ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆಗಿದ್ದು ಇಷ್ಟು, ಇಲ್ಲಿದೆ ವಿವರ
ರಾಮನಗರ, ಮೇ, 11: ಮೇ 10ರಂದು ವಿಧಾನಸಭೆ ಚುನಾವಣೆಯ ಮತದಾನ ನಡೆದಿದ್ದು, ಹಾಗಾದರೆ ರಾಮನಗರ ಜಿಲ್ಲೆಯ ಒಟ್ಟು 4 ವಿಧಾನಸಭೆ ಕ್ಷೇತ್ರಗಳಲ್ಲಿ ಎಷ್ಟು ಮತದಾನ ಆಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮತದಾರ ಅಭ್ಯರ್ಥಿಗಳ ಭವಿಷ್ಯವನ್ನು ಮತಪಟ್ಟಿಗೆಯಲ್ಲಿ ಭದ್ರ ಮಾಡಿದ್ದಾನೆ. ರಾಮನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಜನಪದ ಲೋಕದ ಬಳಿ ಇರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಪೆಟ್ಟಿಗಳನ್ನು ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಕಳೆದ ದಿನ ನಡೆದ ಚುನಾವಣಯಲ್ಲಿ ಜಿಲ್ಲೆಯಲ್ಲಿ ಶೇಕಡಾ 85.04 ರಷ್ಟು ಮತದಾನ ನಡೆದಿದ್ದು, ಒಟ್ಟು 7,69,338 ಮತದಾರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇದರಲ್ಲಿ 3,82,580 ಪುರುಷ ಮತದಾರರು, 3,85,674 ಮಹಿಳಾ ಮತದಾರರು ಹಾಗೂ 21 ಇತರೆ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಮತಪೆಟ್ಟಿಗೆಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್ ಸುತ್ತಲು ಪ್ಯಾರಾಮಿಲಟರಿ ಪಡೆ ಜೊತೆಗೆ ಪೊಲೀಸ್ ಅಧಿಕಾರಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇನ್ನು ಮೇ 13, ಶನಿವಾರದಂದು ಮತ ಏಣಿಕೆ ನಡೆಯಲಿದ್ದು, ಅಲ್ಲಿಯವರೆಗೆ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಎನ್ನುತ್ತಲೇ ಇರುತ್ತದೆ.
ಜಿಲ್ಲೆಯ 4 ಕ್ಷೇತ್ರಗಳ ಮತದಾನ ಆಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮಾಗಡಿ ವಿಧಾನಸಭಾ ಕ್ಷೇತ್ರ
ಕ್ಷೇತ್ರದದಲ್ಲಿ ಒಟ್ಟು 2,33,358 ಜನ ಮತದಾರರಿದ್ದಾರೆ. ಇದರಲ್ಲಿ ಪುರುಷರು-1,00988, ಮಹಿಳೆಯರು-1,00117 ಜನ, ಮತ್ತು ಇತರೆ 6 ಜನ ಇದ್ದಾರೆ.
ಒಟ್ಟು 2,01,111 ಜನ ಮತದಾನ ಮಾಡಿದ್ದು, ಶೇಕಡವಾರು 86.18% ಜನ ಮತದಾನ ಮಾಡಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರ
ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ: 2,16,061
ಪುರುಷರು: 90416
ಮಹಿಳೆಯರು: 90210
ಇತರೆ: 6
ಒಟ್ಟು ಮತದಾನ: 1,81,695 (ಶೇಕಡಾ 84.89%)
ಕನಕಪುರ ವಿಧಾನಸಭಾ ಕ್ಷೇತ್ರ
ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ: 224956
ಪುರುಷರು: 95,015
ಮಹಿಳೆಯರು: 95,107
ಇತರೆ: 2
ಒಟ್ಟು ಮತದಾನ: 1,90,124 (ಶೇಕಡಾ 85.58%)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಒಟ್ಟು ಮತದಾರರ ಸಂಖ್ಯೆ: 2,30,327
ಪುರುಷರು: 96,161
ಮಹಿಳೆಯರು: 1,00240
ಇತರರ: 7
ಒಟ್ಟು ಮತದಾನ: 1,96,408 (ಶೇಕಡಾ 86.22%)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications