಳಿ ಕೇಂದ್ರದಿಂದ ಗುಡ್ಡದ ರಂಗನಾಥ ಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ 10.30ಕ್ಕೆ ಬಸ್ ಹೊರಡಲಿದೆ. ಸಮಾರೋಪ ಸಮಾರಂಭಕ್ಕೂ ಸಂಜೆ 4 ಗಂಟೆಯಿಂದ ಬಸ್ ವ್ಯಸಸ್ಥೆ ಇರಲಿದೆ.

ಸಂಜೆ ನಡೆಯುವ ಸಮಾರೋಪದಲ್ಲಿ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ಸಮಾರೋಪ ಭಾಷಣ ಮಾಡಲಿದ್ದು, ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸಂಸದರಾದ ಡಾ.ಸಿ.ಎನ್. ಮಂಜುನಾಥ್, ಶಾಸಕ ಅಶ್ವತ್ಥ್ ನಾರಾಯಣ್, ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕರ ಪುತ್ರ ಸೇರಿದಂತೆ ಹಲವರಿಗೆ ಸನ್ಮಾನ ಕೂಡ ಇರಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+